Vinesh Phogat: ಭಾರತಕ್ಕೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆಘಾತ, ಕುಸ್ತಿಯಿಂದ ಹೊರಬಿದ್ದ ವಿನೇಶ್ ಫೋಗಟ್ಗೆ ಯಾವುದೇ ಪದಕ ಸಿಗಲ್ಲ!
ಭಾರತದ ಕನಸು ಭಗ್ನವಾಗಿದ್ದು, ಭಾರತಕ್ಕೆ ಒಲಿಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗಲಿದೆ ಎಂಬ ಕನಸು ಕನಸಾಗಿಯೇ ಉಳಿದಿದೆ. ಚಿನ್ನದ ಪದಕ ಬಿಡಿ ಈಗ ಯಾವುದೇ ಪದಕವನ್ನು ಕೂಡ ಗೆಲ್ಲದೆ ವಿನೇಶ್ ಫೋಗಟ್ ಅನರ್ಹರಾಗಿ ಹೊರ ಬಿದ್ದಿದ್ದಾರೆ. ಹಾಗಾದ್ರೆ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್ಗೆ ಆಯ್ಕೆ ಆಗಿದ್ದರೂ ಯಾವುದೇ ಪದಕವು ಸಿಗುತ್ತಿಲ್ಲ ಏಕೆ? ಬನ್ನಿ ತಿಳಿಯೋಣ.
Olympics 2024ರ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರವೇಶ ಮಾಡಿದ್ದ ವಿನೇಶ್ ಫೋಗಟ್ ಅವರು, ಭಾರತಕ್ಕೆ ಈ ಬಾರಿ ಚಿನ್ನದ ಪದಕ ಗೆಲ್ಲಿಸಿಕೊಡುವ ಹುಮ್ಮಸ್ಸಿನಲ್ಲಿ ಇದ್ದರು. 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಈಗ ಕನ್ಫರ್ಮ್ ಆಗಿತ್ತು. ಆದರೆ ಇದೀಗ ಭೀಕರ ಆಘಾತ ನೀಡುವ ಸುದ್ದಿಯೊಂದು ಹೊರ ಬಿದ್ದಿದ್ದು, ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹೊರಗಡೆ ಬಿದ್ದಿದ್ದಾರೆ. ಹಾಗಾದ್ರೆ ದಿಢೀರ್ ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್ ಕ್ರೀಡಾಕೂಟದಿಂದಲೇ ಹೊರ ಬೀಳಲು ಕಾರಣ ಏನು? ಮುಂದೆ ಓದಿ.

ವಿನೇಶ್ ಫೋಗಟ್ಗೆ ಭಾರಿ ಆಘಾತ
ಭಾರತದ ಕ್ರೀಡಾಲೋಕಕ್ಕೆ ಇಂದಿನ ದಿನ ಇತಿಹಾಸದಲ್ಲೇ ಮರೆಯಲು ಆಗದು ಎನ್ನಬಹುದು. ಅಂದಹಾಗೆ ಆಗಸ್ಟ್ 6 ಅಂದ್ರೆ ನಿನ್ನೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು ವಿನೇಶ್ ಫೋಗಟ್. ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದಲೇ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಈಗ ಸ್ಪರ್ಧೆಯಿಂದಲೇ ಅನರ್ಹ ಆಗಿದ್ದಾರೆ.
ಇದಕ್ಕೆಲ್ಲ ಕಾರಣ ಅವರ ತೂಕದಲ್ಲಿ ಏರಿಕೆ ಆಗಿದ್ದು. ಅಂದಹಾಗೆ 50 ಕೆಜಿ ತೂಕ ವಿಭಾಗದ ಮಹಿಳಾ ಕುಸ್ತಿ ವಿಭಾಗದಲ್ಲಿ ಭಾಗವಹಿಸಿದ್ದ ವಿನೇಶ್ ಫೋಗಟ್ ಅವರ ತೂಕವು ಈಗ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಇದೇ ಕಾರಣಕ್ಕೆ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕ ನಿಗದಿತ ಮಿತಿಗಿಂತಲೂ ಹೆಚ್ಚಾದ ಕಾರಣಕ್ಕೆ ಅವರನ್ನ ಅನರ್ಹ ಎಂದು ಘೋಷಣೆ ಮಾಡಲಾಗಿದೆ.
ಮೇಲ್ಮನವಿ ಸಲ್ಲಿಸುತ್ತಾ ಭಾರತ?
ಒಟ್ನಲ್ಲಿ ಭಾರತಕ್ಕೆ ಮತ್ತೊಮ್ಮೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರಿ ದೊಡ್ಡ ಆಘಾತ ಈಗ ಎದುರಾಗಿದೆ. ಅದರಲ್ಲೂ ಭಾರತೀಯ ಕುಸ್ತಿಪಟು ಒಬ್ಬರು ಮೊಟ್ಟಮೊದಲ ಬಾರಿಗೆ ಹೀಗೆ, ಕುಸ್ತಿ ವಿಭಾಗದಲ್ಲಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಮತ್ತೊಂದ್ಕಡೆ ಭಾರತ ಕೂಡ ಈ ಘಟನೆಯನ್ನ ತುಂಬಾ ಆಕ್ರೋಶದಿಂದ ಸ್ವೀಕಾರ ಮಾಡಿದೆ. ಅಲ್ಲದೆ ಈ ಬಗ್ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಕೂಡ ದಟ್ಟವಾಗಿದೆ. ಈ ವಿಚಾರ ಇದೀಗ ಜಾಗತಿಕ ಕ್ರೀಡಾ ಲೋಕದಲ್ಲೂ ಭಾರಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications