Rahul Dravid: ವಿಶ್ವಕಪ್ ಬಳಿಕ ಕೋಚ್ ಸ್ಥಾನದಿಂದ ಕೆಳಗಿಳಿಯಲಿರುವ ದ್ರಾವಿಡ್! ಮುಂದಿನ ಕೋಚ್ ಯಾರು
ಏಕದಿನ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿರುವ ಭಾರತ ತಂಡ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ವಿಶ್ವಕಪ್ ಬಳಿಕ ಭಾರತ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಅದಾದ ಬಳಿಕ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಏಕದಿನ ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಮತ್ತು ಅವರ ಕೋಚಿಂಗ್ ಸಿಬ್ಬಂದಿಯ ಒಪ್ಪಂದ ಮುಗಿಯಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದ್ರಾವಿಡ್ ಅವರ ಭವಿಷ್ಯದ ಬಗ್ಗೆ ಇನ್ನೂ ಯಾವ ಚರ್ಚೆ ನಡೆಸಿಲ್ಲ.

ಏಕದಿನ ವಿಶ್ವಕಪ್ನ ಫಲಿತಾಂಶ ಏನೇ ಆದರೂ ಕೋಚಿಂಗ್ ಸ್ಥಾನದಿಂದ ಕೆಳಗಿಳಿಯಲು ದ್ರಾವಿಡ್ ಬಯಸಿದ್ದರು. ನವೆಂಬರ್ 23 ರಿಂದ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ವಿವಿಎಸ್ ಲಕ್ಷ್ಮಣ್ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕವಾಗಲಿದ್ದಾರೆ.
ಮುಂದುವರೆಸಲು ಬಿಸಿಸಿಐ ಆಸಕ್ತಿ
ಬಿಸಿಸಿಐ ರಾಹುಲ್ ದ್ರಾವಿಡ್ ಮತ್ತು ಅವರ ತಂಡದ ಅವಧಿಯನ್ನು ವಿಸ್ತರಿಸಲು ಆಸಕ್ತಿಯನ್ನು ಹೊಂದಿದೆ. ಆದರೆ ರಾಹುಲ್ ದ್ರಾವಿಡ್ ಈ ಬಗ್ಗೆ ಅಂತಿಮವಾಗಿ ನಿರ್ಧರಿಸಬೇಕಾಗುತ್ತದೆ. ಏಷ್ಯಾಕಪ್ 2022, ಟಿ20 ವಿಶ್ವಕಪ್ 2022 ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ 2023ರ ಸೋತ ಬಳಿಕ ಬಿಸಿಸಿಐ ದ್ರಾವಿಡ್ ಬಗ್ಗೆ ಅಸಮಾಧಾನ ಹೊಂದಿತ್ತು, ಆದರೆ 2023ರ ಏಷ್ಯಾಕಪ್ನಲ್ಲಿ ಭಾರತ ಚಾಂಪಿಯನ್ ಆಗಿದ್ದು, ಸದ್ಯ ಏಕದಿನ ವಿಶ್ವಕಪ್ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಪರಿಸ್ಥಿತಿ ಬದಲಾಗಿದೆ.
ಕೋಚ್ ಅವಧಿ ವಿಸ್ತರಣೆ ಅಥವಾ ನವೀಕರಣದ ಕುರಿತು ರಾಹುಲ್ ಅವರೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಸಮಯದಲ್ಲಿ ನಾವೆಲ್ಲರೂ ವಿಶ್ವಕಪ್ ಮೇಲೆ ಗಮನಹರಿಸಿದ್ದೇವೆ. ಅವರು ಕೋಚ್ ಆಗಿ ಮುಂದುವರೆಯುವುದಿಲ್ಲ ಎಂದು ಹೇಳಿದ್ದಾರೆ, ನಮಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇನ್ಸೈಡ್ಸ್ಪೋರ್ಟ್ ವರದಿ ಮಾಡಿದೆ.
ಕ್ರಿಕ್ಬಜ್ ವರದಿಯ ಪ್ರಕಾರ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಒಪ್ಪಂದವನ್ನು ವಿಸ್ತರಿಸಲಿದ್ದಾರೆ ಎಂದು ಹೇಳಲಾಗಿದೆ.
ಟಿ20 ವಿಶ್ವಕಪ್ 2024ರ ಆರಂಭಕ್ಕೆ ಇನ್ನೂ ಆರು ತಿಂಗಳಿದೆ, ಭಾರತ ತಂಡ ಇದಕ್ಕಾಗಿ ಸಜ್ಜಾಗಬೇಕಿದೆ. ಇದಕ್ಕಾಗಿ ದ್ರಾವಿಡ್ ಪಾತ್ರ ಕೂಡ ಮುಖ್ಯವಾಗಲಿದೆ. ಟಿ20 ವಿಶ್ವಕಪ್ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡದೇ ಇದ್ದರೂ, ತಂಡದ ವಿಶ್ವಾಸ ಗೆಲ್ಲುವಲ್ಲಿ ದ್ರಾವಿಡ್ ಯಶಸ್ವಿಯಾಗಿದ್ದಾರೆ.
ವಿಶ್ವಕಪ್ ಬಳಿಕ ವಾರದ ವಿರಾಮದ ನಂತರ ರಾಹುಲ್ ದ್ರಾವಿಡ್ ಅವರೊಂದಿಗೆ ಬಿಸಿಸಿಐ ಚರ್ಚಿಸಲಿದೆ. ಮತ್ತು ನವೆಂಬರ್ ಅಂತ್ಯದ ವೇಳೆಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications