Breaking: ಕಾಮನ್ವೆಲ್ತ್: ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022 ರ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಪದಕದ ಬೇಟೆ ಮುಂದುವರೆದಿದೆ. ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಪುರುಷರ 67 ಕೆಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಎರಡನೇ ಚಿನ್ನದ ಪದಕ ಇದಾಗಿದೆ. ಭಾರತ ಒಟ್ಟು ಐದು ಪದಕಗಳನ್ನು ಗೆದ್ದುಕೊಂಡಿದೆ.
ಪುರುಷರ 67 ಕೆಜಿ ಫೈನಲ್ನಲ್ಲಿ ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗ ಚಿನ್ನ ಗೆದ್ದಿದ್ದಾರೆ. ಜೆರೆಮಿ ಲಾಲ್ರಿನ್ನುಂಗಾ 140 ಕೆಜಿ ಎತ್ತುವ ಮೂಲಕ ಹೊಸ ಕಾಮನ್ವೆಲ್ತ್ ಗೇಮ್ಸ್ ದಾಖಲೆಯನ್ನು ನಿರ್ಮಿಸಿದರು.

ಜೆರೆಮಿ ಲಾಲ್ರಿನ್ನುಂಗಾ ಅವರು ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ 160 ಕೆಜಿ ಎತ್ತುವ ಮೂಲಕ ಒಟ್ಟು 300 ಕೆಜಿ ಎತ್ತಿದ್ದಾರೆ. ಇದು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಹೊಸ ದಾಖಲೆಯಾಗಿದೆ.
ಜೆರೆಮಿ ತನ್ನ 165 ಕೆಜಿಯನ್ನು ಎತ್ತುವ ಅಂತಿಮ ಪ್ರಯತ್ನದ ಕೊನೆಯಲ್ಲಿ ಗಾಯಗೊಂಡಂತೆ ಕಂಡುಬಂದರು.
ಮಿಜೋರಾಂನ ಐಜ್ವಾಲ್ನ 19 ವರ್ಷದ ಆಟಗಾರ ಜೆರೆಮಿ ಲಾಲ್ರಿನ್ನುಂಗಾ 2018 ರ ಯೂತ್ ಒಲಿಂಪಿಕ್ ಗೇಮ್ಸ್ನಲ್ಲಿ 62 ಕೆಜಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದರು. ಕಳೆದ ವರ್ಷ ಕಾಮನ್ವೆಲ್ತ್ ಚಾಂಪಿಯನ್ಶಿಪ್ನಲ್ಲಿ 67 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದಿದ್ದರು.
ಸಮೋವಾದ ಅನುಭವಿ ಲಿಫ್ಟರ್ ವೈಪವಾ ಐಯೋನೆ 293 ಕೆಜಿಯಷ್ಟು ಭಾರ ಎತ್ತುವ ಮೂಲಕ ಬೆಳ್ಳಿ ಗೆದ್ದರೆ, ನೈಜೀರಿಯಾದ ಎಡಿಡಿಯಾಂಗ್ ಉಮೊಫಿಯಾ 290 ಕೆಜಿ ಎತ್ತುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿ ಪಡೆದರು.
ಕಾಮನ್ವೆಲ್ತ್ ಗೇಮ್ಸ್ 2022ರ ಎರಡನೇ ದಿನದಲ್ಲಿ ಮಹಿಳೆಯರ 49 ಕೆಜಿ ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ ಸ್ಪರ್ಧಿಸಿದ್ದ ಮೀರಾಬಾಯಿ ಚಾನು ಚಿನ್ನದ ಪದಕ ಗೆಲ್ಲುವ ಮೂಲಕ ತನ್ನ ಅದ್ಭುತ ಪ್ರದರ್ಶನ ಮುಂದುವರಿಸಿದ್ದರು. ಇದಲ್ಲದೆ ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಬೆಳ್ಳಿ ಮತ್ತು ಕನ್ನಡಿಗ ಗುರುರಾಜ ಪೂಜಾರಿ ಪುರುಷರ 61 ಕೆಜಿಯಲ್ಲಿ ಕಂಚಿನ ಪದಕ ಪಡೆದರು. ಜೊತೆಗೆ ಬಿಂದ್ಯಾರಾಣಿ ದೇವಿ 55 ಕೆಜಿ ವಿಭಾಗದಲ್ಲಿ ಶನಿವಾರ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications