IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು
CSK Vs DC Match Weather Report: ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ (ಏಪ್ರಿಲ್ 11) ಸಂಜೆ ನಡೆಯುವ ಐಪಿಎಲ್ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಕದನಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಡೆಲ್ಲಿ ಕ್ಯಾಟಪಿಟಲ್ಸ್ ಈವರೆಗೂ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದೆ. ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಕಳೆದ ಪಂದ್ಯದಲ್ಲಿ ಕೇವಲ 1 ರನ್ನ ಅಲ್ಪ ಅಂತರದಿಂದ ಡೆಲ್ಲಿ ಸೋಲನುಭವಿಸಿತ್ತು. ಇದೀಗ ಇಂದಿನ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೇಲಕ್ಕೇರುವ ಪ್ಲಾನ್ ಮಾಡಿಕೊಂಡಿದೆ.

ಮೊದಲ ಗೆಲುವಿನ ಭರವಸೆಯಲ್ಲಿ ಸಿಎಸ್ಕೆ
ಮತ್ತೊಂದೆಡೆ, ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಸತತ ಸೋಲನ್ನು ಅನುಭವಿಸಿರುವ ಚೆನ್ನೈ, ಅಂಕಪಟ್ಟಿಯಲ್ಲಿ ಯಾವುದೇ ಅಂಕವಿಲ್ಲದೆ ಕೊನೆಯ ಸ್ಥಾನದಲ್ಲಿದೆ. ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಿಂದ ಈ ಬಾರಿ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬಂದಿಲ್ಲ. ಇನ್ನೂ ಇಂದು (ಏಪ್ರಿಲ್ 11) ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೋರಾಡಲಿದೆ. ತನ್ನ ತವರಿನ ಮೈದಾನವಾದ ಚೆಪಾಕ್ನಲ್ಲಿ ನಡೆಯುತ್ತಿರುವ ಪಂದ್ಯವಾದ್ದರಿಂದ, ಇಲ್ಲಿ ಈ ಸೀಸನ್ನ ಮೊದಲ ಗೆಲುವಿನ ಭರವಸೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇದೆ.
ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ?
ಪಂದ್ಯದ ಸಮಯದಲ್ಲಿ ತಾಪಮಾನವು 28°C ನಿಂದ 31°C ವರೆಗೆ ಇರಲಿದೆ. ಯಾವುದೇ ಮಳೆಯ ಮನ್ಸೂಚನೆ ಇರುವುದಿಲ್ಲ. ಆದ್ದರಿಂದ ಪೂರ್ಣ ಪ್ರಮಾಣದ ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚೆಪಾಕ್ ಮೈದಾನವು ಸಾಮಾನ್ಯವಾಗಿ ಸ್ಪಿನ್ನರ್ಗಳಿಗೆ ಹೆಚ್ಚು ನೆರವಾಗಲಿದೆ. ಆದರೆ, ಮತ್ತೊಂದು ಮಾಹಿತಿ ಪ್ರಕಾರ, ಇದು ಬ್ಯಾಟಿಂಗ್ಗೂ ಕೂಡ ಹೆಚ್ಚು ಪೂರಕವಾಗುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ಇಲ್ಲಿ ರನ್ ಹೊಳೆ ಹರಿದುಬಂದಿರುವ ಉದಾಹರಣೆಯಿದೆ. ಇಬ್ಬನಿಯ ಪ್ರಭಾವ ಇರುವುದರಿಂದ ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಆಯ್ದುಕೊಳ್ಳುವುದು ಬಹುತೇಕ ಖಚಿತ. ನಂತರ ಬ್ಯಾಟಿಂಗ್ ಮಾಡುವ ತಂಡಕ್ಕೆ ಚೆಂಡು ಬ್ಯಾಟ್ಗೆ ಸುಲಭವಾಗಿ ಬರುವುದರಿಂದ ಚೇಸಿಂಗ್ ಸುಲಭವಾಗಬಹುದು.
ಸಿಎಸ್ಕೆ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಸರ್ಫರಾಜ್ ಖಾನ್, ಕಾರ್ತಿಕ್ ಶರ್ಮಾ / ಪ್ರಶಾಂತ್ ವೀರ್, ಜೇಮಿ ಓವರ್ಟನ್ ಮ್ಯಾಟ್ ಹೆನ್ರಿ, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ರಾಣಾ / ಅಶುತೋಷ್ ಶರ್ಮಾ, ಸಮೀರ್ ರಿಜ್ವಿ, ಡೇವಿಡ್ ಮಿಲ್ಲರ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಕುಲದೀಪ್ ಯಾದವ್, ಲುಂಗಿ ಎನ್ಗಿಡಿ, ಟಿ.ನಟರಾಜನ್, ಮುಕೇಶ್ ಕುಮಾರ್.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
RCB Playing 11: ಆರ್ಆರ್ ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ಪ್ಲೇಯಿಂಗ್ 11 -
RCB: ಯಾರ್ಕರ್ ಕಿಂಗ್ ಬುಮ್ರಾಗೆ ನಡುಕ ಹುಟ್ಟಿಸಿದ್ದ 15ರ ಪೋರ ವೈಭವ್ ಈಗ ಆರ್ಸಿಬಿ ಸ್ವಿಂಗ್ ಸುಲ್ತಾನ್ ಭುವಿಗೆ ಟಾರ್ಗೆಟ್ -
ಲಾರಾ ಸ್ಟೈಲ್, ಸಚಿನ್ ಟೈಮಿಂಗ್, ದ್ರಾವಿಡ್ ಶಿಸ್ತು: ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದ ವೈಭವ್ ಸೂರ್ಯವಂಶಿ -
Mukul Choudhary: ಕೆಕೆಆರ್ ಧೂಳೀಪಟ ಮಾಡಿದ ₹2.6 ಕೋಟಿಯ ಮುಕುಲ್ ಚೌಧರಿ -
ಬುಮ್ರಾಗೆ ಸಿಕ್ಸರ್ಗಳ ಸುರಿಮಳೆ ಸುರಿಸಿದ ವೈಭವ್ ಸೂರ್ಯವಂಶಿಗೆ ಸಲಾಂ ಎಂದ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆ -
ಮಗನ ಕ್ರಿಕೆಟ್ಗಾಗಿ ಜೈಲಿಗೆ ಹೋಗಿದ್ದ ತಂದೆ, ರೋಹಿತ್ ಕೋಚ್ ಸಲಹೆಯಿಂದ ಐಪಿಎಲ್ ಸ್ಟಾರ್ ಆದ ಮಗ ಮುಕುಲ್; ಇಲ್ಲಿದೆ ರೋಚಕ ಸ್ಟೋರಿ -
ಸೋಲಿನ ಬೇಸರ ಮರೆತು ವೈಭವ್ ಸೂರ್ಯವಂಶಿ ಬೆನ್ನು ತಟ್ಟಿ ಕ್ರೀಡಾ ಸ್ಫೂರ್ತಿ ಮೆರೆದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ -
ಮುಕುಲ್ ಚೌಧರಿ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೆಕೆಆರ್ ವಿರುದ್ಧ ಲಕ್ನೋಗೆ 3 ವಿಕೆಟ್ಗಳ ರೋಚಕ ಜಯ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ












Click it and Unblock the Notifications