Vinesh Phogat: ಭಾರತಕ್ಕೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆಘಾತ, ಕುಸ್ತಿಯಿಂದ ಹೊರಬಿದ್ದ ವಿನೇಶ್ ಫೋಗಟ್ಗೆ ಯಾವುದೇ ಪದಕ ಸಿಗಲ್ಲ!
ಭಾರತದ ಕನಸು ಭಗ್ನವಾಗಿದ್ದು, ಭಾರತಕ್ಕೆ ಒಲಿಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗಲಿದೆ ಎಂಬ ಕನಸು ಕನಸಾಗಿಯೇ ಉಳಿದಿದೆ. ಚಿನ್ನದ ಪದಕ ಬಿಡಿ ಈಗ ಯಾವುದೇ ಪದಕವನ್ನು ಕೂಡ ಗೆಲ್ಲದೆ ವಿನೇಶ್ ಫೋಗಟ್ ಅನರ್ಹರಾಗಿ ಹೊರ ಬಿದ್ದಿದ್ದಾರೆ. ಹಾಗಾದ್ರೆ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್ಗೆ ಆಯ್ಕೆ ಆಗಿದ್ದರೂ ಯಾವುದೇ ಪದಕವು ಸಿಗುತ್ತಿಲ್ಲ ಏಕೆ? ಬನ್ನಿ ತಿಳಿಯೋಣ.
Olympics 2024ರ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರವೇಶ ಮಾಡಿದ್ದ ವಿನೇಶ್ ಫೋಗಟ್ ಅವರು, ಭಾರತಕ್ಕೆ ಈ ಬಾರಿ ಚಿನ್ನದ ಪದಕ ಗೆಲ್ಲಿಸಿಕೊಡುವ ಹುಮ್ಮಸ್ಸಿನಲ್ಲಿ ಇದ್ದರು. 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಈಗ ಕನ್ಫರ್ಮ್ ಆಗಿತ್ತು. ಆದರೆ ಇದೀಗ ಭೀಕರ ಆಘಾತ ನೀಡುವ ಸುದ್ದಿಯೊಂದು ಹೊರ ಬಿದ್ದಿದ್ದು, ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹೊರಗಡೆ ಬಿದ್ದಿದ್ದಾರೆ. ಹಾಗಾದ್ರೆ ದಿಢೀರ್ ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್ ಕ್ರೀಡಾಕೂಟದಿಂದಲೇ ಹೊರ ಬೀಳಲು ಕಾರಣ ಏನು? ಮುಂದೆ ಓದಿ.

ವಿನೇಶ್ ಫೋಗಟ್ಗೆ ಭಾರಿ ಆಘಾತ
ಭಾರತದ ಕ್ರೀಡಾಲೋಕಕ್ಕೆ ಇಂದಿನ ದಿನ ಇತಿಹಾಸದಲ್ಲೇ ಮರೆಯಲು ಆಗದು ಎನ್ನಬಹುದು. ಅಂದಹಾಗೆ ಆಗಸ್ಟ್ 6 ಅಂದ್ರೆ ನಿನ್ನೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು ವಿನೇಶ್ ಫೋಗಟ್. ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದಲೇ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಈಗ ಸ್ಪರ್ಧೆಯಿಂದಲೇ ಅನರ್ಹ ಆಗಿದ್ದಾರೆ.
ಇದಕ್ಕೆಲ್ಲ ಕಾರಣ ಅವರ ತೂಕದಲ್ಲಿ ಏರಿಕೆ ಆಗಿದ್ದು. ಅಂದಹಾಗೆ 50 ಕೆಜಿ ತೂಕ ವಿಭಾಗದ ಮಹಿಳಾ ಕುಸ್ತಿ ವಿಭಾಗದಲ್ಲಿ ಭಾಗವಹಿಸಿದ್ದ ವಿನೇಶ್ ಫೋಗಟ್ ಅವರ ತೂಕವು ಈಗ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಇದೇ ಕಾರಣಕ್ಕೆ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕ ನಿಗದಿತ ಮಿತಿಗಿಂತಲೂ ಹೆಚ್ಚಾದ ಕಾರಣಕ್ಕೆ ಅವರನ್ನ ಅನರ್ಹ ಎಂದು ಘೋಷಣೆ ಮಾಡಲಾಗಿದೆ.
ಮೇಲ್ಮನವಿ ಸಲ್ಲಿಸುತ್ತಾ ಭಾರತ?
ಒಟ್ನಲ್ಲಿ ಭಾರತಕ್ಕೆ ಮತ್ತೊಮ್ಮೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರಿ ದೊಡ್ಡ ಆಘಾತ ಈಗ ಎದುರಾಗಿದೆ. ಅದರಲ್ಲೂ ಭಾರತೀಯ ಕುಸ್ತಿಪಟು ಒಬ್ಬರು ಮೊಟ್ಟಮೊದಲ ಬಾರಿಗೆ ಹೀಗೆ, ಕುಸ್ತಿ ವಿಭಾಗದಲ್ಲಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಮತ್ತೊಂದ್ಕಡೆ ಭಾರತ ಕೂಡ ಈ ಘಟನೆಯನ್ನ ತುಂಬಾ ಆಕ್ರೋಶದಿಂದ ಸ್ವೀಕಾರ ಮಾಡಿದೆ. ಅಲ್ಲದೆ ಈ ಬಗ್ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಕೂಡ ದಟ್ಟವಾಗಿದೆ. ಈ ವಿಚಾರ ಇದೀಗ ಜಾಗತಿಕ ಕ್ರೀಡಾ ಲೋಕದಲ್ಲೂ ಭಾರಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ.
-
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ












Click it and Unblock the Notifications