ಭಾರತದಲ್ಲಿ ಆಕ್ಸಿಜನ್ ಕೊರತೆ: ಕ್ರಿಕೆಟಿಗ ಶೋಯೆಬ್ ಅಖ್ತರ್ ಮಾಡಿದ ಮನವಿ
ಲಾಹೋರ್, ಏಪ್ರಿಲ್ 27: ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಸದಾ ಸುದ್ದಿಯಲ್ಲಿರುವ ರಾವಲ್ಪಿಂಡಿ ಎಕ್ಸ್ ಪ್ರೆಸ್ ಎಂದೇ ಕರೆಯಲ್ಪಡುವ ಶೋಯೆಬ್ ಅಖ್ತರ್, ಕೊರೊನಾ ಎರಡನೇ ಅಲೆಯಿಂದ ತತ್ತರಿಸಿರುವ ಹೋಗಿರುವ ಭಾರತದ ಬಗ್ಗೆ ಮರುಗಿದ್ದಾರೆ.
ಪ್ರೇಕ್ಷಕರಿಲ್ಲದೇ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ಅನ್ನು ಈ ಕೂಡಲೇ ನಿಲ್ಲಿಸಬೇಕೆಂದು ಬಿಸಿಸಿಐಗೆ ಅಖ್ತರ್ ಮನವಿ ಮಾಡಿದ್ದಾರೆ. ಜೊತೆಗೆ, ಆ ದುಡ್ಡನ್ನು ಭಾರತ ಸರಕಾರಕ್ಕೆ ನೀಡಿ, ಆಕ್ಸಿಜನ್ ಖರೀದಿಸಲು ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.
ಬಿಸಿಸಿಐ ಜೊತೆ ಪಿಸಿಬಿಗೂ (ಪಾಕಿಸ್ತಾನ ಕ್ರಿಕೆಟ್ ಬೋರ್ಡ್) ಮನವಿ ಮಾಡಿರುವ ಅಖ್ತರ್, ಜೂನ್ ಒಂದರಿಂದ ಆರಂಭವಾಗಲಿರುವ ಪಾಕಿಸ್ತಾನ ಸೂಪರ್ ಲೀಗ್ ಪಂದ್ಯಾವಳಿಗಳನ್ನೂ ಮುಂದೂಡುವಂತೆ ಒತ್ತಾಯಿಸಿದ್ದಾರೆ.

"ದಿನವೊಂದಕ್ಕೆ ಮೂರು ಲಕ್ಷಕ್ಕೂ ಹೆಚ್ಚು ಕೋವಿಡ್ ಕೇಸುಗಳು ದಾಖಲಾಗುತ್ತವೆ. ಇಂತಹ ಸಮಯದಲ್ಲಿ ಆಡುವ ಕ್ರಿಕೆಟ್ ನಮಗೆ ಬೇಕಾಗಿಲ್ಲ. ಇದಕ್ಕೆ ವ್ಯಯಿಸಲಾಗುವ ದುಡ್ಡನ್ನು ಕೈಲಾಗದವರಿಗೆ ಕೊಟ್ಟು ಒಳ್ಳೆಯ ಕೆಲಸವನ್ನು ಮಾಡಿ" ಎಂದು ಶೋಯೆಬ್ ಅಖ್ತರ್ ಮನವಿ ಮಾಡಿದ್ದಾರೆ.
"ಭಾರತದಲ್ಲಿ ಬೆಡ್, ಆಕ್ಸಿಜನ್ ಕೊರತೆ ಕಾಡುತ್ತಿದೆ, ಇಂತಹ ಸಮಯದಲ್ಲಿ ಅಬ್ಬರದ ಐಪಿಎಲ್ ಬೇಕೇ" ಎಂದು ಪ್ರಶ್ನಿಸಿರುವ ಅಖ್ತರ್, ಪಾಕಿಸ್ತಾನದಲ್ಲೂ ಕೋವಿಡ್ ಕೇಸುಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.
ಕೆಲವು ದಿನಗಳ ಹಿಂದೆ 'ಇಂಡಿಯಾ ನೀಡ್ಸ್ ಆಕ್ಸಿಜನ್' ಎನ್ನುವ ಟ್ವಿಟ್ಟರ್ ಹ್ಯಾಷ್ ಟ್ಯಾಗ್ ಪಾಕಿಸ್ತಾನದಲ್ಲಿ ಟ್ರೆಂಡಿಂಗ್ ಆಗಿತ್ತು. ಹಲವು ಪಾಕಿಸ್ತಾನದ ಸಂಸ್ಥೆಗಳು, ಭಾರತ ಸರಕಾರ ಅನುಮತಿ ನೀಡಿದರೆ, ಆಕ್ಸಿಜನ್ ಸಿಲಿಂಡರ್ ಕಳುಹಿಸಲು ನಾವು ಸಿದ್ದ, ಗಡಿ ಓಪನ್ ಮಾಡಿ ಎಂದಿದ್ದವು.
-
Lockdown: ಭಾರತದಲ್ಲಿ ಲಾಕ್ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications