CWG 2022: ಇಂಗ್ಲೆಂಡ್ ಬಗ್ಗುಬಡಿದು ಚಿನ್ನದ ಪದಕ ಸುತ್ತಿಗೆ ಎಂಟ್ರಿ ಕೊಟ್ಟ ಕೌರ್ ಪಡೆ
ಬರ್ಮಿಂಗ್ಹ್ಯಾಮ್ , ಆಗಸ್ಟ್ 6: ಇದೇ ಮೊದಲ ಬಾರಿಗೆ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಅವಕಾಶ ಪಡೆದಿರುವ ಕ್ರಿಕೆಟ್ನಲ್ಲಿ ಭಾರತದ ವನಿತೆಯರ ತಂಡ ಅತಿಥೇಯ ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸುವ ಮೂಲಕ ಪದಕ ಖಚಿತಪಡಿಸಿಕೊಂಡಿದೆ.
ಶನಿವಾರ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ವನಿತೆಯರು 4 ರನ್ಗಳ ರೋಚಕ ಜಯ ಸಾಧಿಸಿ ಚಿನ್ನದ ಸುತ್ತಿಗೆ ತೇರ್ಗಡೆಯಾದರು.
ಎಡ್ಜ್ಬಾಸ್ಟನ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತೆಯರು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಕಲೆ ಹಾಕುವುದರ ಮೂಲಕ ಬಲಿಷ್ಠ ಇಂಗ್ಲೆಂಡ್ ವನಿತೆಯರಿಗೆ 165 ರನ್ಗಳ ಸ್ಪರ್ಧಾತ್ಮಕ ಗುರಿಯನ್ನು ನೀಡಿತ್ತು. ನಂತರ ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಮೂಲಕ ಹರ್ಮನ್ ಪ್ರೀತ್ ಬಳಗ 4 ರನ್ಗಳ ರೋಚಕ ಜಯ ಸಾಧಿಸಿದ್ದು ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದ ಚೊಚ್ಚಲ ಕ್ರಿಕೆಟ್ ಆವೃತ್ತಿಯಲ್ಲಿಯೇ ಫೈನಲ್ ಲಗ್ಗೆಯಿಡುವ ಮೂಲಕ ಪದಕ ಖಚಿತಪಡಿಸಿಕೊಂಡಿತು.

ಭಾರತದ ಪರ ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ 32 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ಗಳ ಸಹಿತ 61, ಜೆಮಿಮಾ ರೋಟ್ರಿಗಸ್ 31 ಎಸೆತಗಳಲ್ಲಿ44, ನಾಯಕಿ ಹರ್ಮನ್ ಪ್ರೀತ್ ಕೌರ್ 20 ಎಸೆತಗಳಲ್ಲಿ 20, ದೀಪ್ತಿ ಶರ್ಮಾ 20 ಎಸೆತಗಳಲ್ಲಿ 22 ರನ್ಗಳಿಸಿ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾಗಿದ್ದರು.
ಇಂಗ್ಲೆಂಡ್ ಪರ ನ್ಯಾಟ್ ಸೀವರ್ 41 ರನ್, ಡ್ಯಾನಿಯಲ್ ವೇಟ್ 35 ಹಾಗೂ ಆಮಿ ಜೋನ್ಸ್ 31 ರನ್ಗಳಿಸಿ ಗೆಲುವಿಗಾಗಿ ನಡೆಸಿದ ಹೋರಾಟ ವಿಫಲವಾಯಿತು. ಭಾರತದ ಬರ ಸ್ನೇಹ್ ರಾಣಾ 28ಕ್ಕೆ2, ದೀಪ್ತಿ ಶರ್ಮಾ 18ಕ್ಕೆ1 ವಿಕೆಟ್ ಪಡೆದರು. ಕ್ಷೇತ್ರ ರಕ್ಷಣೆಯಲ್ಲಿ ಅದ್ಭುತ ಪ್ರದರ್ಶನ ತೋರಿದ ಭಾರತೀಯ ಆಟಗಾರ್ತಿಯರು ಮೂರು ರನ್ಔಟ್ ಮಾಡಿ ನಿರ್ಣಾಯಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿ ಗೆಲುವು ತಮ್ಮದಾಗಿಸಿಕೊಂಡರು.
ಇನ್ನು ಶನಿವಾರವೇ 2ನೇ ಸೆಮಿಫೈನಲ್ ಪಂದ್ಯ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ನಡುವೆ ನಡೆಯಲಿದೆ. ಈ ಪೈಪೋಟಿಯಲ್ಲಿ ಗೆದ್ದ ತಂಡ ಭಾರತದ ವಿರುದ್ಧ ಭಾನುವಾರ ಚಿನ್ನಕ್ಕಾಗಿ ಪೈಪೋಟಿ ನಡೆಸಲಿವೆ.
ಇನ್ನು ಭಾರತೀಯ ವನಿತಾ ತಂಡ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿದ್ದಕ್ಕೆ ಕ್ರಿಕೆಟ್ ಬಳಗ ಅಭಿನಂದನೆ ಸಲ್ಲಿಸಿದೆ. ಭಾರತೀಯ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್, ಮಾಜಿ ಮಹಿಳಾ ಕ್ರಿಕೆಟರ್ ಅಂಜುಮ್ ಚೊಪ್ರಾ, ಮಾಜಿ ವಿಂಡೀಸ್ ಕ್ರಿಕೆಟರ್ ಇಯಾನ್ ಬಿಷಪ್ , ಮಾಜಿ ಕ್ರಿಕೆಟಿಗ ವಸೀಂ ಜಾಫರ್, ಆಕಾಶ್ ಚೋಪ್ರಾ, ಪಾರ್ಥೀವ್ ಪಟೇಲ್ , ಅಮಿತ್ ಮಿಶ್ರಾ ಸೇರಿದಂತೆ ಹಲವಾರು ಮಾಜಿ ಹಾಗೂ ಹಾಲಿ ಕ್ರಿಕೆಟರ್ಸ್ ಫೈನಲ್ಗೆ ಶುಭಕೋರಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications