Cricket World Cup: ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳು ಮಾಡುತ್ತಿರುವ ಅಮಿತ್ ಶಾ ಮಗ- ಜಯ್ ಶಾ ಮೇಲೆ ಗೂಬೆ
ವಿಶ್ವಕಪ್ ಕ್ರಿಕೆಟ್ನಲ್ಲಿ ಶ್ರೀಲಂಕಾದ ಹೀನಾಯ ಸೋಲಿಗೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮಗ ಜಯ್ ಶಾ ಅವರು ಕಾರಣವೆಂದು ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕರೂ ಆಗಿರುವ ಅರ್ಜುನ ರಣತುಂಗ ಬಿಸಿಸಿಐ ಕಾರ್ಯದರ್ಶಿ ಜಯ್ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ.
2023 ರ ಏಕದಿನ ವಿಶ್ವಕಪ್ನಲ್ಲಿ ಸೋತ ನಂತರ ಅರ್ಜುನ ರಣತುಂಗ ಅವರು ಈ ಆರೋಪಗಳನ್ನು ಮಾಡಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಅನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹಾಳುಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಶ್ರೀಲಂಕಾದ ದಿನಪತ್ರಿಕೆ ಡೈಲಿ ಮಿರರ್ನಲ್ಲಿ ಮಾತನಾಡಿರುವ ಅವರು, 'ಎಸ್ಎಲ್ಸಿ ( ಶ್ರೀಲಂಕಾ ಕ್ರಿಕೆಟ್ ಕಮಿಟಿ) ಅಧಿಕಾರಿಗಳು ಮತ್ತು ಜಯ್ ಶಾ ನಡುವೆ ಉತ್ತಮ ಸಂಬಂಧವಿದೆ. ಇವರ ನಡುವಿನ ಒಡಂಬಡಿಕೆಯಿಂದ ಸೋಲಾಗಿದೆ. ಎಸ್ಎಲ್ಸಿಯನ್ನು ಬಿಸಿಸಿಐ ತುಳಿಯಬಹುದು ಮತ್ತು ನಿಯಂತ್ರಿಸಬಹುದು ಎಂಬ ಅಭಿಪ್ರಾಯಗಳನ್ನು ಈ ಅಧಿಕಾರಿಗಳು ಹೊಂದಿದ್ದಾರೆ' ಎಂದು ಅರ್ಜುನ ರಣತುಂಗ ಆರೋಪಿಸಿದ್ದಾರೆ.
'ಜಯ್ ಶಾ ಶ್ರೀಲಂಕಾ ಕ್ರಿಕೆಟ್ ಅನ್ನು ನಡೆಸುತ್ತಿದ್ದಾರೆ. ಜಯ್ ಶಾ ಅವರ ಒತ್ತಡದಿಂದಾಗಿ ಎಸ್ಎಲ್ಸಿ ಹಾಳಾಗುತ್ತಿದೆ. ಭಾರತದಲ್ಲಿರುವ ಒಬ್ಬ ವ್ಯಕ್ತಿ ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳುಮಾಡುತ್ತಿದ್ದಾನೆ' ಎಂದು ರಣತುಂಗ ಹೇಳಿದ್ದಾರೆ. ಅರ್ಜುನ ರಣತುಂಗ ಅವರು ಶ್ರೀಲಂಕಾದ 1996 ರ ವಿಶ್ವಕಪ್ ವಿಜೇತ ನಾಯಕರಾಗಿದ್ದಾರೆ.
'ಜಯ್ ಶಾ ಕ್ರಿಕೆಟಿಗರಲ್ಲ. ಅವರ ತಂದೆ ಭಾರತದ ಗೃಹ ಸಚಿವರಾಗಿದ್ದಾರೆ. ಅವರ ತಂದೆಯಿಂದಾಗಿ ಜಯ್ ಶಾ ಪ್ರಭಾವಶಾಲಿಯಾಗಿದ್ದಾರೆ' ಎಂದು ಹೇಳಿದ್ದಾರೆ.

ಶ್ರೀಲಂಕಾ ವಿಶ್ವಕಪ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಗಳಿಸಿದೆ. ಅಂದರೆ ಅವರು 2025 ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯುವುದಿಲ್ಲ. ಇದು ಶ್ರೀಲಂಕಾದ ಮಾಜಿ ಕ್ರಿಕೆಟಿಗರನ್ನು ಕೆರಳಿಸಿದೆ.
ಶ್ರೀಲಂಕಾದ ಕ್ರೀಡಾ ಸಚಿವ ರೋಶನ್ ರಣಸಿಂಘೆ ಅವರು ಎಸ್ಎಲ್ಸಿ ಮಂಡಳಿಯನ್ನು ವಜಾಗೊಳಿಸಿದ್ದಾರೆ. ಅರ್ಜುನ ರಣತುಂಗ ನೇತೃತ್ವದ ಮಧ್ಯಂತರ ಸಮಿತಿಯನ್ನು ಸ್ಥಾಪಿಸಿದ್ದಾರೆ. ಆದರೆ ಶ್ರೀಲಂಕಾದ ನ್ಯಾಯಾಲಯ ಮಂಡಳಿಯನ್ನು ವಿಸರ್ಜಿಸಿದ ಗೆಜೆಟ್ಗೆ 14 ದಿನಗಳ ತಡೆಯಾಜ್ಞೆ ನೀಡುದೆ. ಈ ಮೂಲಕ ಒಂದು ದಿನದ ನಂತರ ಮಂಡಳಿಯನ್ನು ಮರುಸ್ಥಾಪಿಸಿವೆ.
ಮಂಡಳಿಯ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿದೆ.
ಶುಕ್ರವಾರ ರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಎಸ್ಎಲ್ಸಿ ಮಂಡಳಿಯು ತನ್ನ ಜವಾಬ್ದಾರಿಗಳನ್ನು ಉಲ್ಲಂಘಿಸಿದೆ ಎಂದು ಐಸಿಸಿ ಹೇಳಿದೆ. ನಿರ್ದಿಷ್ಟವಾಗಿ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ಮತ್ತು ಸರ್ಕಾರದ ಹಸ್ತಕ್ಷೇಪವಿಲ್ಲದೆ ನಿರ್ವಹಿಸುವ ಅವಶ್ಯಕತೆಯಿದೆ ಎಂದು ಅದು ಪ್ರತಿಪಾದಿಸಿದೆ.
'ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ' ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಐಸಿಸಿ ಮಂಡಳಿಯು ನವೆಂಬರ್ 21 ರಂದು ಸಭೆ ಸೇರಲಿದ್ದು, ನಂತರ ಮುಂದಿನ ಕ್ರಮವು ಸ್ಪಷ್ಟವಾಗುವ ನಿರೀಕ್ಷೆಯಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications