Champions Trophy: ಮಳೆಯಿಂದಾಗಿ ದಕ್ಷಿಣ ಆಫ್ರಿಕಾ - ಆಸ್ಟ್ರೇಲಿಯಾ ಪಂದ್ಯ ರದ್ದು: ಇಂಗ್ಲೆಂಡ್ಗೆ ಸಂಕಷ್ಟ
ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. 20 ಓವರ್ ಪಂದ್ಯವಾದರೂ ನಡೆಯುತ್ತಿದೆ ಎಂದು ನಿರೀಕ್ಷೆ ಮಾಡಲಾಗಿತ್ತಾದರೂ ಮಳೆ ಬಿಡುವ ಯಾವುದೇ ಮುನ್ಸೂಚನೆ ಇಲ್ಲದ ಕಾರಣ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.
ಪಂದ್ಯ ರದ್ದಾಗಿದ್ದರಿಂದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಲಾ 1 ಅಂಕವನ್ನು ಹಂಚಿಕೊಂಡಿವೆ. ಈಗಾಗಲೇ ಎರಡೂ ತಂಡಗಳು ಒಂದು ಪಂದ್ಯವನ್ನು ಗೆದ್ದಿದ್ದು, ಎರಡನೇ ಪಂದ್ಯ ಮಳೆಯಿಂದ ರದ್ದಾಗಿದ್ದು ಒಂದು ಲೆಕ್ಕಾಚಾರದಲ್ಲಿ ಅನುಕೂಲವಾಗಿದ್ದರೆ, ಇಂಗ್ಲೆಂಡ್ ಸಂಕಷ್ಟವನ್ನು ಹೆಚ್ಚಿಸಿದೆ.

ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಈಗ ತಲಾ 3 ಅಂಕಗಳನ್ನು ಹೊಂದಿದ್ದು, ಮೊದಲು ಮತ್ತು ಎರಡನೇ ಸ್ಥಾನದಲ್ಲಿವೆ. ಇಂಗ್ಲೆಂಡ್ ಮೊದಲ ಪಂದ್ಯದಲ್ಲಿ ಸೋತಿದ್ದು ಸೆಮಿಫೈನಲ್ ತಲುಪಬೇಕಾದರೆ ಅಫ್ಗಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಮಾರ್ಚ್ 26ರಂದು ಇಂಗ್ಲೆಂಡ್ ಮತ್ತು ಅಫ್ಗಾನಿಸ್ತಾನ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಸೋಲುವ ತಂಡ ಅಧಿಕೃತವಾಗಿ ಸೆಮಿಫೈನಲ್ ರೇಸ್ನಿಂದ ಹೊರಬೀಳಲಿದೆ.
ಬುಧವಾರ ಲಾಹೋರ್ ನಲ್ಲಿ ಇಂಗ್ಲೆಂಡ್ ಮತ್ತು ಅಫ್ಗಾನಿಸ್ತಾನ ಮುಖಾಮುಖಿಯಾಗಲಿದೆ. ಮಂಗಳವಾರ ಲಾಹೋರ್ ನಲ್ಲಿ ಭಾರಿ ಮಳೆಯಾಗಿದ್ದು ಬುಧವಾರ ಕೂಡ ಮಳೆ ಅಡ್ಡಿಪಡಿಸುವ ಭೀತಿ ಎದುರಾಗಿದೆ. ಬುಧವಾರ ಇಂಗ್ಲೆಂಡ್ -ಅಫ್ಗಾನಿಸ್ತಾನ ಪಂದ್ಯ ಮಳೆಯಿಂದ ರದ್ದಾದರೆ ಎರಡೂ ತಂಡಗಳು ಪಂದ್ಯಾವಳಿಯಿಂದ ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ.
ಭಾರತ, ನ್ಯೂಜಿಲೆಂಡ್ ಸೆಮಿಫೈನಲ್ಗೆ
ಎ ಗುಂಪಿನಲ್ಲಿ ಈಗಾಗಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ಗೆ ಪ್ರವೇಶ ಪಡೆದುಕೊಂಡಿವೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಸೆಮಿಫೈನಲ್ ರೇಸ್ನಿಂದ ಹೊರಬಿದ್ದಿವೆ. ಎ ಗುಂಪಿನಲ್ಲಿ ಇನ್ನು ಎರಡು ಪಂದ್ಯ ಮಾತ್ರ ನಡೆಯಲಿದ್ದು ಎರಡೂ ಪಂದ್ಯಗಳು ಕೇವಲ ಔಪಚಾರಿಕ ಪಂದ್ಯಗಲಾಗಲಿವೆ.
ಫೆಬ್ರವರಿ 27ರಂದು ಪಂದ್ಯಾವಳಿಯಿಂದ ಹೊರಬಿದ್ದಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿದ್ದು ಮಾರ್ಚ್ 2ರಂದು ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್ ತಲುಪಿದ್ದು ಇದನ್ನು ಸೆಮಿಫೈನಲ್ಗೆ ಮುನ್ನ ಅಭ್ಯಾಸ ಪಂದ್ಯದ ರೀತಿ ಆಡಲಿವೆ.
ಸೆಮಿಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡದ ಎದುರಾಳಿ ಎನ್ನುವುದು ಮಾರ್ಚ್ 2ರಂದು ನಿರ್ಧಾರವಾಗಲಿದೆ. ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಬಿ ಗುಂಪಿನಲ್ಲಿ 2ನೇ ಸ್ಥಾನ ಪಡೆಯುವ ತಂಡವನ್ನು ಸೆಮಿಫೈನಲ್ನಲ್ಲಿ ಎದುರಿಸಲಿದ್ದು, ಬಿ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಎ ಗುಂಪಿನಲ್ಲಿ 2ನೇ ಸ್ಥಾನ ಪಡೆಯುವ ತಂಡದ ವಿರುದ್ಧ ಆಡಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications