Karnataka Vs Goa: ಮಯಾಂಕ್, ದೇವದತ್ ಶತಕ: ಉತ್ತಮ ಸ್ಥಿತಿಯಲ್ಲಿ ಕರ್ನಾಟಕ ತಂಡ
ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ. ಮಯಾಂಕ್ ಅಗರ್ವಾಲ್ ಮತ್ತು ದೇವದತ್ ಪಡಿಕ್ಕಲ್ ಶತಕದ ನೆರವಿನಿಂದ ಕರ್ನಾಟಕ ಎರಡನೇ ದಿನದಾಟದಲ್ಲಿ ಗೋವಾ ವಿರುದ್ಧ ಮೇಲುಗೈ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗೋವಾ ಮೊದಲ ಇನ್ನಿಂಗ್ಸ್ನಲ್ಲಿ 321 ರನ್ಗಳಿಗೆ ಆಲೌಟ್ ಆಯಿತು. ಸ್ನೇಹಲ್ ಕೌತಂಕರ್ 83 ರನ್ ಗಳಿಸಿದರೆ, ಅರ್ಜುನ್ ತೆಂಡೂಲ್ಕರ್ 52 ರನ್ ಗಳಿಸಿ ಗಮನ ಸೆಳೆದರು. ಹೇರಂಭ್ ಪರಬ್ 53 ರನ್ ಗಳಿಸುವ ಮೂಲಕ ಗೋವಾ ಮೊದಲ ಇನ್ನಿಂಗ್ಸ್ನಲ್ಲಿ ಸವಾಲಿನ ಮೊತ್ತವನ್ನು ಕಲೆಹಾಕುವಲ್ಲಿ ಯಶಸ್ವಿಯಾಯಿತು. ಮೊದಲ ದಿನದಾಟದ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿದ ಗೋವಾ ಎರಡನೇ ದಿನ ಆಲೌಟ್ ಆಗುವಷ್ಟರಲ್ಲಿ 100 ರನ್ ಕಲೆ ಹಾಕಿತು. ವಿಜಯ್ ಕುಮಾರ್ ವೈಶಾಕ್, ಮುರಳೀಧರ ವೆಂಕಟೇಶ್ ಮತ್ತು ರೋಹಿತ್ ಕುಮಾರ್ ತಲಾ ಮೂರು ವಿಕೆಟ್ ಗಳಿಸಿದರು. ವಾಸುಕಿ ಕೌಶಿಕ್ ಒಂದು ವಿಕೆಟ್ ಪಡೆದುಕೊಂಡರು.

ಪಡಿಕ್ಕಲ್, ಮಯಾಂಕ್ ಶತಕ
ನಂತರ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ದೇಗಾ ನಿಶ್ಚಲ್ (16) ಅವರ ವಿಕೆಟ್ ಅನ್ನು ಬೇಗನೆ ಕಳೆದುಕೊಂಡಿತು. ಬಳಿಕ ಜೊತೆಯಾದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ದೇವದತ್ ಪಡಿಕ್ಕಲ್ 2ನೇ ವಿಕೆಟ್ಗೆ 209 ರನ್ ಕಲೆಹಾಕುವ ಮೂಲಕ ಆಸರೆಯಾದರು. ಮಯಾಂಕ್ ಅಗರ್ವಾಲ್ 114 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 101 ರನ್ ಗಳಿಸಿ ಔಟಾದರು.
236 ರನ್ಗಳಿಗೆ ಎರಡನೇ ವಿಕೆಟ್ ಕಳೆದುಕೊಂಡ ಕರ್ನಾಟಕ ದಿನದಾಟದ ಅಂತ್ಯದಲ್ಲಿ ಬೇಗನೆ 2 ವಿಕೆಟ್ ಕಳೆದುಕೊಂಡಿತು. ರೋಹಿತ್ ಕುಮಾರ್ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಿಕಿನ್ ಜೋಸ್ ಅಜೇಯ 3 ರನ್, ಶ್ರೀನಿವಾಸ್ ವಿಕೆಟ್ ಕಾಯ್ದುಕೊಂಡಿದ್ದಾರೆ. ಗೋವಾ ತಂಡದ ನಾಯಕ ದರ್ಶನ್ ಮಿಸಳ್ 2 ವಿಕೆಟ್ ಪಡೆದರೆ, ಮೋಹಿತ್ ರೆಡ್ಕರ್ 2 ವಿಕೆಟ್ ಪಡೆದುಕೊಂಡರು. ಎರಡನೇ ದಿನದಾಟದ ಅಂತ್ಯಕ್ಕೆ ಕರ್ನಾಟಕ 4 ವಿಕೆಟ್ ಕಳೆದುಕೊಂಡು 251 ರನ್ ಗಳಿಸಿದ್ದು, 70 ರನ್ಗಳ ಹಿನ್ನಡೆಯಲ್ಲಿದೆ.
ಇನ್ನೂ ಎರಡು ದಿನಗಳ ಆಟ ಬಾಕಿ ಇದ್ದು, ಕರ್ನಾಟಕ ಮೂರನೇ ದಿನ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಇನ್ನಿಂಗ್ಸ್ ಮುನ್ನಡೆ ಪಡೆಯುವ ವಿಶ್ವಾಸದಲ್ಲಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications