Mayank Yadav: ವೇಗದ ಬೌಲಿಂಗ್ ಮೂಲಕ ಜಗತ್ತಿನ ಗಮನ ಸೆಳೆದ ಮಯಾಂಕ್ ಯಾದವ್ ಯಾರು ಗೊತ್ತಾ?
ಮಯಾಂಕ್ ಯಾದವ್, ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚು ಚರ್ಚೆಯಾದ ಹೆಸರು. ಆಡಿದ ಮೊದಲ ಪಂದ್ಯದಲ್ಲೇ ವಿಶ್ವಕ್ರಿಕೆಟ್ನ ಗಮನ ಸೆಳೆದಿರುವ 21 ವರ್ಷದ ಈ ಹುಡುಗ, ಐಪಿಎಲ್ನ ಸೆನ್ಸೇಷನ್ ಆಗಿದ್ದಾರೆ.
ಶನಿವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲ್ಲಲು ಪ್ರಮುಖ ಕಾರಣ, ಮಯಾಂಕ್ ಯಾದವ್ ಅವರ ಅತ್ಯುತ್ತಮ ಬೌಲಿಂಗ್. 4 ಓವರ್ ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದ ಮಯಾಂಕ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಐಪಿಎಲ್ 2024ರ ಆವೃತ್ತಿಯಲ್ಲಿ ಅತಿ ವೇಗದ ಎಸೆತವನ್ನು ಬೌಲಿಂಗ್ ಮಾಡಿ ದಾಖಲೆ ಮಾಡಿದರು.

ಪಂಜಾಬ್ನ ಜಾನಿ ಬೈರ್ಸ್ಟೋವ್ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಅವರ ನಿರ್ಣಾಯಕ ವಿಕೆಟ್ಗಳನ್ನು ಪಡೆದರು. ಗಂಟೆಗೆ 147 ಕಿ.ಮೀ ವೇಗದಲ್ಲಿ ಬೌಲಿಂಗ್ ಆರಂಭಿಸಿದ ಅವರು ಗಂಟೆಗೆ 155.8 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದರು.
ಮೂರು ವರ್ಷದಿಂದ ಬೆಂಬಲ
ಲಕ್ನೋ ಸೂಪರ್ ಜೈಂಟ್ಸ್ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ವೇಗದ ಬೌಲರ್ ಮಯಾಂಕ್ಗೆ ಬೆಂಬಲ ನೀಡಿದರು. ಮಾಕ್ ವುಡ್ ಈ ಬಾರಿ ಐಪಿಎಲ್ನಿಂದ ಹೊರಗುಳಿದರೂ ತಂಡದಲ್ಲಿ ಉತ್ತಮ ವೇಗಿಗಳು ಇದ್ದಾರೆ ಎಂದು ಹೇಳಿದ್ದರು.
ಜೂನ್ 17, 2002 ರಂದು ಜನಿಸಿದ ಮಯಾಂಕ್ ಯಾದವ್ ದೆಹಲಿ ತಂಡಕ್ಕಾಗಿ ಆಡುವ 21 ವರ್ಷದ ವೇಗದ ಬೌಲರ್. ಮಂಡಿರಜ್ಜು ಗಾಯ ಸೇರಿದಂತೆ ಹಲವು ಸವಾಲುಗಳನ್ನು ಮೀರಿ ನಿಂತು ಐಪಿಎಲ್ ಪಂದ್ಯಾವಳಿಯಲ್ಲಿ ಮೊದಲ ಪಂದ್ಯವನ್ನು ಆಡಿದರು.
ಮಯಾಂಕ್ ಯಾದವ್ ಲಕ್ನೋ ಸೂಪರ್ ಜೈಂಟ್ಸ್ ಹುಡುಕಿದ ಬೌಲರ್. ದೇಶೀಯ ಕ್ರಿಕೆಟ್ನಲ್ಲಿ ದೆಹಲಿ ತಂಡಕ್ಕಾಗಿ ಆಡುವ ಅವರು 51 ವಿಕೆಟ್ ಪಡೆದಿದ್ದಾರೆ. ಮೂರು ವರ್ಷಗಳ ಹಿಂದೆಯೇ ಮಯಾಂಕ್ ಯಾದವ್ ಲಕ್ನೋ ತಂಡವನ್ನು ಸೇರಿಕೊಂಡಿದ್ದರು ಮೊದಲ ಪಂದ್ಯ ಆಡಲು ಮೂರು ವರ್ಷ ಕಾಯಬೇಕಾಯಿತು.
ಕಳೆದ ವರ್ಷ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಐಪಿಎಲ್ನಿಂದ ಹೊರಗುಳಿದಿದ್ದರು. ಈ ಬಾರಿ ಗಾಯದ ಸಮಸ್ಯೆಯನ್ನು ಎದುರಿಸಿ ಫಿಟ್ ಆಗಿದ್ದು, ತಂಡಕ್ಕೆ ಮರಳಿದ್ದರು. ಮೊದಲ ಪಂದ್ಯದಲ್ಲೇ ಅವರು ತಮ್ಮ ಬೌಲಿಂಗ್ ಸಾಮರ್ಥ್ಯ ತೋರಿಸಿದ್ದಾರೆ.
ಮಯಾಂಕ್ ಯಾದವ್ ಶೀಘ್ರದಲ್ಲೇ ಭಾರತ ತಂಡದಲ್ಲಿ ಆಡುವ ಸಾಧ್ಯತೆಗಳನ್ನು ಕೂಡ ತಳ್ಳಿಹಾಕುವಂತಿಲ್ಲ. ಅವರು ಈ ಮೊದಲಿನಿಂದಲೂ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರ ಆಯ್ಕೆಯ ಪಟ್ಟಿಯಲ್ಲಿದ್ದು ಯಾವುದೇ ಸಂದರ್ಭದಲ್ಲಾದರೂ ಭಾರತ ತಂಡಕ್ಕಾಗಿ ಆಡುವಂತೆ ಕರೆಬರುವ ಸಾಧ್ಯತೆ ಇದೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications