ಗಂಧದಗುಡಿ: ಕುಂಬ್ಳೆ, ಶ್ರೀನಾಥ್ ಸೇರಿ ಕ್ರಿಕೆಟ್ ದಿಗ್ಗಜರಿಂದ ಶುಭ ಹಾರೈಕೆ
ಬೆಂಗಳೂರು, ಅಕ್ಟೋಬರ್ 27: ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಗೆದ್ದಿರುವ ದಿವಂಗತ ನಟ ಪುನೀತ್ ರಾಜ್ ಕುಮಾರ್ ಕನಸಿನ ಕೂಸಾಗಿರುವ ಗಂಧದ ಗುಡಿ ಸಿನಿಮಾ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾಗೆ ರಾಜ್ಯ, ಭಾಷೆ ಗಡಿ ದಾಟಿ ಹಲವು ಸೆಲೆಬ್ರೆಟಿಗಳು ಶುಭ ಹಾರೈಸಿದ್ದಾರೆ.
ಅಪ್ಪುವನ್ನು ಕೊನೆಯ ಬಾರಿ ಥಿಯೇಟರ್ನಲ್ಲಿ ಕಣ್ತುಂಬಿಕೊಳ್ಳುವ ಸಿಕ್ಕಿರುವ ಕೊನೆಯ ಅವಕಾಶಕ್ಕಾಗಿ ಲಕ್ಷಾಂತರ ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. ಈ ಸಿನಿಮಾಗೆ ಕೇವಲ ಸಿನಿಮಾ ನಟ-ನಟಿಯರಲ್ಲದೆ ಕ್ರಿಕೆಟ್ ದಿಗ್ಗಜರೂ ಕೂಡ ಬೆಂಬಲ ಸೂಚಿಸಿದ್ದು, ಅಭಿಮಾನಿಗಳೆಲ್ಲರೂ ಥಿಯೇಟರ್ಗೆ ಆಗಮಿಸಿ ವೀಕ್ಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
Looking forward to watching #GandhadaGudi Best wishes to the entire team @Ashwini_PRK #DrPuneethRajkumar @PRK_Productions @PRKAudio @AJANEESHB #Mudskipper @pratheek_dbf @KRG_Studios @KRG_Connects #GGMovie #PowerInU pic.twitter.com/Zr23UNwERi
— Anil Kumble (@anilkumble1074) October 27, 2022
ಭಾರತ ತಂಡದ ಮಾಜಿ ಸ್ಪಿನ್ನರ್, ಕನ್ನಡಿಗ ಅನಿಲ್ ಕುಂಬ್ಳೆ ಈ ಕುರಿತು ಟ್ವೀಟ್ ಮಾಡಿದ್ದು, "ಗಂಧದ ಗುಡಿ ಸಿನಿಮಾವನ್ನು ನೋಡುವುದಕ್ಕೆ ಎದುರು ನೋಡುತ್ತಿದ್ದೇನೆ, ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಇಡೀ ತಂಡಕ್ಕೆ ಶುಭವಾಗಲಿ" ಎಂದು ಟ್ವೀಟ್ ಮಾಡಿದ್ದಾರೆ.

ಭಾರತ ತಂಡದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಗಂಧದ ಗುಡಿ ತಂಡಕ್ಕೆ ಒಳ್ಳೆಯದಾಗಲಿ ಎಂದು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
Puneeth bhai lives in the heart of his fans. My brother, a great friend and a great support always. Please watch his movie releasing on 28th October in the theatres near you. His legacy must continue. Best wishes to @ashwini_PRK bhabhi. #DrPuneethRajkumar pic.twitter.com/qyXcSTWS44
— Amit Mishra (@MishiAmit) October 26, 2022
ಪುನೀತ್ ಭಾಯ್ ಪ್ರತಿಯೊಬ್ಬ ಅಭಿಮಾನಿಯ ಹೃದಯದಲ್ಲಿ ನೆಲೆಸಿದ್ದಾರೆ. ಅವರು ನನ್ನ ಸಹೋದರ, ಅತ್ಯುತ್ತಮ ಗೆಳೆಯ ಹಾಗೂ ಪ್ರತಿಯೊಂದು ವಿಷಯದಲ್ಲಿ ಬೆಂಬಲಿಸುವ ವ್ಯಕ್ತಿ. ದಯವಿಟ್ಟು ಅಕ್ಟೋಬರ್ 28ರಿಂದ ಬಿಡುಗಡೆಯಾಗಿರುವ ಗಂಧದಗುಡಿ ಸಿನಿಮಾವನ್ನು ನಿಮ್ಮ ಹತ್ತಿರದ ಚಿತ್ರಮಂದಿರದಲ್ಲಿ ನೋಡಿ. ಈ ಮೂಲಕ ಅವರ ಪರಂಪರೆಯನ್ನು ಮುಂದುವರಿಯಲಿ. ಅಶ್ವಿನಿ ಪುನೀತ್ ರಾಜ್ ಕುಮಾರ್ಗೆ ಶುಭಾಶಯ ಎಂದು ಮಾಜಿ ಸ್ಪಿನ್ನರ್ ಅಮಿತ್ ಮಿಶ್ರಾ ಪುನೀತ್ ದಂಪತಿಯೊಂದಿಗಿನ ಫೋಟೋವನ್ನು ಶೇರ್ ಮಾಡಿಕೊಂಡು ಶುಭಾಶಯ ಕೋರಿದ್ದಾರೆ.
ಭಾರತದ ಹಾಕಿ ತಂಡದ ಆಟಗಾರ ಎಸ್ವಿ ಸುನೀಲ್ "ನಾವು ಅಗಾಧವಾಗಿ ಪ್ರೀತಿಸುವ ವ್ಯಕ್ತಿಯ ಗಂಧದಗುಡಿ ಚಿತ್ರ ಪ್ರಪಂಚದಾದ್ಯಂತ ಅಕ್ಟೋಬರ್ 28 ರಂದು ಬಿಡುಗಡೆಯಾಗುತ್ತಿದೆ. ನಮ್ಮ ಪ್ರೀತಿಯ ಅಪ್ಪು ನಟಿಸಿದ ಕೊನೆಯ ಚಿತ್ರ ಕರ್ನಾಟಕದಲ್ಲಿ ಹಬ್ಬದಂತೆ ಆಚರಿಸೋಣ, ಇದು ವನ್ಯಜೀವಿ ಮತ್ತು ಪರಂಪರೆಯ ಚಿತ್ರವಾಗಿದೆ. ಶುಭವಾಗಲಿ," ಎಂದು ಬರೆದುಕೊಂಡಿದ್ದಾರೆ.
It's time to embrace our beloved Puneeth Rajkumar, who always gave us a flawless smile and selfless love.
— VVS Laxman (@VVSLaxman281) October 27, 2022
Gandhada Gudi, a tribute to the rich wildlife and heritage of Karnataka releases across the world on Oct 28 Wishing the team the very best @Ashwini_PRK pic.twitter.com/aGc9zBlcO3
ಭಾರತ ತಂಡದ ಮತ್ತೊಬ್ಬ ಲೆಜೆಂಡರಿ ಕ್ರಿಕೆಟರ್ ವಿವಿಎಸ್ ಲಕ್ಷ್ಮಣ್ ಕೂಡ ಶುಭಾರೈಸಿದ್ದು, "ನಿಶ್ವಾರ್ಥ ಪ್ರೀತಿ ಮತ್ತು ಧೋಷರಹಿತ ನಗುವನ್ನು ಕೊಡುತ್ತಿದ್ದ ನಮ್ಮ ಪ್ರೀತಿಯ ಪುನೀತ್ ರಾಜ್ ಕುಮಾರ್ ಅವರನ್ನು ನಾವೆಲ್ಲಾ ಅಪ್ಪಿಕೊಳ್ಳುವ ಸಮಯವಿದು, ಕರ್ನಾಟಕದ ಶ್ರೀಮಂತ ವನ್ಯಜೀವಿ ಮತ್ತು ಪರಂಪರಗೆ ಗೌರವ ಸೂಚಿಸುವ ಗಂಧದ ಗುಡಿ ಚಿತ್ರ ಅಕ್ಟೋಬರ್ 28ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ತಂಡಕ್ಕೆ ಒಳ್ಳೆಯದಾಗಲಿ" ಎಂದು ಶುಭಾ ಕೋರಿದ್ದಾರೆ.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications