ದೇವಸೂಗೂರು: ಕರಾಟೆಯಲ್ಲಿ ಅಣ್ಣ-ತಂಗಿಯ ಅದ್ಭುತ ಸಾಧನೆ, ಹಳ್ಳಿಯಿಂದ ದಿಲ್ಲಿವರೆಗೂ ಕ್ರೀಡಾ ಪಯಣ
ರಾಯಚೂರು, ಡಿಸೆಂಬರ್, 4: ತಾಲೂಕಿನ ದೇವಸೂಗೂರು ಗ್ರಾಮದ ಬ್ಲೆಸ್ಡ ಆಲ್ಪೋನ್ಸ್ ಶಾಲೆಯ ವಿದ್ಯಾರ್ಥಿಗಳಿಬ್ಬರು ಕರಾಟೆ ಕ್ರೀಡೆಯಲ್ಲಿ ಸಾಧನೆ ಮಾಡುತ್ತಾ ರಾಷ್ಟ್ರ ಮಟ್ಟಕ್ಕೆ ತಲುಪಿ ಗಮನ ಸೆಳೆದಿದ್ದಾರೆ. ಯುಕ್ತ ಪ್ರಸಾದ್ ಮತ್ತು ನಿಖಿಲ್ ಪ್ರಸಾದ್ ಎನ್ನುವ ಇಬ್ಬರು ಅಣ್ಣತಂಗಿಯರು ಕರಾಟೆ ಕ್ರೀಡೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಮಟ್ಟಕ್ಕೆ ತಲುಪಿದ ಪ್ರತಿಭಾನ್ವಿತರಾಗಿದ್ದಾರೆ.
4ನೇ ತರಗತಿಯಲ್ಲಿ ಓದುತ್ತಿರುವ ಗ್ರಾಮೀಣ ಕ್ರೀಡಾಪಟು ಯುಕ್ತ ಪ್ರಸಾದ್ 12ನೇ ವಯಸ್ಸಿನಲ್ಲಿಯೇ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾಳೆ. ಈ ಮೂಲಕ ಚಾಂಪಿಯನ್ ಟ್ರೋಪಿ, ಚಿನ್ನ ಸೇರಿದಂತೆ ಹಲವು ಪದಕಗಳನ್ನು ತನ್ನದಾಗಿಸಿಕೊಂಡು ದೇವಸೂಗೂರು ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ಕಟಾ ವಿಭಾಗದಲ್ಲಿ ಏಳು ಚಿನ್ನದ ಪದಕ ಹಾಗೂ ಕುಮಟೆ ವಿಭಾಗದಲ್ಲಿ 6 ಚಿನ್ನದ ಪದಕ, ಒಂದು ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾಳೆ. ಬಾಲಕಿಯರ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗ್ರ್ಯಾಂಡ್ ಚಾಂಪಿಯನ್ಶಿಪ್ ರನ್ನರ್ ಆಫ್ ಪ್ರಶಸ್ತಿ ಪಡೆದದು ಗಮನ ಸೆಳೆದಿದ್ದಾಳೆ.
ಗ್ರಾಮೀಣ ಪ್ರತಿಭೆಗಳ ದಿಲ್ಲಿವರೆಗಿನ ಸಾಧನೆ
ಎಲೆ ಮರೆಕಾಯಿಯಂತೆ ಸದ್ದಿಲ್ಲದೇ ಸಾಧನೆ ಮಾಡುತ್ತಿರುವ ಗ್ರಾಮೀಣ ಪ್ರತಿಭೆಗೆ ತಾಲೂಕು ಮತ್ತು ಜಿಲ್ಲಾಡಳಿತ ಪ್ರೋತ್ಸಾಹಿಸಿದೆ. ಹೀಗೆ ಗ್ರಾಮೀಣ ಕ್ರೀಡಾಪಟುವಿಗೆ ತುಂಬಬೇಕು ಎಂಬುದು ಪ್ರತಿಯೊಬ್ಬರ ಅಶಯವಾಗಿದೆ. ಇನ್ನು ಅದೇ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ನಿಖಿಲ್ ಪ್ರಸಾಸ್ ಕೂಡ ಕರಾಟೆ ಸ್ಕೂಲ್ನಲ್ಲಿ ತರಬೇತಿ ಪಡೆದಿದ್ದಾನೆ. ತರಬೇತುದಾರ ಶಿವು ಅವರಿಂದ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸುವ ಗ್ರಾಮದ ಯುವಕರಿಗೆ ಮಾದರಿಯಾಗಿದ್ದಾನೆ. ಕಟಾ ಹಾಗೂ ಕುಮಟೆ ವಿಭಾಗದಲ್ಲಿ 6 ಚಿನ್ನದ ಪದಕ, 6 ಬೆಳ್ಳಿಯ ಪದಕ ಮತ್ತು 2 ಕಂಚಿನ ಪದಕವನ್ನು ಪಡೆದಿದ್ದಾನೆ. ಅಲ್ಲದೇ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗ್ರ್ಯಾಂಡ್ ಚಾಂಪಿಯನ್ ಶಿಪ್ ರನ್ನರ್ ಆಫ್ ಪ್ರಶಸ್ತಿ ಪಡೆದಿದ್ದಾನೆ.

ಹಲವು ಜಿಲ್ಲೆಗಳಲ್ಲಿ ಪ್ರತಿಭೆ ಪ್ರದರ್ಶನ
ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಇಬ್ಬರು ಅಣ್ಣ ತಂಗಿಯರು ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇಬ್ಬರ ಮಕ್ಕಳ ತಾಯಿಯಾದ ಶಿಕ್ಷಕಿ ಶೀಲಾಭಟ್ ದೇವಸೂಗೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಾಲಕರೇ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹಿಸುತ್ತಿದ್ದಾರೆ. ಇನ್ನು ಕರಾಟೆಯ ಶಿಕ್ಷಕರಾದ ಸೂಗಪ್ಪ ಮತ್ತು ಶಿವು ಅವರು ಯುಕ್ತ ಪ್ರಸಾದ್ ಮತ್ತು ನಿಖಿಲ್ ಪ್ರಸಾದ್ ಅವರಿಗೆ ತರಬೇತುದಾರರಾಗಿದ್ದಾರೆ.

ನಂತರ ಈ ಬಗ್ಗೆ ತರಬೇತುದಾರ ಶಿವು ಮಾತನಾಡಿ, "ಚಿಕ್ಕ ವಯಸ್ಸಿನಲ್ಲಿಯೇ ಇಬ್ಬರು ಹಲವು ಪ್ರಶಸ್ತಿ ಪಡೆದುಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಇನ್ನೂ ಹೆಚ್ಚಿನ ತರಬೇತಿ ನೀಡಿ ಹಲವು ಪಂದ್ಯಾವಳಿಗಳಲ್ಲಿ ಭಾಗವಹಿಸುವಂತೆ ಮಾಡಲಾಗುವುದು," ಎಂದರು. ನಂತರ ತಾಯಿ ಶೀಲ್ ಭಟ್ ಮಾತನಾಡಿ, "ಎಷ್ಟೇ ಕಷ್ಟವಾದರೂ ಕೂಡ ತಮ್ಮ ಇಬ್ಬರು ಮಕ್ಕಳಿಗೆ ಉತ್ತಮ ತರಬೇತಿ ಕೊಡಿಸಲಾಗುವುದು. ಶಾಲೆಯ ಜೊತೆಗೆ ಸರ್ವಾಜನಿಕರು ಪ್ರೋತ್ಸಾಹಿಸಬೇಕು," ಎಂದು ಕೋರಿದರು.
-
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications