Breaking : ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಪಟುಗಳೊಂದಿಗೆ ಮೋದಿ ಸಂವಾದ
ನವದೆಹಲಿ, ಜುಲೈ 20: ಪ್ರಧಾನಿ ನರೇಂದ್ರ ಮೋದಿ ಬರ್ಮಿಂಗ್ ಹ್ಯಾಂನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ (CWG) 2022ಕ್ಕೆ ತಯಾರಾಗಿರುವ ಭಾರತೀಯ ತಂಡದೊಂದಿಗೆ ಬುಧವಾರ (ಜುಲೈ 20) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.
ಪ್ರಮುಖ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೊದಲು ಕ್ರೀಡಾಪಟುಗಳನ್ನು ಪ್ರೇರೇಪಿಸುವ ಕಾರಣಕ್ಕಾಗಿ ಸ್ಫರ್ಧಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಲಿದ್ದಾರೆ. ಇದು ನರೇಂದ್ರ ಮೋದಿಯವರ ನಿರಂತರ ಪ್ರಯತ್ನದ ಒಂದು ಭಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷವು, ಟೋಕಿಯೊ 2020 ರ ಒಲಿಂಪಿಕ್ಸ್ಗೆ ತಯಾರಾಗಿದ್ದ ಭಾರತೀಯ ಕ್ರೀಡಾಪಟುಗಳ ತಂಡ ಮತ್ತು ಟೋಕಿಯೊ 2020ರ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಹೊರಟ್ಟಿದ್ದ ಪ್ಯಾರಾ-ಅಥ್ಲೀಟ್ಗಳ ತಂಡದೊಂದಿಗೂ ಪ್ರಧಾನಿ ಮೋದಿ ಸಂವಾದ ನಡೆಸಿದ್ದರು.

ಕ್ರೀಡಾಕೂಟಗಳು ನಡೆಯುತ್ತಿದ್ದ ಸಂದರ್ಭದಲ್ಲೂ ಪ್ರಧಾನಮಂತ್ರಿಯವರು ಕ್ರೀಡಾಪಟುಗಳ ಪ್ರಗತಿಯ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ, ಅವರಿಗೆ ಮತ್ತಷ್ಟು ಹುಮ್ಮಸ್ಸು ನೀಡಿದ್ದರು. ಅನೇಕ ಸಂದರ್ಭಗಳಲ್ಲಿ ವೈಯಕ್ತಿಕವಾಗಿ ಕ್ರೀಡಾಪಟುಗಳನ್ನು ಅವರ ಯಶಸ್ಸು ಮತ್ತು ಪ್ರಾಮಾಣಿಕ ಪ್ರಯತ್ನಗಳಿಗೆ ಅಭಿನಂದಿಸಿದ್ದಾರೆ. ಹಲವು ಬಾರಿ ಕ್ರೀಡಾಕೂಟಗಳಿಂದ ಹಿಂತಿರುಗಿದ ನಂತರ ಪ್ರಧಾನ ಮಂತ್ರಿ ಅವರು ಕ್ರೀಡಾಪಟುಗಳನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ 2022 ಅನ್ನು ಬರ್ಮಿಂಗ್ಹ್ಯಾಮ್ನಲ್ಲಿ ಜುಲೈ 28 ರಿಂದ ಆಗಸ್ಟ್ 8 ರವರೆಗೆ ಆಯೋಜಿಸಲಾಗಿದೆ. 19 ಕ್ರೀಡಾ ವಿಭಾಗಗಳಲ್ಲಿ 141 ಈವೆಂಟ್ಗಳಲ್ಲಿ ಭಾಗವಹಿಸುವ ಒಟ್ಟು 215 ಕ್ರೀಡಾಪಟುಗಳು CWG 2022 ರಲ್ಲಿ ಭಾರತವನ್ನು ಪ್ರತಿನಿಧಿಸುತ್ತಾರೆ.
ಈ ಬಾರಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ನಿಂದ ಹಿರಿಯ ಬಾಕ್ಸರ್ ಮೇರಿ ಕೋಂ ಹೊರ ನಡೆದಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಎಂಸಿ ಮೇರಿ ಕೋಮ್ ಅವರು ಟೂರ್ನಮೆಂಟ್ ನಿಂದ ಅನಿವಾರ್ಯವಾಗಿ ಹೊರ ಬೀಳಬೇಕಾಗಿದೆ.
Recommended Video
ಈ ಮೂಲಕ ಮೇರಿ ಕೋಮ್ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಪಂದ್ಯಾವಳಿಯಲ್ಲಿ ಆಡುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. 2018ರ ಕಾಮನ್ ವೆಲ್ತ್ ಗೇಮ್ಸ್ ಆವೃತ್ತಿಯಲ್ಲಿ ಚಿನ್ನದ ಪದಕವನ್ನು ಪಡೆದ ಮೊದಲ ಭಾರತೀಯ ಮಹಿಳಾ ಬಾಕ್ಸರ್ ಆಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications