Dodda Ganesh: ನೇಮಕಗೊಂಡ ಒಂದು ತಿಂಗಳಲ್ಲೇ ಕೀನ್ಯಾ ಕೋಚ್ ಸ್ಥಾನದಿಂದ ದೊಡ್ಡ ಗಣೇಶ್ ವಜಾ
ಕನ್ನಡಿಗ, ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ನೇಮಕವಾದ ಒಂದು ತಿಂಗಳಿನಲ್ಲೇ ಕೋಚ್ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಆಡಿದ ಅನುಭವ ಹೊಂದಿದ್ದ ಅವರು, ಆಗಸ್ಟ್ 14ರಂದು ಕೀನ್ಯಾ ತಂಡದ ಮುಖ್ಯ ಕೋಚ್ ಆಗಿದ್ದರು. ಲಾಮೆಕ್ ಒನ್ಯಾಂಗೊ ಅವರು ಹಂಗಾಮಿ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ ನಂತರ ದೊಡ್ಡ ಗಣೇಶ್ ಅವರನ್ನು ನೇಮಿಸಲಾಗಿತ್ತು. ತರಬೇತುದಾರರಾದ ಜೋಸೆಫ್ ಅಂಗಾರ ಮತ್ತು ಜೋಸೆಫ್ ಅಸಿಚಿ ಅವರೊಂದಿಗೆ ಗಣೇಶ್ ಅವರ ಕೋಚಿಂಗ್ ಸಿಬ್ಬಂದಿಯಾಗಿದ್ದರು.
ಮುಖ್ಯ ಕೋಚ್ ಆಗಿ ನೇಮಕವಾದ 30 ದಿನಗಳಲ್ಲೇ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ನೇಷನ್. ಆಫ್ರಿಕಾ (Nation.Africa) ವರದಿ ಮಾಡಿರುವ ಪ್ರಕಾರ, ಗಣೇಶ್ ಅವರಿಗೆ ಪತ್ರವನ್ನು ಕಳುಹಿಸಲಾಗಿದೆ. ಹೊಸ ಕಾರ್ಯವಿಧಾನಗಳನ್ನು ಅನುಸರಿಸಲು ಬಯಸಿದ ಕಾರಣ ಅವರನ್ನು ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಅವರ ನೇಮಕಾತಿಯನ್ನು ಅನುಮೋದಿಸಲು ಕಾರ್ಯಕಾರಿ ಮಂಡಳಿಯು ನಿರಾಕರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕ್ರಿಕೆಟ್ ಕೀನ್ಯಾದ ಕಾರ್ಯನಿರ್ವಾಹಕ ಮಂಡಳಿಯ ನಿರ್ಣಯದ ಪ್ರಕಾರ ಬುಧವಾರ, 28 ಆಗಸ್ಟ್ 2024 ರಂದು ಅಂಗೀಕರಿಸಲಾಗಿದೆ ಮತ್ತು ಕ್ರಿಕೆಟ್ ಕೀನ್ಯಾ ಸಂವಿಧಾನದ 5.9 ಮತ್ತು 8.4.3 ರ ಅಂತರ್-ವಿಭಾಗದ ಅಡಿಯಲ್ಲಿ ತಡೆ ಹಿಡಿಯಲಾಗಿದೆ. ಕಾರ್ಯನಿರ್ವಾಹಕ ಮಂಡಳಿಯು ನಿಮ್ಮ ಅನುಮೋದನೆಯನ್ನು ನಿರಾಕರಿಸಿದೆ ಎಂದು ನಾವು ನಿಮಗೆ ಈ ಮೂಲಕ ತಿಳಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದೆ.
ಆಗಸ್ಟ್ 7, 2024 ರಂದು ಮನೋಜ್ ಪಟೇಲ್ ಮತ್ತು ನಿಮ್ಮ ನಡುವೆ ಮಾಡಲಾದ ಒಪ್ಪಂದವನ್ನು ರದ್ದುಗೊಳಿಸಲಾಗಿದೆ. ಮೇಲಿನ ಪ್ರಕಾರ, ಕ್ರಿಕೆಟ್ ಕೀನ್ಯಾ ಹೇಳಲಾದ ಒಪ್ಪಂದಕ್ಕೆ ಬದ್ಧವಾಗಿಲ್ಲ ಎಂದು ಪತ್ರದಲ್ಲಿ ಹೇಳಿದೆ. ತಕ್ಷಣವೇ ಜಾರಿಗೆ ಬರುವಂತೆ ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡದೊಂದಿಗೆ ಯಾವುದೇ ಮುಂದಿನ ಒಟನಾಟ ಮತ್ತು ವ್ಯವಹಾರವನ್ನು ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಕಾರಣ ಇನ್ನೂ ಅಸ್ಪಷ್ಟ
ದೊಡ್ಡ ಗಣೇಶ್ ಅವರನ್ನು ವಜಾಗೊಳಿಸಿರುವ ಪತ್ರಕ್ಕೆ ಕ್ರಿಕೆಟ್ ಕೀನ್ಯಾದ ಮಹಿಳಾ ಕ್ರಿಕೆಟ್ ನಿರ್ದೇಶಕಿ ಪರ್ಲಿನ್ ಒಮಾಮಿ ಸಹಿ ಮಾಡಿದ್ದಾರೆ. ಆದರೂ ದೊಡ್ಡ ಗಣೇಶ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಲು ಯಾವುದೇ ನಿಖರ ಕಾರಣಗಳನ್ನು ಪತ್ರದಲ್ಲಿ ಉಲ್ಲೇಖಿಸದೇ ಇರುವುದು ಗೊಂದಲಕ್ಕೆ ಕಾರಣವಾಗಿದೆ.
ದೊಡ್ಡ ಗಣೇಶ್ ಅವರು ಮುಖ್ಯ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಲಮೆಕ್ ಒನ್ಯಾಂಗೊ ಹಂಗಾಮಿ ಮುಖ್ಯ ಕೋಚ್ ಆಗಿ ಜವಾಬ್ದಾರಿ ನಿಭಾಯಿಸಲಿದ್ದು, ಜೋಸೆಫ್ ಅಂಗಾರ ಸಹಾಯಕ ಕೋಚ್ ಆಗಿ ಕೆಲಸ ಮಾಡಲಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications