Ind vs Pak: ಅಕ್ಟೋಬರ್ 14ರಂದು ಅದ್ಧೂರಿ ಕಾರ್ಯಕ್ರಮ! ವಿಶ್ವಕಪ್ ಎಂದರೆ ಭಾರತ-ಪಾಕಿಸ್ತಾನ ಪಂದ್ಯ ಅಷ್ಟೆನಾ?
ಭಾರತದಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ಆಯೋಜನೆ ಆದಾಗಿನಿಂದ ಬಿಸಿಸಿಐ ಒಂದಲ್ಲ ಒಂದು ಎಡವಟ್ಟು ಮಾಡುತ್ತಲೇ ಇದೆ. ಪಂದ್ಯದ ದಿನಾಂಕ ಬದಲಾವಣೆ, ಟಿಕೆಟ್ ಮಾರಾಟ ಗೊಂದಲ, ಉದ್ಘಾಟನಾ ಸಮಾರಂಭ, ಕಳಪೆ ಔಟ್ಫೀಲ್ಡ್ ಮುಂತಾದವುಗಳ ಬಗ್ಗೆ ಅಭಿಮಾನಿಗಳು ಟೀಕಿಸುತ್ತಲೇ ಇದ್ದಾರೆ.
ಅಕ್ಟೋಬರ್ 14ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೆ ಮುನ್ನ ಬಿಸಿಸಿಐ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದೆ.

ಭಾರತ - ಪಾಕಿಸ್ತಾನ ಪಂದ್ಯಕ್ಕೆ ಮುನ್ನ ಮನರಂಜನಾ ಕಾರ್ಯಕ್ರಮ ನಡೆಸಲು ಬಿಸಿಸಿಐ ಚಿಂತನೆ ನಡೆಸುತ್ತಿದ್ದು, ಮೊದಲು ಪ್ರದರ್ಶನ ನೀಡಲು ಅರಿಜಿತ್ ಸಿಂಗ್ ಅವರನ್ನು ಕಲಾವಿದರಾಗಿ ಬಿಸಿಸಿಐ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ.
ರಜಿನಿಕಾಂತ್, ಅಮಿತಾಬ್ ಬಚ್ಚನ್ ಹಾಜರು
ದೈನಿಕ್ ಜಾಗರಣ್ ವರದಿಯ ಪ್ರಕಾರ, ಭಾರತ ಪಾಕಿಸ್ತಾನ ಪಂದ್ಯಕ್ಕೆ ಮುನ್ನ ವರ್ಣರಂಜಿತ ಕಾರ್ಯಕ್ರಮವನ್ನು ಯೋಜಿಸಲಾಗಿದೆ. ಈ ಪಂದ್ಯವನ್ನು ವೀಕ್ಷಿಸಲು ಸಚಿನ್ ತೆಂಡೂಲ್ಕರ್, ರಜನಿಕಾಂತ್ ಮತ್ತು ಅಮಿತಾಬ್ ಬಚ್ಚನ್ ಅವರಂತಹ ತಾರೆಗಳು ಭಾಗವಹಿಸುತ್ತಾರೆ. ಭವ್ಯ ಸಮಾರಂಭದಲ್ಲಿ ಜಯ್ ಶಾ ಅವರ ತಂದೆ ಅಮಿತ್ ಶಾ (ಗೃಹ ಸಚಿವರು) ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ನಡೆಯದ ಉದ್ಘಾಟನಾ ಸಮಾರಂಭ
ಅಕ್ಟೋಬರ್ 5 ರಂದು ನ್ಯೂಜಿಲೆಂಡ್ ಇಂಗ್ಲೆಂಡ್ ನಡುವಿನ ವಿಶ್ವಕಪ್ ಆರಂಭಿಕ ಪಂದ್ಯ ಪ್ರಾರಂಭವಾಗುವ ಮೊದಲು ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ಯೋಜಿಸಿತ್ತು. ಅವರು ಆಶಾ ಭೋಂಸ್ಲೆ, ಶಂಕರ್ ಮಹಾದೇವನ್, ಶ್ರೇಯಾ ಘೋಷಾಲ್, ರಣವೀರ್ ಸಿಂಗ್ ಮತ್ತು ತಮನ್ಹಾ ಭಾಟಿಯಾ ಅವರಂತಹ ಕಲಾವಿದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು, ಕೊನೆ ಕ್ಷಣದಲ್ಲಿ ಉದ್ಘಾಟನಾ ಸಮಾರಂಭವನ್ನು ರದ್ದುಮಾಡಿತ್ತು ಎಂದು ದೈನಿಕ್ ಜಾಗರಣ್ ವರದಿ ಮಾಡಿತ್ತು. ಉದ್ಘಾಟನಾ ಸಮಾರಂಭ ರದ್ದಾದ ಬಳಿಕ ಅಭಿಮಾನಿಗಳು ಬಿಸಿಸಿಐ ವಿರುದ್ಧ ಕಿಡಿ ಕಾರಿದ್ದರು.
ಮತ್ತೆ ಕೋಪಗೊಂಡ ಅಭಿಮಾನಿಗಳು
ಈಗ ಭಾರತ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈ ಸಮಾರಂಭ ಆಯೋಜನೆ ಮಾಡಲಾಗಿದೆ. ಏಕದಿನ ವಿಶ್ವಕಪ್ ಎಂದರೆ ಬರೀ ಭಾರತ - ಪಾಕಿಸ್ತಾನ ಪಂದ್ಯ ಮಾತ್ರವಾ ಎಂದು ಕ್ರಿಕೆಟ್ ಅಭಿಮಾನಿಗಳು ಕೋಪಗೊಂಡಿದ್ದಾರೆ. ಬಿಸಿಸಿಐಗೆ ಬರಿ ಪ್ರಚಾರ ಮುಖ್ಯವಾಯಿತಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಅಲ್ಲದೆ, ಭಾರತ ಪಾಕಿಸ್ತಾನ ಪಂದ್ಯಕ್ಕೆ ಅಷ್ಟೊಂದು ಮಹತ್ವ ಯಾಕೆ, ಅದು ಕೂಡ ಸಾಮಾನ್ಯ ವಿಶ್ವಕಪ್ ಪಂದ್ಯ ಅಷ್ಟೆ, ಇದೇನು ಫೈನಲ್ ಅಲ್ಲವಲ್ಲ ಎಂದು ಕೆಲವರು ಕೇಳಿದ್ದಾರೆ.
ಉದ್ಘಾಟನಾ ಪಂದ್ಯದಲ್ಲಿ ಪ್ರೇಕ್ಷಕರ ಕೊರತೆ ಎದ್ದು ಕಂಡಿತ್ತು, ಅಂತಾರಾಷ್ಟ್ರೀಯ ಮಟ್ಟದ ಬಿಸಿಸಿಐ ಟೀಕೆಗಳನ್ನು ಕೇಳಬೇಕಾಯಿತು. ಉದ್ಘಾಟನಾ ಸಮಾರಂಭ ಇಲ್ಲವೆಂದ ಮೇಲೆ, ಅಷ್ಟು ದೊಡ್ಡ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ಆಯೋಜನೆ ಮಾಡುವ ಅವಶ್ಯಕತೆ ಏನಿತ್ತು ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications