ಫ್ಯಾನ್ಸ್ಗೆ ಹಣ ಕೊಟ್ಟು ಹರಾಜಿನಲ್ಲಿ ಕೂರಿಸಿದ್ರು ನಿಮಗಿಂತ ಒಳ್ಳೆ ತಂಡ ಕಟ್ತಾರೆ: ಆರ್ಸಿಬಿ ವಿರುದ್ಧ ದೊಡ್ಡ ಗಣೇಶ್ ಕಿಡಿ
2024ರ ಐಪಿಎಲ್ ಮಿನಿ ಹರಾಜಿನಲ್ಲಿ ಆರ್ಸಿಬಿ ತಂಡದ ಮಾಡಿಕೊಂಡ ಎಡವಟ್ಟಿಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೌಲಿಂಗ್ ಪಡೆ ಬಲಿಷ್ಠವಾಗಿಸಿಕೊಳ್ಳಬೇಕಿದ್ದ ತಂಡ ಮತ್ತೆ ಎಡವಿದೆ. ವನಿಂದು ಹಸರಂಗ ಅವರನ್ನು ಕೈಬಿಟ್ಟ ಬಳಿಕ ತಂಡದಲ್ಲಿ ಉತ್ತಮ ಸ್ಪಿನ್ನರ್ ಕೊರತೆ ಎದುರಾಗಿದೆ.
ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ ಕರ್ನಾಟಕದ ಸ್ಪಿನ್ನರ್ ಆಲ್ರೌಂಡರ್ ಶ್ರೇಯಸ್ ಗೋಪಾಲ್ರನ್ನು ಕೂಡ ಆರ್ ಸಿಬಿ ಖರೀದಿ ಮಾಡದೇ ಇರುವುದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ಕರ್ನಾಟಕದ ಆಟಗಾರರ ಬಗ್ಗೆ ಆರ್ಸಿಬಿ ನಿರ್ಲಕ್ಷ್ಯ ಮುಂದುವರೆದಿದೆ.

ಇದನ್ನೆಲ್ಲಾ ಕಂಡ ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಕೂಡ ಆರ್ಸಿಬಿ ಉತ್ತಮ ಬೌಲರ್ ಗಳನ್ನು ಆಯ್ಕೆ ಮಾಡುವಲ್ಲಿ ಎಡವಿದೆ ಎಂದು ಹೇಳಿದ್ದಾರೆ. ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕೂಡ ಆರ್ಸಿಬಿ ಬಿಡುಗಡೆ ಮಾಡಿದ ಆಟಗಾರರಿಗೆ ಪರ್ಯಾಯ ಆಟಗಾರರನ್ನು ಆಯ್ಕೆ ಮಾಡಿಲ್ಲ ಎಂದಿದ್ದಾರೆ.
ಜೋಶ್ ಹೇಜಲ್ವುಡ್, ಹರ್ಷಲ್ ಪಟೇಲ್, ವನಿಂದು ಹಸರಂಗ ಅವರಂತಹ ಆಟಗಾರರನ್ನು ಬಿಡುಗಡೆ ಮಾಡಿದ ಬಳಿಕ ಉತ್ತಮ ವೇಗಿ ಮತ್ತು ಸ್ಪಿನ್ನರ್ ತಂಡಕ್ಕೆ ಬರಬೇಕಿತ್ತು, ಆದರೆ ಈಗ ಆರ್ಸಿಬಿ ತಂಡದಲ್ಲಿ ಸ್ಪಿನ್ನರ್ ಕೊರತೆ ಇದೆ ಎಂದಿದ್ದಾರೆ.
Give the RCB fans half the money from the purse and a freehand at the auction table; I bet you, our fans will select a much balanced team for all conditions and might as well save some money. Cannot believe that a pro crkt team can do such elementary mistakes #IPL2024
— Dodda Ganesh | ದೊಡ್ಡ ಗಣೇಶ್ (@doddaganesha) December 20, 2023
ಅಭಿಮಾನಿಗಳನ್ನು ಹರಾಜಿಗೆ ಬಿಡಿ
ಹರಾಜಿನಲ್ಲಿ ಆರ್ಸಿಬಿ ಫ್ರಾಂಚೈಸಿ ಎಡವಟ್ಟಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಮತ್ತು ಭಾರತ ತಂಡದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಮ್ಯಾನೇಜ್ಮೆಂಟ್ಗಿಂತ ಅಭಿಮಾನಿಗಳೇ ಉತ್ತಮ ತಂಡ ಕಟ್ಟುತ್ತಾರೆ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, "ಆರ್ಸಿಬಿ ಅಭಿಮಾನಿಗಳಿಗೆ ಪರ್ಸ್ನಿಂದ ಅರ್ಧದಷ್ಟು ಹಣವನ್ನು ಕೊಟ್ಟು ಹರಾಜು ಟೇಬಲ್ನಲ್ಲಿ ಅವರನ್ನು ಬಿಡಿ. ನಿಮಗೆ ಸವಾಲು ಹಾಕುತ್ತೇನೆ, ನಮ್ಮ ಅಭಿಮಾನಿಗಳು ಎಲ್ಲಾ ಪರಿಸ್ಥಿತಿಗಳಿಗೆ ಹೆಚ್ಚು ಸಮತೋಲಿತ ತಂಡವನ್ನು ಆಯ್ಕೆ ಮಾಡುತ್ತಾರೆ ಮತ್ತು ಪರ್ಸ್ನಲ್ಲಿ ಸ್ವಲ್ಪ ಹಣವನ್ನು ಕೂಡ ಉಳಿಸಿಕೊಡುತ್ತಾರೆ. ಇಂತಹ ತಂಡವು ಅಂತಹ ಪ್ರಾಥಮಿಕ ತಪ್ಪುಗಳನ್ನು ಮಾಡಬಹುದು ಎಂದು ನಂಬಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.
ಯಶ್ ದಯಾಳ್ ಬಗ್ಗೆ ಹೇಳಿದ್ದೇನು?
ಯಾವುದೇ ಬೌಲರ್ ಕೆಟ್ಟ ದಿನವನ್ನು ಹೊಂದಬಹುದು. ಯಶ್ ದಯಾಳ್ ಅವರಿಗೂ ಒಂದು ಕೆಟ್ಟ ಓವರ್ ಇತ್ತು. ಅವರು ಇನ್ನೂ ಉತ್ತಮ ಬೌಲರ್ ಆಗಿದ್ದಾರೆ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ, ಆತನಿಗೆ 5 ಕೋಟಿ ಖರ್ಚು ಮಾಡಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
ಆರ್ಸಿಬಿ ಅಲ್ಜಾರಿ ಜೋಸೆಫ್ಗೆ 11.5 ಕೋಟಿ ಏಕೆ ಪಾವತಿಸುತ್ತದೆ ಭಾರತೀಯ ಬೌಲರ್ ಹರ್ಷಲ್ ಪಟೇಲ್ ಅವರನ್ನು ಉಳಿಸಿಕೊಳ್ಳಬಹುದಿತ್ತು ಎಂದು ಹೇಳಿದ್ದಾರೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
IPL 2026 Kannadigas: ಐಪಿಎಲ್ 19ನೇ ಆವೃತ್ತಿಯಲ್ಲಿ ಅಬ್ಬರಿಸಲು ಸಜ್ಜಾದ ಕನ್ನಡದ ಕಲಿಗಳು -
ಆರ್ಸಿಬಿ ಟ್ರೋಫಿ ಗೆಲ್ಲುವ ಬಗ್ಗೆ ಭವಿಷ್ಯ ನುಡಿದ 'ಮಿಸ್ಟರ್ 360' ಎಬಿ ಡಿವಿಲಿಯರ್ಸ್: ಡ್ರೆಸ್ಸಿಂಗ್ ರೂಮ್ ಸೀಕ್ರೆಟ್ ರಿವೀಲ್ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
ಯುಗಾದಿ ಹಬ್ಬದಂದೇ ಆರ್ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್ ಮನೆಗೆ ಮಹಾಲಕ್ಷ್ಮಿಯ ಆಗಮನ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications