GT vs CSK IPL 2023 Final: ಪಂದ್ಯಕ್ಕೂ ಮುನ್ನವೇ ಫಲಿತಾಂಶ ಪ್ರಕಟ! ಸಿಎಸ್ಕೆ ರನ್ನರ್ ಅಪ್?
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಫೈನಲ್ ಪಂದ್ಯ ಮಳೆಯ ಕಾರಣದಿಂದ ಭಾನುವಾರ ರದ್ದಾಗಿದ್ದು, ಸೋಮವಾರಕ್ಕೆ ಮುಂದೂಡಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಮುತ್ತ ಭಾನುವಾರ ಸಂಜೆ ಭಾರಿ ಮಳೆ ಸುರಿದ ಕಾರಣ, ಟಾಸ್ ಕೂಡ ನಡೆಯದೆ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಮೀಸಲು ದಿನ ನಿಗದಿ ಮಾಡಿರುವ ಕಾರಣ ಸೋಮವಾರ ಫೈನಲ್ ಪಂದ್ಯ ನಡೆಯಲಿದೆ. ಭಾನುವಾರ ಸಂಜೆ ಮಳೆಯ ಸಮಯದಲ್ಲಿ ಅಹಮದಾಬಾದ್ ಕ್ರೀಡಾಂಗಣದ ದೊಡ್ಡ ಪರದೆಯ ಮೇಲೆ "ಸಿಎಸ್ಕೆ ರನ್ನರ್ ಅಪ್" ಎನ್ನುವ ಸಾಲುಗಳು ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ಪಂದ್ಯವೇ ನಡೆದಿಲ್ಲ ಆಗಲೇ ಫಲಿತಾಂಶ ಪ್ರಕಟಿಸಿದ್ದಾರಲ್ಲ ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಅಷ್ಟಕ್ಕೂ ಆ ರೀತಿಯ ಸಾಲುಗಳು ಬಂದಿದ್ದಾರೂ ಯಾಕೆ? ಎನ್ನುವ ಪ್ರಶ್ನೆಗಳು ಸದ್ಯ ಅಭಿಮಾನಿಗಳನ್ನು ಬಿಟ್ಟೂ ಬಿಡದೆ ಕಾಡುತ್ತಿದೆ.
Well, it seems like Mother Nature is having a grand time playing with the emotions of cricket fans today! As for that viral 'RUNNER UP CSK' image, it's almost as if someone hit the "upload" button prematurely and revealed the climactic twist of the match. Perhaps it's a… pic.twitter.com/R8fL02nGHe
— Sandeep Nandlal (@ishsagar) May 28, 2023
ಸಿಎಸ್ಕೆ ರನ್ನರ್ ಅಪ್ ಎಂದು ದೊಡ್ಡ ಪರದೆಯ ಮೇಲೆ ಪ್ರಕಟಿಸಿರುವ ಫೋಟೊ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ಈ ಸಂದೇಶ ನೋಡಿ ಗುಜರಾತ್ ಟೈಟಾನ್ಸ್ ತಂಡದ ಅಭಿಮಾನಿಗಳು ಥ್ರಿಲ್ ಆಗಿದ್ದರೆ, ಸಿಎಸ್ಕೆ ತಂಡದ ಅಭಿಮಾನಿಗಳು ಆತಂಕಗೊಂಡಿದ್ದಾರೆ.
ಭಾರಿ ಕುತೂಹಲ ಕೆರಳಿಸಿರುವ ಫೈನಲ್ ಪಂದ್ಯ
ಐಪಿಎಲ್ 2023ರ ಫೈನಲ್ ಪಂದ್ಯ ಸದ್ಯ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಪಂದ್ಯಾವಳಿಯಲ್ಲಿ ಮೊದಲಿನಿಂದಲೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಗುಜರಾತ್ ಟೈಟಾನ್ಸ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಸೋಲನುಭವಿಸಿತು, ಸಿಎಸ್ಕೆ ನೇರವಾಗಿ ಫೈನಲ್ಗೆ ಅರ್ಹತೆ ಪಡೆದುಕೊಂಡಿತು.

ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅಮೋಘ ಗೆಲುವು ಕಂಡ ಗುಜರಾತ್ ಟೈಟಾನ್ಸ್ ಸತತ ಎರಡನೇ ಬಾರಿ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. ಒಂದು ವೇಳೆ ಗುಜರಾತ್ ಟೈಟಾನ್ಸ್ ಕಪ್ ಗೆದ್ದರೆ, ತಂಡವೊಂದು ಆಡಿದ ಮೊದಲ ಎರಡೂ ಆವೃತ್ತಿಗಳಲ್ಲಿ ಕಪ್ ಗೆದ್ದ ಮೊದಲ ತಂಡ ಎನಿಸಿಕೊಳ್ಳಲಿದೆ.
ಧೋನಿಗಾಗಿ ಕಪ್ ಗೆಲ್ಲಬೇಕು ಸಿಎಸ್ಕೆ
ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿದೆ. ಗೆಲುವಿನ ಮೂಲಕ ಅವರು ಕ್ರಿಕೆಟ್ ವೃತ್ತಿ ಬದುಕಿಗೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದರೂ ತಂಡವನ್ನು ಫೈನಲ್ವರೆಗೆ ಮುನ್ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಐಪಿಎಲ್ನಲ್ಲಿ 250ನೇ ಪಂದ್ಯವನ್ನಾಡಲು ಅವರು ಸಜ್ಜಾಗಿದ್ದಾರೆ. ಒಟ್ಟು 10 ಬಾರಿ ಅವರು ತಂಡವನ್ನು ಫೈನಲ್ಗೆ ಮುನ್ನಡೆಸಿದ್ದು, ಈ ಸಾಧನೆ ಮಾಡಿದ ಏಕೈಕ ನಾಯಕ ಎನಿಸಿಕೊಂಡಿದ್ದಾರೆ. ಇದುವರೆಗೂ ಯಾವೊಬ್ಬ ಆಟಗಾರ ಕೂಡ 250 ಐಪಿಎಲ್ ಪಂದ್ಯಗಳನ್ನು ಆಡಿಲ್ಲ. ಧೋನಿ ಕೊನೆಯ ಐಪಿಎಲ್ ಎಂದೇ ನಂಬಿರುವ ಕೋಟ್ಯಂತರ ಅಭಿಮಾನಿಗಳು ಈ ಬಾರಿ ಸಿಎಸ್ಕೆ ಕಪ್ ಗೆಲ್ಲಬೇಕು ಎಂದು ಪ್ರಾರ್ಥನೆ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಧೋನಿಯನ್ನು ತಮ್ಮ ಗುರು ಎಂದೇ ಭಾವಿಸುತ್ತಾರೆ. ಗುಜರಾತ್ ಟೈಟಾನ್ಸ್ ಮತ್ತು ಸಿಎಸ್ಕೆ ಈವರೆಗೆ 4 ಬಾರಿ ಮುಖಾಮುಖಿಯಾಗಿದ್ದು, 3 ಬಾರಿ ಗುಜರಾತ್ ಟೈಟಾನ್ಸ್ ಗೆಲುವು ಸಾಧಿಸಿದ್ದು, ಒಂದು ಬಾರಿ ಸಿಎಸ್ಕೆ ಗೆದ್ದಿದೆ, ಅಹಮದಾಬಾದ್ನಲ್ಲಿ ಸಿಎಸ್ಕೆ ಈವರೆಗೂ ಒಂದೂ ಪಂದ್ಯವನ್ನು ಗೆದ್ದಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications