Bengaluru Bulls: ಕೊನೆ ಪಂದ್ಯದಲ್ಲಿ ಅಬ್ಬರಿಸಿದ ಗೂಳಿಗಳು; ಹರಿಯಾಣ ಸ್ಟೀಲರ್ಸ್ ವಿರುದ್ಧ 53-39 ಅಂಕಗಳ ಗೆಲುವು
ಪ್ರೊ ಕಬಡ್ಡಿ ಲೀಗ್ ಸೀಸನ್ 10 ರ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ವಿರುದ್ಧ ಬೆಂಗಳೂರು ಬುಲ್ಸ್ ಅಬ್ಬರಿಸಿದೆ. ಈ ಆವೃತ್ತಿಯ ಕೊನೆಯ ಪಂದ್ಯವನ್ನಾಡಿದ ಬುಲ್ಸ್ ಪಡೆ ಗೆಲುವಿನ ಮೂಲಕ ವಿದಾಯ ಹೇಳಿದೆ.
ಪಂಚಕುಲದ ತೌ ದೇವಿಲಾಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ದ್ವಿತೀಯಾರ್ಧದಲ್ಲಿ ಅಬ್ಬರದ ಪ್ರದರ್ಶನ ನೀಡಿದೆ. ರೈಡರ್ ಗಳಾದ ಸುಶೀಲ್ ಮತ್ತು ಅಕ್ಷತ್ ಹರಿಯಾಣ ಸ್ಟೀಲರ್ಸ್ ರಕ್ಷಣಾ ಕೋಟೆಯನ್ನು ಪುಡಿಗಟ್ಟಿದರು.ಅಂತಿಮವಾಗಿ ಬೆಂಗಳೂರು ಬುಲ್ಸ್ 53-39 ಅಂಕಗಳಿಂದ ಭರ್ಜರಿ ಗೆಲುವು ಪಡೆಯಿತು.

ಮೊದಲಾರ್ಧದಲ್ಲಿ ಎರಡೂ ತಂಡಗಳು ಸಮಬಲದ ಹೋರಾಟ ನಡೆಸಿದವು. ಮೊದಲಾರ್ಧದ ಅಂತ್ಯದ ವೇಳೆಗೆ 24-24 ಪಾಯಿಂಟ್ ಪಡೆಯುವ ಮೂಲಕ ಪಂದ್ಯ ರೋಚಕ ಹಂತಕ್ಕೆ ಬಂದಿತ್ತು.
ದ್ವಿತೀಯಾರ್ಧದಲ್ಲಿ ಮಂಕಾದ ಹರಿಯಾಣ
ಆದರೆ ದ್ವಿತೀಯಾರ್ಧದಲ್ಲಿ ಬೆಂಗಳೂರು ಬುಲ್ಸ್ ಪಡೆ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು. ಸುಶೀಲ್ 22 ರೈಡ್ ಅಂಕಗಳನ್ನು ಪಡೆಯುವ ಮೂಲಕ ಬೆಂಗಳೂರು ಬುಲ್ಸ್ ತಂಡದ ಟಾಪ್ ರೈಡರ್ ಎನಿಸಿಕೊಂಡರು. ಅಕ್ಷಿತ್ ರೈಡಿಂಗ್ನಲ್ಲಿ8 ಅಂಕಗಳನ್ನು ಪಡೆದುಕೊಂಡರು.
ವಿಖಾಶ್ ಕಂಡಾಲ 1 ರೈಡ್ ಪಾಯಿಂಟ್ ಪಡೆದರು. ಡಿಫೆಂಡರ್ ಗಳಾದ ಅರುಳ್ನಾಥಬಾಬು 5 ಅಂಕ ಪಡೆದರೆ, ಪಾರ್ಥಿಬನ್ ಕೂಡ 5 ಅಂಕ ಪಡೆದುಕೊಂಡರು. ರೋಹಿತ್ ಕುಮಾರ್ 4, ರಣ್ ಸಿಂಗ್ 2 ಅಂಕ ಪಡೆದು ಮಿಂಚಿದರು.
ಮೊದಲಾರ್ಧ ಹೋರಾಟ ಕೊಟ್ಟ ಹರಿಯಾಣ ಸ್ಟೀಲರ್ಸ್ ದ್ವಿತೀಯಾರ್ಧ ಉತ್ತಮ ಆಟ ಪ್ರದರ್ಶಿಸುವಲ್ಲಿ ವಿಫಲವಾಯಿತು. ರೈಡರ್ ತೇಜಸ್ ಪಾಟೀಲ್ 11 ಅಂಕ ಪಡೆದರೆ, ವಿಶಾಲ್ ತಾಟೆ 8 ಅಂಕ ಪಡೆದುಕೊಂಡರು. ರೈಡರ್ ಗಳು ತಕ್ಕ ಮಟ್ಟಿಗೆ ಪ್ರದರ್ಶನ ನೀಡಿದರು, ಡಿಫೆಂಡ್ ವಿಭಾಗದಲ್ಲಿ ವಿಫಲವಾಗಿದ್ದು ಸೋಲಿಗೆ ಕಾರಣವಾಯಿತು.
ಈ ಗೆಲುವಿನೊಂದಿಗೆ ಬೆಂಗಳೂರು ಬುಲ್ಸ್ ಅಂಕಪಟ್ಟಿಯಲ್ಲಿ 8ನೇ ಸ್ಥಾನ ಪಡೆಯುವ ಮೂಲಕ ತನ್ನ ಅಭಿಯಾನವನ್ನು ಕೊನೆಗೊಳಿಸಿದೆ. 22 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಮಾತ್ರ ಗೆದ್ದಿರುವ ಬುಲ್ಸ್ 12 ಪಂದ್ಯಗಳಲ್ಲಿ ಸೋತಿದ್ದು, 2 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತ್ತು. ಈ ಮೂಲಕ 53 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ.
ಇಂದಿನ ಪಂದ್ಯ ಸೋತರೂ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಹರಿಯಾಣ ಎಲಿಮಿನೇಟರ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಪುಣೇರಿ ಪಲ್ತಾನ್ ಮತ್ತು ಎರಡನೇ ಸ್ಥಾನದಲ್ಲಿರುವ ಜೈಪುರ ಪಿಂಕ್ ಪ್ಯಾಂಥರ್ಸ್ ಸೆಮಿಫೈನಲ್ ಪ್ರವೇಶಿಸಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications