Mohammed Rizwan: ಪಾಕಿಸ್ತಾನ ಆಟಗಾರ ಮೊಹಮ್ಮದ್ ರಿಜ್ವಾನ್ ವಿರುದ್ಧ ದೂರು ದಾಖಲು
ಪಾಕಿಸ್ತಾನ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 6ರಂದು ಹೈದರಾಬಾದ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದ ವೇಳೆ, ಮೊಹಮ್ಮದ್ ರಿಜ್ವಾನ್ ನಮಾಜ್ ಮಾಡಿದ್ದರ ವಿರುದ್ಧ ದೂರು ನೀಡಲಾಗಿದೆ.
ಸುಪ್ರೀಂ ಕೋರ್ಟ್ ವಕೀಲರಾದ ವಿನೀತ್ ಜಿಂದಾಲ್ ಅವರು ಪಾಕಿಸ್ತಾನದ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ದೂರು ಸಲ್ಲಿಸಿದ್ದಾರೆ. ರಿಜ್ವಾನ್ ಅವರು ಮೈದಾನದಲ್ಲಿ ನಮಾಜ್ ಮಾಡುವ ಮೂಲಕ ಸ್ಪಿರಿಟ್ ಆಫ್ ಗೇಮ್ ಅನ್ನು ಕಡೆಗಣಿಸಿದ್ದಾರೆ ಎಂದು ಹೇಳಿದ್ದಾರೆ.

ವಿನೀತ್ ಜಿಂದಾಲ್ ಅವರು ಈ ಹಿಂದೆ ಪಾಕಿಸ್ತಾನದ ಆತಿಥೇಯ ಮತ್ತು ಕಾಮೆಂಟೇಟರ್ ಜೈನಾಬ್ ಅಬ್ಬಾಸ್ ವಿರುದ್ಧ ದೂರು ದಾಖಲಿಸಿದ್ದರು, ಅವರ ಟ್ವೀಟ್ಗಳು ಭಾರತೀಯರು ಮತ್ತು ಹಿಂದೂ ಧರ್ಮದ ಬಗ್ಗೆ ಧರ್ಮನಿಂದೆಯ ಮತ್ತು ಆಕ್ರಮಣಕಾರಿ ಎಂದು ಆರೋಪ ಮಾಡಿದ್ದರು.
2021ರಲ್ಲೂ ನಮಾಜ್ ಮಾಡಿದ್ದ ರಿಜ್ವಾನ್
ಮೊಹಮ್ಮದ್ ರಿಜ್ವಾನ್ ಆಟದ ಮಧ್ಯದಲ್ಲಿ ನಮಾಜ್ ಮಾಡಿದ ಇದೇ ಮೊದಲಲ್ಲ, 2021 ರ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ರಿಜ್ವಾನ್ ಇದೇ ರೀತಿ ಮಾಡಿದರು. ಈ ಸಮಯದಲ್ಲಿ ವಿಕೆಟ್ಕೀಪರ್ ವಿರುದ್ಧ ಟೀಕೆ ಕೇಳಿಬರಲಿಲ್ಲ.
2023 ರ ವಿಶ್ವಕಪ್ ಭಾರತದಲ್ಲಿ ನಡೆಯುವುದರಿಂದ ಮತ್ತು ಮೈದಾನದ ಹೊರಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಹೆಚ್ಚು ತಿಕ್ಕಾಟ ಇರುವುದರಿಂದ, ಆಟಗಾರನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ.
ಪಾಕಿಸ್ತಾನ ತನ್ನ ಎರಡನೇ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿದ ನಂತರ, ಅಕ್ಟೋಬರ್ 11 ರಂದು ಗಾಜಾವನ್ನು ಬೆಂಬಲಿಸಿ ಮೊಹಮ್ಮದ್ ರಿಜ್ವಾನ್ ಟ್ವೀಟ್ ಮಾಡಿದ್ದರು, ಆದರೆ ಇದರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರಲು ಐಸಿಸಿ ನಿರ್ಧಾರ ಮಾಡಿತ್ತು.
ಮೈದಾನದ ಹೊರಗೆ ವ್ಯಕ್ತಿಯೊಬ್ಬರು ಏನು ಮಾಡುತ್ತಾರೋ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ತಮ್ಮ ಅಧಿಕಾರದಲ್ಲಿಲ್ಲ ಎಂದು ಐಸಿಸಿ ಹೇಳಿದೆ. ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೆ, ಅದು ಪಿಸಿಬಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತೆಗೆದುಕೊಳ್ಳಬೇಕು ಎಂದು ಹೇಳಿದೆ.
ಜೈಶ್ರೀರಾಮ್ ಘೋಷಣೆ
ಇನ್ನು ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಆಟಗಾರ ಮೊಹಮ್ಮದ್ ರಿಜ್ವಾನ್ ಅವರ ಮುಂದೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದು ವಿವಾದಕ್ಕೆ ಕಾರಣವಾಗಿತ್ತು, ಆಟಗಳಲ್ಲಿ ಧರ್ಮ ತರಬಾರದು ಎಂದು ಹಲವರು ಹೇಳಿದ್ದರು, ಆದರೆ ಹೈದರಾಬಾದ್ನಲ್ಲಿ ನಮಾಜ್ ಮಾಡಿದ್ದು ಮತ್ತು ಪ್ಯಾಲೆಸ್ಟಿನ್ಗೆ ಬೆಂಬಲ ನೀಡಿದ್ದಕ್ಕೆ ಪ್ರತಿಯಾಗಿ ಅವರ ಮುಂದು ಜೈಶ್ರೀರಾಮ್ ಘೋಷಣೆ ಮಾಡಲಾಗಿದೆ ಎಂದು ಕೆಲವರು ಸಮರ್ಥನೆ ನೀಡಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications