RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್
IPL 2026 RCB: ಐಪಿಎಲ್ 2026ನೇ ಆವೃತ್ತಿ ಇನ್ನೂ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಎಂ.ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಆಟೋ ಚಾಲಕರೊಬ್ಬರು ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ ಎಂದು ಬರೆದುಕೊಂಡಿದ್ದಾರೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಬಹು ನಿರೀಕ್ಷಿತ ಹಣಾಹಣಿಯೊಂದಿಗೆ ಐಪಿಎಲ್ 19ನೇ ಸೀಸನ್ ಆರಂಭವಾಗುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ ಅಭಿಮಾನಿಗಳ ಹುಚ್ಚು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ವಿಶೇಷವಾಗಿ ಆರ್ಸಿಬಿಗೆ ಅಪಾರ ಬೆಂಬಲವಿರುವ ಬೆಂಗಳೂರಿನಲ್ಲಿ ಈ ಉತ್ಸಾಹ ಮುಗಿಲು ಮುಟ್ಟಿದೆ.

'ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ'
ಬೆಂಗಳೂರಿನ ಆಟೋ ಚಾಲಕರೊಬ್ಬರು ಆರ್ಸಿಬಿ ಮೇಲಿನ ಅಭಿಮಾನವನ್ನು ಎತ್ತಿ ಹಿಡಿಯುವ ವಿಶಿಷ್ಟ ಕಾರ್ಯಕ್ಕೆ ಮುಂದಾಗುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಾರೆ. ಪಂದ್ಯದ ದಿನದಂದು ಆರ್ಸಿಬಿ ಜೆರ್ಸಿ ಧರಿಸಿದ ಯಾರೇ ಆದರೂ ಅವರಿಗೆ ತಮ್ಮ ಆಟೋದಲ್ಲಿ ಉಚಿತ ಪ್ರಯಾಣ ನೀಡುವುದಾಗಿ ಅವರು ತಮ್ಮ ಆಟೋದಲ್ಲಿ ಕೈಬರಹದ ಚೀಟಿಯೊಂದನ್ನು ಅಂಟಿಸಿ ಗಮನ ಸೆಳೆದಿದ್ದಾರೆ.
ಮಹಿಕಾ ಜಾಧವ್ ಎಂಬ ಹೆಸರಿನ ಟ್ವಿಟ್ರ್ ಖಾತೆಯಲ್ಲಿ ಈ ಕೈಬರಹ ಫೋಟೋವನ್ನು ಹಂಚಿಕೊಂಡಿದ್ದಾರೆ. ಭಾರತದಲ್ಲಿ ಕ್ರಿಕೆಟ್ ಎಂಬ ಕ್ರೀಡೆ ಹೇಗೆ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ ಮತ್ತು ಪ್ರತಿ ವರ್ಷ ಐಪಿಎಲ್ ಆ ಉತ್ಸಾಹವನ್ನು ಹೇಗೆ ಮರುಕಳಿಸುತ್ತದೆ ಎಂಬುದರ ಕುರಿತು ಅವರು ಬರೆದಿದ್ದಾರೆ. ಅದರಲ್ಲೂ ಆರ್ಸಿಬಿ ಅಭಿಮಾನಿಗಳ ಅಚಲವಾದ ನಿಷ್ಠೆಯನ್ನು ಅವರು ಎತ್ತಿ ತೋರಿಸಿದ್ದು, ಪ್ರತಿ ಸೀಸನ್ನಲ್ಲೂ ಬದಲಾಗದ ಅವರ ನಂಬಿಕೆಯು "ಈ ಸಲ ಕಪ್ ನಮ್ದೇ" ಎಂಬ ಘೋಷವಾಕ್ಯದಲ್ಲಿ ಅಡಗಿದೆ ಎಂದು ಅವರು ತಿಳಿಸಿದ್ದಾರೆ.
ಉಚಿತ ಪ್ರಯಾಣದ ಕುರಿತು ನೆಟ್ಟಿಗರು ಹೇಳೋದೇನು?
ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಹಲವು ಟ್ವಿಟರ್ ಬಳಕೆದಾರರು ಆಟೋ ಚಾಲಕನ ಉದಾರತೆ ಮತ್ತು ಆರ್ಸಿಬಿ ಬೆಂಬಲಿಗರ ಅಪ್ರತಿಮ ಸಮರ್ಪಣಾ ಮನೋಭಾವವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಟ್ವಿಟರ್ ಬಳಕೆದಾರರೊಬ್ಬರು ಇದನ್ನು "ನಿಜವಾದ ಅಭಿಮಾನಿಗಳು ಇತರರನ್ನು ಬೆಂಬಲಿಸಲು ತಮ್ಮ ಮಿತಿಯನ್ನು ಮೀರಿ ಶ್ರಮಿಸುತ್ತಾರೆ," ಎಂದು ಅವರು ಬರೆದುಕೊಂಡಿದ್ದಾರೆ.
ಇನ್ನು ಕೆಲವರು "ಆರ್ಸಿಬಿ ಕೇವಲ ಒಂದು ಕ್ರಿಕೆಟ್ ತಂಡವಲ್ಲ, ಅದು ಇಡೀ ನಗರದ ಜನರನ್ನು ಬೆಸೆಯುವ ಒಂದು ಭಾವನೆ," ಎಂದು ಬಣ್ಣಿಸಿದ್ದಾರೆ. ಅಲ್ಲದೆ, "ಇಂತಹ ನಿಷ್ಠಾವಂತ ಅಭಿಮಾನಿಗಳಿಗೆ ಸರಿಯಾದ ಮನ್ನಣೆ ಸಿಗುವುದು ಅಪರೂಪ. ಇಂತಹ ಅಭಿಮಾನಿಗಳಿಗೆ ಉಚಿತ ಪಂದ್ಯದ ಟಿಕೆಟ್ಗಳು ಅಥವಾ ಆಟಗಾರರೊಂದಿಗೆ ಸಂವಾದ ನಡೆಸುವ ಅವಕಾಶಗಳನ್ನು ನೀಡುವ ಮೂಲಕ ಅವರ ಅಚಲ ನಿಷ್ಠೆಯನ್ನು ಗೌರವಿಸಬೇಕು," ಅಂತಲೂ ಹೇಳಿದ್ದಾರೆ.
There’s something about cricket in India that you can’t really explain. It’s been there since childhood, in the background of every home, every conversation, every summer. And then IPL comes around and suddenly it’s everywhere again.
— Mahika Jadhav (@mahikaa101) March 28, 2026
And RCB fans, honestly, the most patient and… pic.twitter.com/KayCaxPHVO
ಮತ್ತೊಬ್ಬರು 'ತಂಡದ ಪ್ರದರ್ಶನ ಹೇಗೆ ಇರಲಿ ತಮ್ಮ ಉತ್ಸಾಹ ಮಾತ್ರ ಯಾವಾಗಲೂ ಕಡಿಮೆಯಾಗುವುದಿಲ್ಲ. "ಗೆಲ್ಲಲಿ ಅಥವಾ ಸೋಲಲಿ, ನಮ್ಮ ಪ್ರೀತಿ ಮತ್ತು ಕಿಚ್ಚು ಎಂದಿಗೂ ಕಡಿಮೆಯಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಆಟೋ ಚಾಲಕ ತನ್ನ ಆಟೋದಲ್ಲಿ ಬರೆದುಕೊಂಡಿರುವ ಉಚಿತ ಪ್ರಯಾಣದ ಆಫರ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಇದಕ್ಕೆ ಸಾಥ್ ನೀಡುವಂತೆ ಬಹುತೇಕರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
-
Namma Metro: ಐಪಿಎಲ್ ಪಂದ್ಯದ ದಿನ ದಟ್ಟಣೆ ಇಲ್ಲದೇ ಓಡಾಡಿ, ಮೆಟ್ರೋ ಸೇವಾವಧಿ ವಿಸ್ತರಣೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications