CSK vs RR: ರಾಜಸ್ಥಾನ್ ರಾಯಲ್ಸ್ಗೆ ಗೆಲ್ಲುವ ಉದ್ದೇಶವೇ ಇರಲಿಲ್ಲ! ಟ್ರೆಂಡ್ ಆಯ್ತು 'ಫಿಕ್ಸರ್ಸ್' ಹ್ಯಾಷ್ಟ್ಯಾಗ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಪಂದ್ಯಾವಳಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದತ್ತ ಸಾಗುತ್ತಿದ್ದು, ಪ್ಲೇ ಆಫ್ ತಲುಪಲು ಸಿಕ್ಕಾಪಟ್ಟೆ ಸ್ಪರ್ಧೆ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಪ್ಲೇಆಫ್ ತಲುಪಿದ ಮೊದಲ ತಂಡವಾಗಿದ್ದು, ಇನ್ನೂ ಮೂರು ಸ್ಥಾನಗಳು ಖಾಲಿ ಇವೆ.
ರಾಜಸ್ಥಾನ್ ರಾಯಲ್ಸ್ (RR) ಸಿಎಸ್ಕೆ ವಿರುದ್ಧ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸೋಲುವ ಮೂಲಕ ಕ್ವಾಲಿಫೈ ಆಗುವ ಅವಕಾಶ ಕಳೆದುಕೊಂಡಿದೆ, ಆದರೂ ಮುಂದಿನ ಪಂದ್ಯ ಗೆದ್ದು ಪ್ಲೇ ಆಫ್ ತಲುಪುವ ಅವಕಾಶ ರಾಜಸ್ಥಾನಕ್ಕೆ ಇದೆ.

ಸಿಎಸ್ಕೆ ವಿರುದ್ಧದ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳು ಕೋಪಗೊಂಡಿದ್ದು, ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಫಿಕ್ಸರ್ಸ್ ಎನ್ನುವ ಹ್ಯಾಷ್ಟ್ಯಾಗ್ ಟ್ರೆಂಡಿಂಗ್ ಆಗಿದೆ.
ಅಭಿಮಾನಿಗಳಿಗೆ ಕೋಪ ಯಾಕೆ?
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ 20 ಓವರ್ ಗಳಲ್ಲಿ ರಾಜಸ್ಥಾನ 5 ವಿಕೆಟ್ ಕಳೆದುಕೊಂಡು 141 ರನ್ಗಳನ್ನು ಮಾತ್ರ ಕಲೆಹಾಕಿತು. ರಿಯಾನ್ ಪರಾಗ್ (ಔಟಾಗದೆ 47 ರನ್) ಮತ್ತು ಧ್ರುವ್ ಜುರೆಲ್ (18 ಎಸೆತಗಳಲ್ಲಿ 28 ರನ್) ಮಾತ್ರ ತಕ್ಕ ಮಟ್ಟಿಗೆ ಬ್ಯಾಟಿಂಗ್ ಪ್ರದರ್ಶನ ಕೊಟ್ಟರು.
Is it fixing? It looks like RR have no intentions to win while doing strange batting...!!#Fixing #Fixed #CSKvRR #RRvsCSK pic.twitter.com/cBT5S5v4AT
— Hanuman Jakhar (@Hanumaan_Barmer) May 12, 2024
ಯಶಸ್ವಿ ಜೈಸ್ವಾಲ್ (21 ಎಸೆತಗಳಲ್ಲಿ 24 ರನ), ಜೋಸ್ ಬಟ್ಲರ್ (25 ಎಸೆತಗಳಲ್ಲಿ 21 ರನ್) ಮತ್ತು ನಾಯಕ ಸಂಜು ಸ್ಯಾಮ್ಸನ್ (19 ಎಸೆತಗಳಲ್ಲಿ 15 ರನ್) ಗಳಿಸಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು. ಈ ಮೂವರು ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರೆ ರಾಜಸ್ಥಾನ ರಾಯಲ್ಸ್ಗೆ ಗೆಲ್ಲುವ ಅವಕಾಶ ಹೆಚ್ಚಾಗಿತ್ತು.
ಇದನ್ನು ಕಂಡ ನೆಟ್ಟಿಗರು ಎಕ್ಸ್ನಲ್ಲಿ ಮ್ಯಾಚ್-ಫಿಕ್ಸಿಂಗ್ ವಿವಾದವನ್ನು ಹುಟ್ಟುಹಾಕಿದರು, ಈ ಮೊದಲು ಎರಡೂ ತಂಡಗಳು ಬ್ಯಾನ್ ಆಗಿದ್ದನ್ನು ಕೂಡ ನೆನಪಿಸಿದ್ದಾರೆ.
Ban them again. Fair IPL Definitely not 💔
— KR A K EN (20 ᴍᴀʏ) (@KRAKEN_____) May 12, 2024
Fixers will always remain fixers🤡#Fixing #Fixed #CSKvRR #RRvsCSK
pic.twitter.com/kmsBR2iuBc
ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ 2013 ರ ಋತುವಿನಲ್ಲಿ ಬೆಟ್ಟಿಂಗ್ ಚಟುವಟಿಕೆಗಳಲ್ಲಿ ತಮ್ಮ ಪ್ರಮುಖ ಅಧಿಕಾರಿಗಳು ತೊಡಗಿಸಿಕೊಂಡಿದ್ದಕ್ಕಾಗಿ ಐಪಿಎಲ್ನಿಂದ ಎರಡು ವರ್ಷಗಳ ಕಾಲ ನಿಷೇಧಿಸಲಾಗಿತ್ತು. 2016 ಮತ್ತು 2017 ರಲ್ಲಿ ಎರಡೂ ತಂಡಗಳು ಐಪಿಎಲ್ನಿಂದ ನಿಷೇಧಕ್ಕೊಳಗಾಗಿದ್ದವು.
ನಿಧಾನಗತಿಯ ಬ್ಯಾಟಿಂಗ್ ನೋಡಿದ ಅಭಿಮಾನಿಗಳು ರಾಜಸ್ಥಾನ ರಾಯಲ್ಸ್ಗೆ ಪಂದ್ಯ ಗೆಲ್ಲುವ ಉದ್ದೇಶವೇ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಆದರೆ ಸಿಎಸ್ಕೆ ಕೂಡ ಬ್ಯಾಟಿಂಗ್ ಮಾಡಲು ಕಷ್ಟಪಟ್ಟಿದ್ದನ್ನು ನೋಡಬಹುದು. ಕೊನೆಗೂ ಸಿಎಸ್ಕೆ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications