MS Dhoni: ಎಂಎಸ್ ಧೋನಿ ನಿವೃತ್ತಿ ಬಗ್ಗೆ ಸಿಎಸ್ಕೆ ಕೋಚ್ ಸ್ಪಷ್ಟನೆ
ಐಪಿಎಲ್ 2025ರ ಆವೃತ್ತಿಯಲ್ಲಿ ಸಿಎಸ್ಕೆ ತಂಡದ ಸೋಲಿನ ಸರಣಿ ಮುಂದುವರೆದಿದೆ. ಮೊದಲ ಪಂದ್ಯದದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿದ್ದ ಸಿಎಸ್ಕೆ ಎರಡನೇ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಸೋಲು ಕಂಡಿತ್ತು. ಅದಾದ ಬಳಿಕ ಸತತ ಎರಡು ಪಂದ್ಯಗಳಲ್ಲೂ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಸತತವಾಗಿ ಮೂರು ಪಂದ್ಯಗಳನ್ನು ಸೋತಿದ್ದು ಅಭಿಮಾನಿಗಳು ಸಿಟ್ಟಾಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸಿಎಸ್ಕೆ ವಿರುದ್ಧ 25 ರನ್ಗಳಿಂದ ಗೆಲುವು ಕಂಡಿದೆ. 15 ವರ್ಷಗಳ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸಿಎಸ್ಕೆ ವಿರುದ್ಧ ಗೆಲುವು ಕಂಡಿದೆ.

ಎಂಎಸ್ ಧೋನಿ ನಿವೃತ್ತಿ?
ಪಂದ್ಯದ ಆರಂಭಕ್ಕೆ ಮುನ್ನ ಸಿಎಸ್ಕೆ ತಂಡದ ದಿಗ್ಗಜ ಆಟಗಾರ, ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎನ್ನುವ ವದಂತಿಗಳು ಹರಿದಾಡಿದ್ದವು. ಇದಕ್ಕೆ ಪೂರಕ ಎನ್ನುವಂತೆ ಇದೇ ಮೊದಲ ಬಾರಿ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಧೋನಿ ಅವರ ತಂದೆ- ತಾಯಿ ಕಾಣಿಸಿಕೊಂಡಿದ್ದರು. ಪಂದ್ಯಕ್ಕೆ ಮುನ್ನ ಧೋನಿ ತಂದೆ ತಾಯಿ ಆಶೀರ್ವಾದ ಪಡೆದುಕೊಂಡಿದ್ದರು.
ಇದನ್ನು ನೋಡಿದ್ದ ಅಭಿಮಾನಿಗಳು ಧೋನಿ ಏನೋ ಮಹತ್ವದ ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಊಹೆ ಮಾಡಿದ್ದರು. 12ನೇ ಓವರ್ ನಲ್ಲೇ ಕ್ರೀಸ್ಬಂದ ಧೋನಿ 26 ಎಸೆತಗಳಲ್ಲಿ 1 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 30 ರನ್ ಗಳಿಸಿದರು. ಧೋನಿ ನಿಧಾನಗತಿಯ ಬ್ಯಾಟಿಂಗ್, ಅಗ್ರ ಕ್ರಮಾಂಕದ ಆಟಗಾರರ ವೈಫಲ್ಯದಿಂದ ಸಿಎಸ್ಕೆ 184 ರನ್ಗಳ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗದೆ ಸೋಲೊಪ್ಪಿಕೊಂಡರು.
ಧೋನಿ ನಿವೃತ್ತಿ ಬಗ್ಗೆ ಕೋಚ್ ಹೇಳಿದ್ದೇನು?
ಎಂಎಸ್ ಧೋನಿ ನಿವೃತ್ತಿ ಬಗ್ಗೆ ಸಿಎಸ್ಕೆ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ಟೀಫನ್ ಫ್ಲೆಮಿಂಗ್ ಎಂಎಸ್ ಧೋನಿ ನಿವೃತ್ತಿ ಹೊಂದುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಅವರು ಇನ್ನೂ ಬಲಿಷ್ಠವಾಗಿದ್ದಾರೆ ನಾನು ಅವರ ಭವಿಷ್ಯದ ಯೋಜನೆಗಳ ಬಗ್ಗೆ ಎಂದಿಗೂ ಕೇಳುವುದಿಲ್ಲ ಎಂದಿದ್ದಾರೆ.
ಧೋನಿ ಬ್ಯಾಟಿಂಗ್ ಬಗ್ಗೆ ಟೀಕೆ
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಂಎಸ್ ಧೋನಿ ಆಡಿದ ರೀತಿಗೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಂಡದ ಮೇಲೆ ಗೆಲ್ಲುವ ಒತ್ತಡವಿದ್ದರೂ ಧೋನಿ ಗೆಲ್ಲಬೇಕು ಎನ್ನುವ ಉದ್ದೇಶದಿಂದ ಆಡಲೇ ಇಲ್ಲ ಎಂದಿದ್ದಾರೆ. ಓವರ್ ಗೇ 14-15 ರನ್ ಬೇಕಿದ್ದರೂ ಧೋನಿ ಬೌಂಡರಿ ಹೊಡೆಯುವ ಪ್ರಯತ್ನ ಮಾಡದೇ ಇರುವುದು, ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications