ಕಾಮನ್ವೆಲ್ತ್ 2022: ಜುಡೋದಲ್ಲಿ ಸುಶೀಲಾ ದೇವಿಗೆ ಬೆಳ್ಳಿ, ವಿಜಯ್ಗೆ ಕಂಚಿನ ಪದಕ
ಮಹಿಳೆಯರ ಜೂಡೋ 48 ಕೆಜಿ ಫೈನಲ್ನಲ್ಲಿ ಭಾರತ ಸುಶೀಲಾ ದೇವಿ ಲಿಕ್ಮಾಬಾಮ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ 2022 ರ ಕಾಮನ್ವೆಲ್ತ್ ಗೇಮ್ಸ್ನ ಏಳನೇ ಪದಕವನ್ನು ತಂದುಕೊಟ್ಟರು. ಇದಕ್ಕೂ ಮೊದಲು ಕ್ವಾರ್ಟರ್ಫೈನಲ್ನಲ್ಲಿ ಹ್ಯಾರಿಯೆಟ್ ಬೋನ್ಫೇಸ್ ಅವರನ್ನು ಸೋಲಿಸಿದ ಸುಶೀಲಾ, ಮಾರಿಷಸ್ನ ಪ್ರಿಸ್ಸಿಲ್ಲಾ ಮೊರಾಂಡ್ ಅವರನ್ನು ಸೋಲಿಸುವ ಮೂಲಕ ಎರಡನೇ ಗೆಲುವು ಸಾಧಿಸಿದರು. ಫೈನಲ್ನಲ್ಲಿ ದಕ್ಷಿಣ ಆಫ್ರಿಕಾದ ಮೈಕೆಲಾ ವೈಟ್ಬೂಯಿ ವಿರುದ್ಧ ಸೋಲನುಭವಿಸಿದ ಸುಶೀಲಾ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದರು.
ವಿಜಯ್ ಕುಮಾರ್ ಯಾದವ್ ಪುರುಷರ 60 ಕೆ.ಜಿ ವಿಭಾಗದ ಜೂಡೋದಲ್ಲಿ ಸೈಪ್ರಸ್ನ ಪೆಟ್ರೋಸ್ ಕ್ರಿಸ್ಟೋಡೌಲಿಡ್ಸ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದರು. ಭಾರತದ ಮತ್ತೋರ್ವ ಅಥ್ಲೀಟ್ ಜಸ್ಲೀನ್ ಸಿಂಗ್ ಸೈನಿ ಪುರುಷರ 66 ಕೆಜಿ ಜೂಡೋ ಸ್ಪರ್ಧೆಯಲ್ಲಿ ಕಂಚಿನ ಪದಕದ ಪಂದ್ಯದಲ್ಲಿ ನಾಥನ್ ಕಾಟ್ಜ್ ವಿರುದ್ಧ ಸೋತರು.
ಕಾಮನ್ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲಾಲ್ ಬಾನ್ ಕ್ರೀಡೆಯಲ್ಲಿ ಭಾರತ ತಂಡ ಪದಕ ಗೆಲ್ಲುವುದು ಖಚಿತವಾಗಿದೆ. ನಾಲ್ಕು ಸ್ಪರ್ಧೆಯಲ್ಲಿ ಲವ್ಲಿ ಚೌಬೆ, ಪಿಂಕಿ, ನಯನಮೋನಿ ಸೈಕಿಯಾ ಮತ್ತು ರೂಪಾ ರಾಣಿ ಟಿರ್ಕಿ ಸೆಮಿಫೈನಲ್ನ ಕಠಿಣ ಪಂದ್ಯದಲ್ಲಿ 16-13 ರಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಫೈನಲ್ಗೆ ಪ್ರವೇಶ ಪಡೆದ ಭಾರತ ಮತ್ತೊಂದು ಪದಕ ಖಚಿತಪಡಿಸಿಕೊಂಡಿದೆ. ಮಂಗಳವಾರ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

ಬಾಕ್ಸಿಂಗ್ ವಿಭಾಗದಲ್ಲಿ ಭಾರತ ಉತ್ತಮ ಆರಂಭ ಮಾಡಿದೆ. ಪದಕದ ಭರವಸೆ ಮೂಡಿಸಿರುವ ಅಮಿತ್ ಪಂಘಲ್ 51 ಕೆ.ಜಿ. ವಿಭಾಗದಲ್ಲಿ 16ರ ಹಂತದಲ್ಲಿ ಮೊದಲನೇ ಜಯ ಸಾಧಿಸಿದ್ದಾರೆ. ಅಮಿತ್ 5-0 ಅಂತರದಿಂದ ವನವಾಟು ಬಾಕ್ಸರ್ ಅನ್ನು ಸೋಲಿಸುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು. ಮೊಹಮ್ಮದ್ ಹುಸಾಮುದ್ದೀನ್ ಬಾಂಗ್ಲಾದೇಶದ ಬಾಕ್ಸರ್ ಅವರನ್ನು 5-0 ಅಂತರದಿಂದ ಸೋಲಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ವೇಟ್ಲಿಫ್ಟಿಂಗ್ನಲ್ಲಿ ಭಾರತಕ್ಕೆ ನಿರಾಸೆ
ಕಳೆದೆರಡು ದಿನಗಳಲ್ಲಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಭಾರತ ಸೋಮವಾರ ನಿರಾಸೆ ಅನುಭವಿಸಿತು. ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ಅಜಯ್ ಸಿಂಗ್ ಕಡಿಮೆ ಅಂತರದಿಂದ ಪದಕ ವಂಚಿತರಾದರು. ಪುರುಷರ 81 ಕೆ.ಜಿ. ವಿಭಾಗದಲ್ಲಿ ಒಟ್ಟು 319 ಕಿಲೋ ಗ್ರಾಂ ತೂಕ ಎತ್ತುವ ಮೂಲಕ ಕೇವಲ ಒಂದು ಕೆಜಿ ಅಂತರದಲ್ಲಿ ಕಂಚಿನ ಪದಕದಿಂದ ವಂಚಿತರಾಗಿ ನಿರಾಸೆ ಅನುಭವಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications