ಏಷ್ಯನ್ ಕಬಡ್ಡಿ ಚಾಂಪಿಯನ್ಶಿಪ್ 2023; ಬಲಿಷ್ಠ ಭಾರತ ತಂಡ ಪ್ರಕಟ; ನವೀನ್-ಪವನ್ ಜುಗಲ್ಬಂದಿ
ದಕ್ಷಿಣ ಕೊರಿಯಾದ ಬೂಸಾನ್ನಲ್ಲಿ ಜೂನ್ 27ರಿಂದ ಜೂನ್ 30 ರವರೆಗೆ ನಡೆಯಲಿರುವ 2023ರ ಏಷ್ಯನ್ ಕಬಡ್ಡಿ ಚಾಂಪಿಯನ್ಶಿಪ್ ಟೂರ್ನಿಗೆ ಭಾರತೀಯ ಅಮೆಚೂರ್ ಕಬಡ್ಡಿ ಫೆಡರೇಶನ್ (ಎಕೆಎಫ್ಐ) 12 ಸದಸ್ಯರ ಬಲಿಷ್ಠ ತಂಡವನ್ನು ಬುಧವಾರ (ಮೇ 24) ಪ್ರಕಟಿಟಿದೆ.
ಬಿಹಾರದ ಪಾಟ್ನಾದಲ್ಲಿ ನಡೆದ ತರಬೇತಿ ಶಿಬಿರದ ಬಳಿಕ ಭಾರತೀಯ ತಂಡದ ಆಯ್ಕೆ ನಡೆದಿದೆ. ಸ್ಟಾರ್ ರೈಡರ್ಗಳಾದ ನವೀನ್ ಕುಮಾರ್ ಮತ್ತು ಪವನ್ ಶೆರಾವತ್ ಭಾರತ ಕಬಡ್ಡಿ ತಂಡದ ನೇತೃತ್ವ ವಹಿಸಲಿದ್ದಾರೆ.

6 ವರ್ಷಗಳ ನಂತರ ಏಷ್ಯನ್ ಕಬಡ್ಡಿ ಚಾಂಪಿಯನ್ಶಿಪ್ ಆಯೋಜನೆಗೊಂಡಿದ್ದು, ಈ ಬಾರಿ ಭಾರತ ತಂಡ ಅನುಭವಿ ಹಾಗೂ ಯುವ ಆಟಗಾರರಿಂದ ಕೂಡಿದ್ದು, ಚಾಂಪಿಯನ್ ಪಟ್ಟಕ್ಕೇರುವ ಗುರಿ ಹೊಂದಿದೆ.
ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ರೈಡಿಂಗ್ ಅಂಕಗಳನ್ನು ಗಳಿಸಿರುವ ಅನುಭವಿ ಆಟಗಾರ ಪ್ರದೀಪ್ ನರ್ವಾಲ್ ಅವರು ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಭಾರತ ತಂಡದ ಮಾಜಿ ನಾಯಕ ಹಾಗೂ ಅನುಭವಿ ಆಲ್ರೌಂಡರ್ ದೀಪಕ್ ಹೂಡಾ ಅವರು ಕೂಡ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಹಿರಿಯ ಆಟಗಾರರಾದ ಸುರೇಂದರ್ ಗಿಲ್, ಸುರೇಂದರ್ ನಾಡಾ, ಗಿರೀಶ್ ಮಾರುತಿ ಎರ್ನಾಕ್, ಸಿದ್ದಾರ್ಥ್ ದೇಸಾಯಿ, ಮಣೀಂದರ್ ಸಿಂಗ್, ರವೀಂದರ್ ಪೆಹಲ್ ಹಾಗೂ ಮಹೇಂದರ್ ಸಿಂಗ್ ಅವರು ಕೂಡ ಭಾರತ ತಂಡದಿಂದ ಹೊರ ಬಿದ್ದಿದ್ದಾರೆ.

9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಅತ್ಯುತ್ತಮ ರೈಡಿಂಗ್ ಪ್ರದರ್ಶನ ನೀಡಿದ್ದ ಅರ್ಜುನ್ ದಢಸ್ವಾಲ್ ಅವರು ಏಷ್ಯನ್ ಕಬಡ್ಡಿ ಟೂರ್ನಿಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಡೆಲ್ಲಿ ಎಕ್ಸ್ಪ್ರೆಸ್ ನವೀನ್ ಕುಮಾರ್ ಹಾಗೂ ಪವನ್ ಶೆರಾವತ್ ಒಟ್ಟುಗೂಡಿದ್ದು, ಭಾರತ ತಂಡ ಚಾಂಪಿಯನ್ ಆಗುವ ಕನಸನ್ನು ಇಮ್ಮಡಿಗೊಳಿಸಿದೆ.
ಈವರೆಗಿನ ಏಷ್ಯನ್ ಕಬಡ್ಡಿ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಭಾರತ ತಂಡ ಅತ್ಯಂತ ಯಶಸ್ವಿ ತಂಡವಾಗಿದೆ. 8 ಏಷ್ನ್ ಕಬಡ್ಡಿ ಚಾಂಪಿಯನ್ಶಿಪ್ ಟೂರ್ನಿಗಳು ನಡೆದಿದ್ದು, ಭಾರತ ತಂಡ 7 ಬಾರಿಗೆ ಚಿನ್ನದ ಪದಕಗಳನ್ನು ಗೆದ್ದುಕೊಂಡಿದೆ.
2017ರಲ್ಲಿ ಕೊನೆಯ ಬಾರಿಗೆ ಇರಾನ್ನ ಗೋರ್ಗೊನ್ನಲ್ಲಿ ಏಷ್ಯನ್ ಕಬಡ್ಡಿ ಚಂಆಪಿಯನ್ಶಿಪ್ ನಡೆದಾಗ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿ ಭಾರತ ತಂಡ 7 ಬಾರಿಗೆ ಚಾಂಪಿಯನ್ ಆಗಿತ್ತು.
ಏಷ್ಯನ್ ಕಬಡ್ಡಿ ಚಾಂಪಿಯನ್ಶಿಪ್ಗೆ ಭಾರತ ತಂಡ
ಪವನ್ ಶೆರಾವತ್, ನವೀನ್ ಕುಮಾರ್, ಸಚಿನ್, ಅರ್ಜುನ್ ದೇಸ್ವಾಲ್, ಮೋಹಿತ್ ಗೋಯತ್, ಅಸ್ಲಾಂ ಇನಾಂದಾರ್, ಸುನಿಲ್ ಕುಮಾರ್, ನಿತಿನ್ ರಾವಲ್, ಪರ್ವೇಶ್ ಬೈನ್ಸ್ವಾಲ್, ವಿಶಾಲ್ ಭಾರದ್ವಾಜ್, ನಿತೀಶ್ ಕುಮಾರ್, ಸುರ್ಜೀತ್ ಸಿಂಗ್.
ಸ್ಟ್ಯಾಂಡ್ಬೈ ಆಟಗಾರರು: ವಿಜಯ್ ಮಲಿಕ್, ಶುಭಂ ಶಿಂಧೆ
ಪ್ರೊ ಕಬಡ್ಡಿ ಲೀಗ್: ದಬಾಂಗ್ ಡೆಲ್ಲಿ ತಂಡಕ್ಕೆ ಅಜಯ್ ಕುಮಾರ್ ಠಾಕೂರ್ ಕೋಚ್
10ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ಗೆ ಕೆಲವೇ ದಿನಗಳಲ್ಲಿ ಚಾಲನೆ ಸಿಗಲಿದ್ದು, ಮಾಜಿ ಚಾಂಪಿಯನ್ ದಬಾಂಗ್ ಡೆಲ್ಲಿ ತಂಡಕ್ಕೆ ನೂತನ ಸಹಾಯಕ ಕೋಚ್ ಆಗಿ ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಅಜಯ್ ಕುಮಾರ್ ಠಾಕೂರ್ ನೇಮಕಗೊಂಡಿದ್ದಾರೆ.
ಅಜಯ್ ಕುಮಾರ್ ಠಾಕೂರ್ ಅವರು ಪ್ರೊ ಕಬಡ್ಡಿ ಲೀಗ್ನಲ್ಲಿ ಬೆಂಗಳೂರು ಬುಲ್ಸ್, ಪುಣೆ ಪಲ್ಟಾನ್, ತಮಿಳ್ ತಲೈವಾಸ್, ದಬಂಗ್ ಡೆಲ್ಲಿ ತಂಡಗಳ ಪರ ಆಡಿದ್ದಾರೆ. 2016ರಲ್ಲಿ ವಿಶ್ವಕಪ್ ಕಬಡ್ಡಿ ವಿಜೇತ ಭಾರತ ತಂಡದ ಸದಸ್ಯರಾಗಿದ್ದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications