ಕೋಚ್ ಗಂಭೀರ್, ರಿಷಭ್ ನಡುವಿನ ಮುನಿಸು ತಣ್ಣಗಾಗಿಲ್ವಾ?
ಭಾರತ ಹಾಗೂ ಇಂಗ್ಲೆಂಡ್ ನಡುವೆ ಆಂಡರ್ಸನ್-ತೆಂಡೂಲ್ಕರ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್ಗಳ ಸೋಲು ಕಂಡಿದೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಎರಡೂ ಇನಿಂಗ್ಸ್ಗಳಲ್ಲಿ ಶತಕ ಬಾರಿಸಿ ಇತಿಹಾಸ ಬರೆದರು. ಟೀಮ್ ಇಂಡಿಯಾದ ಪರ 5 ಶತಕಗಳು ಈ ಪಂದ್ಯದಲ್ಲಿ ದಾಖಲಾದ್ರೂ ಪಂದ್ಯವನ್ನು ಗಿಲ್ ಪಡೆ ಕೈ ಚೆಲ್ಲಿತು. ಟೀಮ್ ಇಂಡಿಯಾ ಎರಡನೇ ಟೆಸ್ಟ್ಗೆ ಸಿದ್ಧತೆಯನ್ನು ನಡೆಸುತ್ತಿದೆ ಈ ವೇಳೆ ಅಭಿಮಾನಿಗಳಲ್ಲಿ ಒಂದು ಸಣ್ಣ ಪ್ರಶ್ನೆ ಹುಟ್ಟಿಕೊಂಡಿದೆ. ಕೋಚ್ ಗಂಭೀರ್, ರಿಷಭ್ ನಡುವೆ ಜಿದ್ದು ಕಡಿಮೆ ಆಗಿಲ್ವಾ?
ರಿಷಭ್ ಪಂತ್ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಸಂಬಂಧಗಳು ಸರಿಯಾಗಿಲ್ಲ ಎಂಬುದು ಹೇಳುವ ಅವಶ್ಯಕತೆ ಇಲ್ಲ. ಚಾಂಪಿಯನ್ಸ್ ಟ್ರೋಫಿಯ ವೇಳೆ ಗೌತಮ್ ಗಂಭೀರ್ ಕೆಎಲ್ ರಾಹುಲ್ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಹೇಳಿದ್ದರು. ಈ ಮೂಲಕ ರಿಷಭ್ ಪಂತ್ ಅವರನ್ನು ಚಾಂಪಿಯನ್ಸ್ ಟ್ರೋಫಿಯುದಕ್ಕೂ ಬೆಂಚ್ ಮೇಲೆ ಕೂರಿಸಿದ್ದರು. ಈ ವೇಳೆ ಪಂತ್ ಸಹ ತಮ್ಮ ಸಿಟ್ಟನ್ನು ಸಾಮಾಜಿಕ ತಾಣದಲ್ಲಿ ಹೊರ ಹಾಕಿದ್ದರು. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವುದು ಈಗ ಇತಿಹಾಸ.

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಗಿದು ಸರಿ ಸುಮಾರು 6 ತಿಂಗಳುಗಳೇ ಕಳೆದಿವೆ. ಈಗ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ವೇಳೆ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಇಬ್ಬರೂ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿ ತಂಡಕ್ಕೆ ಆಧಾರವಾಗಿದ್ದಾರೆ. ಈ ಬಗ್ಗೆ ಇತ್ತೀಚಿಗೆ ಗೌತಮ್ ಗಂಭೀರ್ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ ವೇಳೆ ರಿಷಭ್ ಹಾಗೂ ಗಂಭೀರ್ ನಡುವಿನ ಮುನಿಸು ಇನ್ನು ತಣ್ಣಗೆ ಆಗಿಲ್ಲ ಎಂಬುದು ತಿಳಿಯುತ್ತದೆ.
ತಣ್ಣಗಾಗದ ಮುನಿಸು
ವೈಯಕ್ತಿಕ ಪ್ರದರ್ಶನಕ್ಕಿಂತ ತಂಡದ ಪ್ರದರ್ಶನ ಇಂಪಾರ್ಟೆಂಟ್. ಜಸ್ಪ್ರೀತ್ ಬುಮ್ರಾ ಸಹ ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದರು. ಅಲ್ಲದೆ ಮೇಲ್ಪಂಕ್ತಿಯ ಆಟಗಾರರು ಸಹ ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾದರು. ಆದರೆ ಕೊನೆಯಲ್ಲಿ ಪಂದ್ಯದ ಫಲಿತಾಂಶ ಏನಾಯಿತು ಎಂಬುದೇ ಮುಖ್ಯ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠೀಯಲ್ಲಿ ರಿಷಭ್ ಪಂತ್ ಎರಡೂ ಇನಿಂಗ್ಸ್ನಲ್ಲಿ ಶತಕ ಬಾರಿಸಿದರು. ಏನು ಹೇಳುತ್ತೀರಿ ಎಂದು ಪ್ರಶ್ನೆ ಕೇಳಲಾಯಿತು. ಆಗ ಗಂಭೀರ್ ನೀವು ಹೀಗೆ ಹೇಳುತ್ತಿದ್ದರೆ ಅದು ಒಳ್ಳೆಯದು. ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ನಾಯಕನಾಗಿ ಚೊಚ್ಚಲ ಪಂದ್ಯದಲ್ಲೇ ಶುಭಮನ್ ಗಿಲ್ ಶತಕ ಬಾರಿಸಿದರು. ಈ ಬಗ್ಗೆಯೂ ಮಾತನಾಡಬೇಕು. ನನಗೆ ಅದು ಸಹ ಇಷ್ಟವಾಗುತ್ತದೆ. ಕೆಎಲ್ ರಾಹುಲ್ ಶತಕ ಬಾರಿಸಿದ್ದಾರೆ. ನೀವು ಪ್ರಶ್ನೆಯನ್ನು ಇನ್ನು ಚೆನ್ನಾಗಿ ಕೇಳಬಹುದಿತ್ತು ಎಂದು ತಿಳಿಸಿದ್ದಾರೆ.
-
ಟಿ20 ವಿಶ್ವಕಪ್ ಫೈನಲ್ನಲ್ಲಿ ಐತಿಹಾಸಿಕ ದಾಖಲೆ ಮಾಡಿದ ಟೀಂ ಇಂಡಿಯಾ -
ಟಿ20 ವಿಶ್ವಕಪ್ 2026 ಫೈನಲ್: ಕಿವೀಸ್ ಬೌಲರ್ಗಳ ವಿರುದ್ಧ ಟೀಂ ಇಂಡಿಯಾ ಬ್ಯಾಟರ್ಗಳ ದಂಡಯಾತ್ರೆ: ಮಿಂಚಿದ ಶಿವಂ ದುಬೆ -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
ಟಿ20 ವಿಶ್ವಕಪ್ ಟ್ರೋಫಿಯನ್ನು ಮನೆಗೆ ತನ್ನಿ, ನಾವು ನಿಮ್ಮ ಪರ: ಜೆಮಿಮಾ ರೋಡ್ರಿಗಸ್ ವಿಶೇಷ ಸಂದೇಶ -
ಟಿ20 ವಿಶ್ವಕಪ್ ಫೈನಲ್: ಪ್ಲೇಯಿಂಗ್ 11ನಿಂದ ಅಭಿಷೇಕ್ ಶರ್ಮಾರನ್ನು ಕೈಬಿಡಿ: ಸುನಿಲ್ ಗವಾಸ್ಕರ್ ಸಲಹೆ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
MS Dhoni: ಟೀಂ ಇಂಡಿಯಾ ಫೈನಲ್ ಪ್ರವೇಶದ ಹಿಂದಿದೆ ನಂಬರ್ '7' ಲಿಂಕ್: ಇಲ್ಲಿದೆ ಅಚ್ಚರಿ ಸಂಖ್ಯಾಶಾಸ್ತ್ರ -
Sanju Samson: ಶತಕ ಮುಖ್ಯವಲ್ಲ, 97, 89 ರನ್ ಗಳಿಸಿದ್ದೇ ದೊಡ್ಡ ವಿಷಯ: ಫೈನಲ್ಗೂ ಮುನ್ನ ಸಂಜು ಸ್ಯಾಮ್ಸನ್ ಹೇಳಿಕೆ ವೈರಲ್ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್







Click it and Unblock the Notifications