ಕೋಚ್ ಗಂಭೀರ್, ರಿಷಭ್ ನಡುವಿನ ಮುನಿಸು ತಣ್ಣಗಾಗಿಲ್ವಾ?
ಭಾರತ ಹಾಗೂ ಇಂಗ್ಲೆಂಡ್ ನಡುವೆ ಆಂಡರ್ಸನ್-ತೆಂಡೂಲ್ಕರ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್ಗಳ ಸೋಲು ಕಂಡಿದೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಎರಡೂ ಇನಿಂಗ್ಸ್ಗಳಲ್ಲಿ ಶತಕ ಬಾರಿಸಿ ಇತಿಹಾಸ ಬರೆದರು. ಟೀಮ್ ಇಂಡಿಯಾದ ಪರ 5 ಶತಕಗಳು ಈ ಪಂದ್ಯದಲ್ಲಿ ದಾಖಲಾದ್ರೂ ಪಂದ್ಯವನ್ನು ಗಿಲ್ ಪಡೆ ಕೈ ಚೆಲ್ಲಿತು. ಟೀಮ್ ಇಂಡಿಯಾ ಎರಡನೇ ಟೆಸ್ಟ್ಗೆ ಸಿದ್ಧತೆಯನ್ನು ನಡೆಸುತ್ತಿದೆ ಈ ವೇಳೆ ಅಭಿಮಾನಿಗಳಲ್ಲಿ ಒಂದು ಸಣ್ಣ ಪ್ರಶ್ನೆ ಹುಟ್ಟಿಕೊಂಡಿದೆ. ಕೋಚ್ ಗಂಭೀರ್, ರಿಷಭ್ ನಡುವೆ ಜಿದ್ದು ಕಡಿಮೆ ಆಗಿಲ್ವಾ?
ರಿಷಭ್ ಪಂತ್ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಸಂಬಂಧಗಳು ಸರಿಯಾಗಿಲ್ಲ ಎಂಬುದು ಹೇಳುವ ಅವಶ್ಯಕತೆ ಇಲ್ಲ. ಚಾಂಪಿಯನ್ಸ್ ಟ್ರೋಫಿಯ ವೇಳೆ ಗೌತಮ್ ಗಂಭೀರ್ ಕೆಎಲ್ ರಾಹುಲ್ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಹೇಳಿದ್ದರು. ಈ ಮೂಲಕ ರಿಷಭ್ ಪಂತ್ ಅವರನ್ನು ಚಾಂಪಿಯನ್ಸ್ ಟ್ರೋಫಿಯುದಕ್ಕೂ ಬೆಂಚ್ ಮೇಲೆ ಕೂರಿಸಿದ್ದರು. ಈ ವೇಳೆ ಪಂತ್ ಸಹ ತಮ್ಮ ಸಿಟ್ಟನ್ನು ಸಾಮಾಜಿಕ ತಾಣದಲ್ಲಿ ಹೊರ ಹಾಕಿದ್ದರು. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವುದು ಈಗ ಇತಿಹಾಸ.

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಗಿದು ಸರಿ ಸುಮಾರು 6 ತಿಂಗಳುಗಳೇ ಕಳೆದಿವೆ. ಈಗ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ವೇಳೆ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಇಬ್ಬರೂ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿ ತಂಡಕ್ಕೆ ಆಧಾರವಾಗಿದ್ದಾರೆ. ಈ ಬಗ್ಗೆ ಇತ್ತೀಚಿಗೆ ಗೌತಮ್ ಗಂಭೀರ್ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ ವೇಳೆ ರಿಷಭ್ ಹಾಗೂ ಗಂಭೀರ್ ನಡುವಿನ ಮುನಿಸು ಇನ್ನು ತಣ್ಣಗೆ ಆಗಿಲ್ಲ ಎಂಬುದು ತಿಳಿಯುತ್ತದೆ.
ತಣ್ಣಗಾಗದ ಮುನಿಸು
ವೈಯಕ್ತಿಕ ಪ್ರದರ್ಶನಕ್ಕಿಂತ ತಂಡದ ಪ್ರದರ್ಶನ ಇಂಪಾರ್ಟೆಂಟ್. ಜಸ್ಪ್ರೀತ್ ಬುಮ್ರಾ ಸಹ ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದರು. ಅಲ್ಲದೆ ಮೇಲ್ಪಂಕ್ತಿಯ ಆಟಗಾರರು ಸಹ ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾದರು. ಆದರೆ ಕೊನೆಯಲ್ಲಿ ಪಂದ್ಯದ ಫಲಿತಾಂಶ ಏನಾಯಿತು ಎಂಬುದೇ ಮುಖ್ಯ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠೀಯಲ್ಲಿ ರಿಷಭ್ ಪಂತ್ ಎರಡೂ ಇನಿಂಗ್ಸ್ನಲ್ಲಿ ಶತಕ ಬಾರಿಸಿದರು. ಏನು ಹೇಳುತ್ತೀರಿ ಎಂದು ಪ್ರಶ್ನೆ ಕೇಳಲಾಯಿತು. ಆಗ ಗಂಭೀರ್ ನೀವು ಹೀಗೆ ಹೇಳುತ್ತಿದ್ದರೆ ಅದು ಒಳ್ಳೆಯದು. ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ನಾಯಕನಾಗಿ ಚೊಚ್ಚಲ ಪಂದ್ಯದಲ್ಲೇ ಶುಭಮನ್ ಗಿಲ್ ಶತಕ ಬಾರಿಸಿದರು. ಈ ಬಗ್ಗೆಯೂ ಮಾತನಾಡಬೇಕು. ನನಗೆ ಅದು ಸಹ ಇಷ್ಟವಾಗುತ್ತದೆ. ಕೆಎಲ್ ರಾಹುಲ್ ಶತಕ ಬಾರಿಸಿದ್ದಾರೆ. ನೀವು ಪ್ರಶ್ನೆಯನ್ನು ಇನ್ನು ಚೆನ್ನಾಗಿ ಕೇಳಬಹುದಿತ್ತು ಎಂದು ತಿಳಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications