RCB vs MI: ಆರ್ಸಿಬಿ ನಾಯಕ ರಜತ್ ಪಾಟಿದಾರ್ಗೆ ಶಾಕ್ ಕೊಟ್ಟ ಬಿಸಿಸಿಐ!
ಸೋಮವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 12 ರನ್ಗಳ ರೋಚಕ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರ್ ಸಿಬಿ ಪಂದ್ಯಾವಳಿಯ ಮೂರನೇ ಗೆಲುವು ಸಾಧಿಸಿದೆ.
ಪಂದ್ಯ ಗೆದ್ದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಗೆ ಬಿಸಿಸಿಐ ಶಾಕ್ ಕೊಟ್ಟಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಡಿಮೆ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ಬಿಸಿಸಿಐ ರಜತ್ ಪಾಟಿದಾರ್ಗೆ ದಂಡ ವಿಧಿಸಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, ಕನಿಷ್ಠ ಓವರ್ ದರದ ಅಪರಾಧಗಳಿಗೆ ಸಂಬಂಧಿಸಿದಂತೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಏನಿದು ಆರ್ಟಿಕಲ್ 2.2?
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ಪ್ರಕಾರ, ಅನುಬಂಧ 2 ರಲ್ಲಿ ಒಳಗೊಂಡಿರುವ ಕನಿಷ್ಠ ಓವರ್ ದರದ ಅವಶ್ಯಕತೆಗಳನ್ನು ಪೂರೈಸಲು ಫೀಲ್ಡಿಂಗ್ ತಂಡವು ಪಂದ್ಯದಲ್ಲಿ ಭಾಗವಹಿಸುವಲ್ಲಿ ವಿಫಲವಾದರೆ, ಸಂಬಂಧಿತ ತಂಡದ ನಾಯಕ ಮತ್ತು ಆ ಫೀಲ್ಡಿಂಗ್ ತಂಡದ ಪ್ರತಿಯೊಬ್ಬ ಆಟಗಾರರು ಈ ನೀತಿ ಸಂಹಿತೆಯ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ. ಇದಕ್ಕೆ ದಂಡ ವಿಧಿಸಲಾಗುತ್ತದೆ.
ಜವಾಬ್ದಾರಿಯುತ ಆಟವಾಡಿದ ರಜತ್
ಮುಂಬೈ ಇಂಡಿಯನ್ಸ್ ವಿರುದ್ಧ ರಜತ್ ಪಾಟಿದಾರ್ ಅದ್ಭುತ ಆಟವಾಡಿದರು, 32 ಎಸೆತಗಳಲ್ಲಿ 200 ಸ್ಟ್ರೈಕ್ ರೇಟ್ನೊಂದಿಗೆ 64 ರನ್ ಗಳಿಸಿದರು. ಈ ಪ್ರದರ್ಶನಕ್ಕಾಗಿ, ಅವರಿಗೆ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿ ನೀಡಲಾಯಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಾಂಖೆಡೆ ಕ್ರೀಡಾಂಗಣದಲ್ಲಿ 10 ವರ್ಷಗಳ ನಂತರ ಮುಂಬೈ ಇಂಡಿಯನ್ಸ್ ಅನ್ನು ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 221 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ, ಮುಂಬೈ ಇಂಡಿಯನ್ಸ್ ಕೇವಲ 209 ರನ್ಗಳನ್ನು ಗಳಿಸಿತು, ಆರ್ಸಿಬಿ 12 ರನ್ಗಳ ಗೆಲುವು ಸಾಧಿಸಿತು.
ಆರ್ಸಿಬಿ ಪ್ರಸ್ತುತ ನಾಲ್ಕು ಪಂದ್ಯಗಳನ್ನು ಆಡಿದ ನಂತರ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆರ್ ಸಿಬಿ ಮೂರು ಪಂದ್ಯಗಳನ್ನು ಗೆದ್ದಿದ್ದು ಒಂದು ಪಂದ್ಯವನ್ನು ಸೋತಿದ್ದಾರೆ. ಸದ್ಯ 6 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದ್ದಾರೆ.












Click it and Unblock the Notifications