ಭಾರತ ಟೆಸ್ಟ್ ಕ್ರಿಕೆಟ್ಗೆ ನೂತನ ನಾಯಕ ಆಯ್ಕೆ
India's Test Cricket New Captain: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ಭಾರತದ ತಂಡ ಹಾಗೂ ನೂತನ ನಾಯಕ, ಉಪನಾಯಕನನ್ನು ಸಹ ಪ್ರಕಟಿಸಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ಇಂದು ಭಾರತ ತಂಡ ಹಾಗೂ ನೂತನ ನಾಯಕನನ್ನು ಸಹ ಪ್ರಕಟ ಮಾಡಿದೆ. ಅಜಿತ್ ಅಗರ್ಕರ್ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ಮುಂದಿನ ತಿಂಗಳು ಭಾರತ-ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

ಟೆಸ್ಟ್ ಕ್ರಿಕೆಟ್ಗೆ ಹೊಸ ನಾಯಕ: ಇತ್ತೀಚೆಗಷ್ಟೇ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಿದ್ದರು. ಬಳಿಕ ವಿರಾಟ್ ಕೊಹ್ಲಿ ಅವರು ಸಹ ಈ ಮಾದರಿ ಕ್ರಿಕೆಟ್ಗೆ ದಿಢೀರ್ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್ ಹೊಸ ನಾಯಕ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆಗಳು ಎದ್ದಿದ್ದು, ಇದಕ್ಕೆ ಇದೀಗ ಉತ್ತರ ಸಿಕ್ಕಂತಾಗಿದೆ.
ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ನಾಯಕನಾಗಿ 25 ವರ್ಷದ ಶುಭಮನ್ ಗಿಲ್, ಉಪನಾಯಕನಾಗಿ ರಿಷಬ್ ಪಂತ್ ಅರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ನಾಯಕ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆಗಳಿಗೆ ತೆರೆ ಎಳೆಯುವ ಕೆಲಸವನ್ನು ಬಿಸಿಸಿಐ ಮಾಡಿದೆ. ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರು ಜಂಟಿ ಪ್ರತ್ರಿಕಾಗೋಷ್ಠಿ ನಡೆಸಿ ಈ ನಿರ್ಧಾರವನ್ನ ಪ್ರಕಟಿಸಿದ್ದಾರೆ.
ಭಾರತ ಪುರುಷರ ಟೆಸ್ಟ್ ತಂಡ
* ಶುಭಮನ್ ಗಿಲ್ (ನಾಯಕ)
* ರಿಷಭ್ ಪಂತ್ (ವಿ.ಕೀ. & ಉಪನಾಯಕ)
* ಯಶಸ್ವಿ ಜೈಸ್ವಾಲ್
* ಕೆಎಲ್ ರಾಹುಲ್
* ಸಾಯಿ ಸುದರ್ಶನ್
* ಅಭಿಮನ್ಯು ಈಶ್ವರನ್
* ಕರುಣ್ ನಾಯರ್
* ನಿತೀಶ್ ಕುಮಾರ್ ರೆಡ್ಡಿ
* ರವೀಂದ್ರ ಜಡೇಜಾ
* ಧ್ರುವ್ ಜುರೆಲ್ (ವಿಕೆಟ್ ಕೀಪರ್)
* ವಾಷಿಂಗ್ಟನ್ ಸುಂದರ್
* ಶಾರ್ದೂಲ್ ಠಾಕೂರ್
* ಜಸ್ಪ್ರೀತ್ ಬುಮ್ರಾ
* ಮೊಹಮ್ಮದ್ ಸಿರಾಜ್
* ಪ್ರಸಿದ್ಧ್ ಕೃಷ್ಣ
* ಆಕಾಶ್ ದೀಪ್
* ಅರ್ಷದೀಪ್ ಸಿಂಗ್
* ಕುಲದೀಪ್ ಯಾದವ್
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ
* ಮೊದಲ ಟೆಸ್ಟ್ - ಜೂನ್ 20ರಿಂದ ಜೂನ್ 24ರ ವರೆಗೆ
* ಎರಡನೇ ಟೆಸ್ಟ್ - ಜುಲೈ 2ರಿಂದ ಜುಲೈ 6ರ ವರೆಗೆ
* ಮೂರನೇ ಟೆಸ್ಟ್ - ಜುಲೈ 10ರಿಂದ ಜುಲೈ 14ರ ವರೆಗೆ
* ನಾಲ್ಕನೇ ಟೆಸ್ಟ್ - ಜುಲೈ 23ರಿಂದ ಜುಲೈ 27ರ ವರೆಗೆ
* ಐದನೇ ಟೆಸ್ಟ್ - ಜುಲೈ 31ರಿಂದ ಆಗಸ್ಟ್ 4ರ ವರೆಗೆ
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications