CCL Karnataka Bulldozers: ಡಾರ್ಲಿಂಗ್ ಕೃಷ್ಣ ಅರ್ಧಶತಕ; ಮುಂಬೈ ವಿರುದ್ಧ ಗೆದ್ದ ಕಿಚ್ಚ ಸುದೀಪ್ ಪಡೆ
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯಾವಳಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತನ್ನ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿದೆ.
ರಿತೇಶ್ ದೇಶ್ಮುಖ್ ನಾಯಕತ್ವದ ಮುಂಬೈ ಹೀರೋಸ್ ವಿರುದ್ಧ ಕಿಚ್ಚ ಸುದೀಪ್ ತಂಡವು ಅಮೋಘ 38 ರನ್ಗಳ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. 20 ಓವರ್ ಗಳ ಪಂದ್ಯದಲ್ಲಿ ಸಿಸಿಎಲ್ನಲ್ಲಿ ಎರಡು ಇನ್ನಿಂಗ್ಸ್ಗಳಲ್ಲಿ ಆಡಿಸಲಾಗುತ್ತದೆ. ಪ್ರತಿ ಇನ್ನಿಂಗ್ಸ್ನಲ್ಲಿ 10 ಓವರ್ ಇರುತ್ತದೆ.

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಮೊದಲ ಇನ್ನಿಂಗ್ಸ್ನಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 70 ರನ್ ಮಾತ್ರ ಗಳಿಸಿತು. ಇದಕ್ಕೆ ಉತ್ತರವಾಗಿ ಮುಂಬೈ ಹೀರೋಸ್ ತಮ್ಮ ಮೊದಲ ಇನ್ನಿಂಗ್ಸ್ನಲ್ಲಿ 10 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 76 ರನ್ ಗಳಿಸುವ ಮೂಲಕ 6 ರನ್ಗಳ ಮುನ್ನಡೆ ಪಡೆದುಕೊಂಡರು.
ಡಾರ್ಲಿಂಗ್ ಕೃಷ್ಣ ಅಮೋಘ ಅರ್ಧಶತಕ
ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್ಸ್ 5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 43 ರನ್ ಗಳಿಸುವ ಮೂಲಕ 37 ರನ್ಗಳ ಮುನ್ನಡೆ ಪಡೆದುಕೊಂಡಿತು.
ಈ ಹಂತದಲ್ಲಿ ಕ್ರೀಸ್ಗೆ ಬಂದ ಡಾರ್ಲಿಂಗ್ ಕೃಷ್ಣ ಮುಂಬೈ ಹೀರೋಸ್ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. 18 ಎಸೆತಗಳಲ್ಲಿ 6 ಸಿಕ್ಸರ್ ಸಹಿತ ಅಜೇಯ 55 ರನ್ ಗಳಿಸಿದರು. ಮತ್ತೊಂದೆಡೆ ಜೆಕೆ ಕೂಡ 27 ಎಸೆತಗಳಲ್ಲಿ 45 ರನ್ ಕಲೆಹಾಕಿದರು. ಎರಡನೇ ಇನ್ನಿಂಗ್ಸ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ 10 ಓವರ್ ಗಳಲ್ಲಿ 129 ರನ್ ಕಲೆಹಾಕುವ ಮೂಲಕ ಮುಂಬೈ ಹೀರೋಸ್ ತಂಡಕ್ಕೆ 124 ರನ್ಗಳ ಬೃಹತ್ ಗುರಿಯನ್ನು ನೀಡಿತು.
ಆದರೆ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಲು ಪರದಾಡಿದ ಮುಂಬೈ ಹೀರೋಸ್ 10 ಓವರ್ ಗಳಲ್ಲಿ ಕೇವಲ 86 ರನ್ ಗಳಿಸುವ ಮೂಲಕ 38 ರನ್ಗಳಿಂದ ಸೋಲನುಭವಿಸಿತು.
ಆಡಿದ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಮುಂದಿನ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 2 ರಂದು ನಡೆಯಲಿದೆ. ಸೋನಿ, ಜಿಯೋ ಸಿನಿಮಾದಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications