CSK vs RR: ವಿಚಿತ್ರ ಕಾರಣಕ್ಕೆ ಔಟಾದ ರವೀಂದ್ರ ಜಡೇಜಾ; ವಿಡಿಯೋ ನೋಡಿ
ಐಪಿಎಲ್ 2024ರ ಆವೃತ್ತಿಯಲ್ಲಿ ಮತ್ತೊಂದು ವಿವಾದಾತ್ಮಕ ಔಟ್ ನಿರ್ಣಯ ನೀಡಲಾಗಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್ಕೆ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ಕ್ಷೇತ್ರ ರಕ್ಷಣೆಗೆ ಅಡ್ಡಿಪಡಿಸಿದ ಕಾರಣಕ್ಕೆ ಔಟ್ ಕೊಡಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಜಡೇಜಾ ಔಟಾದ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ವ್ಯಾಪಕ ಚರ್ಚೆ ಹುಟ್ಟುಹಾಕಿದೆ. ಸಿಎಸ್ಕೆ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ 6 ನೇ ಓವರ್ನಲ್ಲಿ, ಜಡೇಜಾ ಅವರು ಅವೇಶ್ ಖಾನ್ ಬೌಲಿಂಗ್ನಲ್ಲಿ ಥರ್ಡ್ ಮ್ಯಾನ್ ಕಡೆಗೆ ಚೆಂಡನ್ನು ಹೊಡೆದು ಒಂದು ರನ್ ಗಳಿಸಿದರು, ಆದರೆ ಮತ್ತೊಂದು ರನ್ಗಾಗಿ ಓಡುವಾಗ ರುತುರಾಜ್ ಗಾಯಕ್ವಾಡ್ ರನ್ ಓಡಲು ನಿರಾಕರಿಸಿದರು, ಅಷ್ಟರಲ್ಲಾಗಲೇ ಜಡೇಜಾ ಅರ್ಧ ಪಿಚ್ಗೆ ಓಡಿದ್ದರು.

ಸಂಜು ಸ್ಯಾಮ್ಸನ್ ಫೀಲ್ಡರ್ನಿಂದ ಚೆಂಡು ಸ್ವೀಕರಿಸಿದರು ಮತ್ತು ಅವರು ಚೆಂಡನ್ನು ನಾನ್ಸ್ಟ್ರೈಕರ್ನ ತುದಿಯಲ್ಲಿ ಸ್ಟಂಪ್ನ ಕಡೆಗೆ ಎಸೆದಾಗ, ಅದು ಜಡೇಜಾಗೆ ತಾಗಿತು, ಅವರು ಕ್ರೀಸ್ಗೆ ಮರಳಲು ಪ್ರಯತ್ನಿಸುತ್ತಿದ್ದರು.
ಮೈದಾನದಲ್ಲಿದ್ದ ಅಂಪೈರ್ಗಳು ಮೂರನೇ ಅಂಪೈರ್ ಗೆ ಮೇಲ್ಮನವಿ ಸಲ್ಲಿಸಿದರ, ಮೂರನೇ ಅಂಪೈರ್ ಜಡೇಜಾ ಅವರು ಓಡುತ್ತಿರುವಾಗ ಉದ್ದೇಶಪೂರ್ವಕವಾಗಿ ತಮ್ಮ ದಿಕ್ಕನ್ನು ಬದಲಾಯಿಸಿದರು ಎಂದು ನಿರ್ಣಯಿಸಿ, ರಾಜಸ್ಥಾನ ರಾಯಲ್ಸ್ ಪರವಾಗಿ ತೀರ್ಪು ನೀಡಿದರು. 7 ಎಸೆತಗಳಲ್ಲಿ 5 ರನ್ ಗಳಿಸಿದ ಅವರು ಔಟಾದರು.
Ravindra Jadeja given out obstructing the field.
— Mufaddal Vohra (@mufaddal_vohra) May 12, 2024
- 3rd time happened in IPL history. pic.twitter.com/lJNolzBc1L
ಜಡೇಜಾ ಅವರನ್ನು ಔಟ್ ಕೊಟ್ಟ ಬಳಿಕ ಪರ ವಿರೋಧ ಚರ್ಚೆ ಶುರುವಾಗಿದೆ. ಆದರೆ ನಿಯಮದ ಪ್ರಕಾರ ಅವರು ಉದ್ದೇಶಪೂರ್ವಕವಾಗಿ ಕ್ಷೇತ್ರ ರಕ್ಷಣೆಗೆ ಅಡ್ಡಿ ಪಡಿಸಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿದ್ದು, ಅದಕ್ಕೆ ಔಟ್ ಕೊಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಗೆದ್ದ ಸಿಎಸ್ಕೆ ಪ್ಲೇ ಆಫ್ ಕನಸು ಜೀವಂತ
ನಾಯಕ ರುತುರಾಜ್ ಗಾಯಕ್ವಾಡ್ ಅವರ ಜವಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಸಿಎಸ್ಕೆ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ಐದು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಸಿಎಸ್ಕೆ ಗೆಲುವಿನ ಬಳಿಕ ಆರ್ ಸಿಬಿ ತಂಡದ ಪ್ಲೇ ಆಫ್ ಕಠಿಣವಾಗಿದ್ದು, ದೊಡ್ಡ ಅಂತರದಲ್ಲಿ ಉಳಿದ ಎರಡು ಪಂದ್ಯಗಳನ್ನು ಗೆಲ್ಲಬೇಕಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications