Dodda Ganesh: ನೇಮಕಗೊಂಡ ಒಂದು ತಿಂಗಳಲ್ಲೇ ಕೀನ್ಯಾ ಕೋಚ್ ಸ್ಥಾನದಿಂದ ದೊಡ್ಡ ಗಣೇಶ್ ವಜಾ
ಕನ್ನಡಿಗ, ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ನೇಮಕವಾದ ಒಂದು ತಿಂಗಳಿನಲ್ಲೇ ಕೋಚ್ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಆಡಿದ ಅನುಭವ ಹೊಂದಿದ್ದ ಅವರು, ಆಗಸ್ಟ್ 14ರಂದು ಕೀನ್ಯಾ ತಂಡದ ಮುಖ್ಯ ಕೋಚ್ ಆಗಿದ್ದರು. ಲಾಮೆಕ್ ಒನ್ಯಾಂಗೊ ಅವರು ಹಂಗಾಮಿ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ ನಂತರ ದೊಡ್ಡ ಗಣೇಶ್ ಅವರನ್ನು ನೇಮಿಸಲಾಗಿತ್ತು. ತರಬೇತುದಾರರಾದ ಜೋಸೆಫ್ ಅಂಗಾರ ಮತ್ತು ಜೋಸೆಫ್ ಅಸಿಚಿ ಅವರೊಂದಿಗೆ ಗಣೇಶ್ ಅವರ ಕೋಚಿಂಗ್ ಸಿಬ್ಬಂದಿಯಾಗಿದ್ದರು.
ಮುಖ್ಯ ಕೋಚ್ ಆಗಿ ನೇಮಕವಾದ 30 ದಿನಗಳಲ್ಲೇ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ನೇಷನ್. ಆಫ್ರಿಕಾ (Nation.Africa) ವರದಿ ಮಾಡಿರುವ ಪ್ರಕಾರ, ಗಣೇಶ್ ಅವರಿಗೆ ಪತ್ರವನ್ನು ಕಳುಹಿಸಲಾಗಿದೆ. ಹೊಸ ಕಾರ್ಯವಿಧಾನಗಳನ್ನು ಅನುಸರಿಸಲು ಬಯಸಿದ ಕಾರಣ ಅವರನ್ನು ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಅವರ ನೇಮಕಾತಿಯನ್ನು ಅನುಮೋದಿಸಲು ಕಾರ್ಯಕಾರಿ ಮಂಡಳಿಯು ನಿರಾಕರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕ್ರಿಕೆಟ್ ಕೀನ್ಯಾದ ಕಾರ್ಯನಿರ್ವಾಹಕ ಮಂಡಳಿಯ ನಿರ್ಣಯದ ಪ್ರಕಾರ ಬುಧವಾರ, 28 ಆಗಸ್ಟ್ 2024 ರಂದು ಅಂಗೀಕರಿಸಲಾಗಿದೆ ಮತ್ತು ಕ್ರಿಕೆಟ್ ಕೀನ್ಯಾ ಸಂವಿಧಾನದ 5.9 ಮತ್ತು 8.4.3 ರ ಅಂತರ್-ವಿಭಾಗದ ಅಡಿಯಲ್ಲಿ ತಡೆ ಹಿಡಿಯಲಾಗಿದೆ. ಕಾರ್ಯನಿರ್ವಾಹಕ ಮಂಡಳಿಯು ನಿಮ್ಮ ಅನುಮೋದನೆಯನ್ನು ನಿರಾಕರಿಸಿದೆ ಎಂದು ನಾವು ನಿಮಗೆ ಈ ಮೂಲಕ ತಿಳಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದೆ.
ಆಗಸ್ಟ್ 7, 2024 ರಂದು ಮನೋಜ್ ಪಟೇಲ್ ಮತ್ತು ನಿಮ್ಮ ನಡುವೆ ಮಾಡಲಾದ ಒಪ್ಪಂದವನ್ನು ರದ್ದುಗೊಳಿಸಲಾಗಿದೆ. ಮೇಲಿನ ಪ್ರಕಾರ, ಕ್ರಿಕೆಟ್ ಕೀನ್ಯಾ ಹೇಳಲಾದ ಒಪ್ಪಂದಕ್ಕೆ ಬದ್ಧವಾಗಿಲ್ಲ ಎಂದು ಪತ್ರದಲ್ಲಿ ಹೇಳಿದೆ. ತಕ್ಷಣವೇ ಜಾರಿಗೆ ಬರುವಂತೆ ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡದೊಂದಿಗೆ ಯಾವುದೇ ಮುಂದಿನ ಒಟನಾಟ ಮತ್ತು ವ್ಯವಹಾರವನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಕಾರಣ ಇನ್ನೂ ಅಸ್ಪಷ್ಟ
ದೊಡ್ಡ ಗಣೇಶ್ ಅವರನ್ನು ವಜಾಗೊಳಿಸಿರುವ ಪತ್ರಕ್ಕೆ ಕ್ರಿಕೆಟ್ ಕೀನ್ಯಾದ ಮಹಿಳಾ ಕ್ರಿಕೆಟ್ ನಿರ್ದೇಶಕಿ ಪರ್ಲಿನ್ ಒಮಾಮಿ ಸಹಿ ಮಾಡಿದ್ದಾರೆ. ಆದರೂ ದೊಡ್ಡ ಗಣೇಶ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಲು ಯಾವುದೇ ನಿಖರ ಕಾರಣಗಳನ್ನು ಪತ್ರದಲ್ಲಿ ಉಲ್ಲೇಖಿಸದೇ ಇರುವುದು ಗೊಂದಲಕ್ಕೆ ಕಾರಣವಾಗಿದೆ.
ದೊಡ್ಡ ಗಣೇಶ್ ಅವರು ಮುಖ್ಯ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಲಮೆಕ್ ಒನ್ಯಾಂಗೊ ಹಂಗಾಮಿ ಮುಖ್ಯ ಕೋಚ್ ಆಗಿ ಜವಾಬ್ದಾರಿ ನಿಭಾಯಿಸಲಿದ್ದು, ಜೋಸೆಫ್ ಅಂಗಾರ ಸಹಾಯಕ ಕೋಚ್ ಆಗಿ ಕೆಲಸ ಮಾಡಲಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications