ODI World Cup: ಐಸಿಸಿ, ಬಿಸಿಸಿಐಗೆ ಮತ್ತೆ ತಲೆನೋವು: ಏಕದಿನ ವಿಶ್ವಕಪ್ ವೇಳಾಪಟ್ಟಿ ಬದಲಾವಣೆಗೆ ಮನವಿ
10 ವರ್ಷಗಳ ಬಳಿಕ ಭಾರತದಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯುತ್ತಿದೆ. ಬಿಸಿಸಿಐ ಈ ಮಹತ್ವದ ಪಂದ್ಯಾವಳಿಯನ್ನು ಯಶಸ್ವಿಯಾಗಿಸಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೂ, ವಿಶ್ವಕಪ್ ವೇಳಾಪಟ್ಟಿ ಘೋಷಣೆ ಮಾಡಿದಾಗಿನಿಂದ ಒಂದಲ್ಲ ಒಂದು ಅಡೆತಡೆಗಳು ಬರುತ್ತಿವೆ. ನವರಾತ್ರಿ ಕಾರಣ ಈಗಾಗಲೇ 9 ಪಂದ್ಯಗಳ ದಿನಾಂಕವನ್ನು ಬದಲಾವಣೆ ಮಾಡಿದೆ. ಈಗ ಮತ್ತೆ ವೇಳಾಪಟ್ಟಿ ಬದಲಾವಣೆ ಮಾಡುವಂತೆ ಮನವಿ ಬಂದಿದ್ದು, ಬಿಸಿಸಿಐ, ಐಸಿಸಿಗೆ ತಲೆನೋವಾಗಿದೆ.
ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (HCA) ವೇಳಾಪಟ್ಟಿ ಬದಲಾವಣೆಗೆ ಮನವಿ ಮಾಡಿದೆ. ಟಿಕೆಟ್ ಮಾರಾಟಕ್ಕೆ ಒಂದು ವಾರ ಮಾತ್ರ ಉಳಿದಿರುವಾಗ ಈ ಬೇಡಿಕೆ ಇಟ್ಟಿದೆ. ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿರುವ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇದೀಗ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್ಸಿಎ) ಯಿಂದ ಎರಡು ಪಂದ್ಯಗಳ ನಡುವೆ ವಿರಾಮವನ್ನು ಕೋರುವ ಪತ್ರವನ್ನು ಸ್ವೀಕರಿಸಿದೆ. ಎರಡು ಪಂದ್ಯಗಳು ಎರಡು ದಿನಗಳಲ್ಲಿ ನಡೆಯಲಿದೆ.

ಉಪ್ಪಾಳದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 9ರಂದು ನ್ಯೂಜಿಲೆಂಡ್ Vs ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಅಕ್ಟೋಬರ್ 10ರಂದು ಪಾಕಿಸ್ತಾನ-ಶ್ರೀಲಂಕಾ ನಡುವೆ ನಡೆಯಲಿದೆ. ಈಗ ಒಂದು ಪಂದ್ಯದ ದಿನಾಂಕ ಬದಲಿಸುವಂತೆ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಮನವಿ ಮಾಡಿದೆ. ಅಕ್ಟೋಬರ್ 6 ರಂದು ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ಆಡಲಿವೆ.
ಭದ್ರತೆ ಬಗ್ಗೆ ಪೊಲೀಸರಿಗೆ ಆತಂಕ
ಎರಡು ದಿನ ಸತತವಾಗಿ ಪಂದ್ಯಗಳು ನಡೆಯುವ ಕಾರಣ, ವಿಶೇಷವಾಗಿ ಪಾಕಿಸ್ತಾನದ ಪಂದ್ಯಗಳಿಗೆ ಭದ್ರತೆಯನ್ನು ಒದಗಿಸುವ ಬಗ್ಗೆ ಹೈದರಾಬಾದ್ ಪೊಲೀಸರು ಕಳವಳ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ನ ಮೂಲ ವೇಳಾಪಟ್ಟಿಯನ್ನು ಪಂದ್ಯಾವಳಿ ಆರಂಭಕ್ಕೆ 100 ದಿನಗಳ ಮೊದಲು ಬಿಡುಗಡೆ ಮಾಡಲಾಯಿತು.
ಒಂಬತ್ತು ಪಂದ್ಯಗಳ ದಿನಾಂಕ ಬದಲಾವಣೆ ಮಾಡುವ ಮೂಲಕ ಈಗಾಗಲೇ ಏಕದಿನ ವಿಶ್ವಕಪ್ 2023 ರ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ - ಪಾಕಿಸ್ತಾನ ಪಂದ್ಯ ನಡೆಯಬೇಕಿತ್ತು, ಅಂದು ನವರಾತ್ರಿಯ ಮೊದಲ ದಿನ ಆದ ಕಾರಣ ಭದ್ರತೆಯ ಸಮಸ್ಯೆಯಿಂದ ಅಕ್ಟೋಬರ್ 14ಕ್ಕೆ ನಿಗದಿ ಮಾಡಲಾಗಿದೆ.
ಪಾಕಿಸ್ತಾನ ಮತ್ತು ಇಂಗ್ಲೆಂಡ್ ಪಂದ್ಯವನ್ನು ಕೋಲ್ಕತ್ತಾದಲ್ಲಿ ನವೆಂಬರ್ 12 ರಂದು ನಡೆಯಲು ಯೋಜಿಸಲಾಗಿತ್ತು, ಅದೇ ದಿನ ಕಾಳಿ ಪೂಜೆ, ಮಹತ್ವದ ಬಂಗಾಳಿ ಹಬ್ಬ. ಈ ಪಂದ್ಯವನ್ನು ಪ್ರಸ್ತುತ ನವೆಂಬರ್ 11 ರಂದು ನಿಗದಿಪಡಿಸಲಾಗಿದೆ. ಈ ಎರಡು ಬದಲಾವಣೆ ಪರಿಣಾಮ ಇತರೆ ಪಂದ್ಯಗಳ ದಿನಾಂಕದಲ್ಲೂ ಬದಲಾವಣೆ ಮಾಡಲಾಗಿದೆ.
ಪಂದ್ಯಗಳ ನಡುವೆ ಪ್ರಯಾಣ, ವಿಶ್ರಾಂತಿ ಮತ್ತು ತರಬೇತಿಯನ್ನು ಅನುಮತಿಸುವ ಸಲುವಾಗಿ, ತಂಡಗಳು ಪಂದ್ಯಗಳ ನಡುವೆ ನಿಗದಿತ ಅಂತರವನ್ನು ಹೊಂದುವುದನ್ನು ಖಚಿತಪಡಿಸಿಕೊಳ್ಳಲು ಹೊಂದಾಣಿಕೆಗಳು ಸಹ ಅಗತ್ಯವಾಗಿವೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications