ರಾಬಿನ್ ಉತ್ತಪ್ಪ ಕುಟುಂಬಕ್ಕೆ ಹೊಸ ಅತಿಥಿ ಆಗಮನ
ಬೆಂಗಳೂರು,ಜುಲೈ 14 : ಭಾರತ ಕ್ರಿಕೆಟ್ ತಂಡದ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪರ ಪತ್ನಿ ಶೀತಲ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗುವಿಗೆ 'ಟ್ರಿನಿಟಿ ಥಿಯಾ ಉತ್ತಪ್ಪ' ಎಂದು ನಾಮಕರಣ ಮಾಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡುತ್ತಿರುವ ಸ್ಟಾರ್ ಬ್ಯಾಟರ್ ರಾಬಿನ್ ಉತ್ತಪ್ಪ ತಮ್ಮ ಮನೆಗೆ ಹೆಣ್ಣು ಮಗು ಆಗಮಿಸುತ್ತಿರುವ ಸಂಭ್ರಮವನ್ನು ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ರಾಬಿನ್ ಉತ್ತಪ್ಪ ಹಂಚಿಕೊಂಡಿದ್ದಾರೆ.
ಪತ್ನಿ ಶೀತಲ್, ಮಗ ಹಾಗೂ ಮುದ್ದಾದ ಮಗುವಿನ ಎತ್ತಿಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ " ನಾವಿಂದು ನಮ್ಮ ಕುಟುಂಬದ ಹೊಸ ದೇವತೆಯನ್ನು ಪರಿಚಯಿಸಲು ನನ್ನ ಹೃದಯ ತುಂಬಿ ಬರುತ್ತಿದೆ. ಹೊಸ ಮಗುವಿಗೆ ಟ್ರಿನಿಟಿ ಥಿಯಾ ಉತ್ತಪ್ಪ" ಎಂದು ನಾಮಕರಣ ಮಾಡಿರುವುದಾಗಿ ತಿಳಿಸಿರುವ ಉತ್ತಪ್ಪ ತಮ್ಮ ಮಗುವಿಗೆ" ನೀನು ಜಗತ್ತಿಗೆ ಬರಲು ನಮ್ಮನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ನಾವು ಕೃತಜ್ಞರಾಗಿದ್ದೇವೆ" ಎಂದು ಧನ್ಯವಾದ ತಿಳಿಸಿದ್ದಾರೆ.

ಇನ್ನು ಉತ್ತಪ್ಪರ ಈ ಪೋಸ್ಟ್ಗೆ ಭಾರತ ತಂಡದ ಉಪನಾಯಕ ಹಾಗೂ ಕನ್ನಡಿಗ ಕೆ. ಎಲ್. ರಾಹುಲ್, ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ , ಪಯೂಷ್ ಚಾವ್ಲಾ ಸೇರಿದಂತೆ ಹಲವು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಅಭಿನಂದನೆ ಸಲ್ಲಿಸಿದ್ದಾರೆ.
2006ರಲ್ಲಿ ಇಂಗ್ಲೆಂಡ್ ಎದುರು ಏಕದಿನ ಪಂದ್ಯದಲ್ಲಿ ಭಾರತದ ಪರ ಪಾದಾರ್ಪಣೆ ಮಾಡಿದ ರಾಬಿನ್ ಉತ್ತಪ್ಪ, 2007ರಲ್ಲಿ ಎಂಎಸ್ ಧೋನಿ ನೇತೃತ್ವದಲ್ಲಿ ಗೆದ್ದ ಐಸಿಸಿ ಟಿ20 ವಿಶ್ವಕಪ್ ತಂಡ ಭಾಗವಾಗಿದ್ದರು. ಅವರು ಭಾರತದ ಪರ 46 ಏಕದಿನ ಹಾಗೂ 13 ಟಿ20 ಪಂದ್ಯಗಳನ್ನಾಡಿ ಕ್ರಮವಾಗಿ 934 ಹಾಗೂ 249 ರನ್ ಬಾರಿಸಿದ್ದಾರೆ.

ಐಪಿಎಲ್ನಲ್ಲಿ ಹಲವು ತಂಡಗಳ ಪರ ಆಡಿರುವ ಉತ್ತಪ್ಪ 205 ಐಪಿಎಲ್ ಪಂದ್ಯಗಳನ್ನಾಡಿ 4,952 ರನ್ ಗಳಿಸಿದ್ದಾರೆ. 2021ರಲ್ಲಿ ಮತ್ತೆ ಎಂ ಎಸ್ ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪರ ಆಡಿದ್ದ ಉತ್ತಪ್ಪ ತಂಡ ಚಾಂಪಿಯನ್ಪಟ್ಟಕ್ಕೇರಲು ನಿರ್ಣಾಯಕ ಪಾತ್ರವಹಿಸಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications