Get Updates
Get notified of breaking news, exclusive insights, and must-see stories!

Ind vs Afg T20: ಇಶಾನ್ ಕಿಶನ್, ಅಯ್ಯರ್ ಆಯ್ಕೆ ಮಾಡದ್ದಕ್ಕೆ ಕಾರಣ ತಿಳಿಸಿದ ದ್ರಾವಿಡ್

2024ರ ಜೂನ್ 1ರಿಂದ ಟಿ20 ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದ್ದು, ಭಾರತ ತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜನವರಿ 11 ರಿಂದ ಭಾರತ ಅಫ್ಘಾನಿಸ್ತಾನದ ವಿರುದ್ಧ 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ.

ಮೊದಲ ಪಂದ್ಯಕ್ಕೆ ಮುನ್ನ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಾಧ್ಯಮಗಳಜೊತೆ ಮಾತನಾಡಿದ್ದು, ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುವುದಿಲ್ಲ ಎಂದು ಖಚಿತಪಡಿಸಿದರು. ಮೊಹಾಲಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಸರಣಿಯ ಆರಂಭಿಕ ಪಂದ್ಯ ನಡೆಯಲಿದೆ.

Dravid Clarifies Queries on Kishan and Iyer Ahead of 1st T20I vs Afghanistan

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ದ್ರಾವಿಡ್, ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಮಾತನಾಡಿದ್ದಾರೆ, ಶ್ರೇಯಸ್ ಅಯ್ಯರ್ ಅವರನ್ನು ಏಕೆ ಹೆಸರಿಸಲಾಗಿಲ್ಲ ಎನ್ನುವುದಕ್ಕೆ ಕಾರಣ ತಿಳಿಸಿದ್ದಾರೆ.

ಇಬ್ಬರನ್ನು ಆಯ್ಕೆ ಮಾಡದಿರಲು ಕಾರಣ

ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಅಫ್ಘಾನಿಸ್ತಾನ ಸರಣಿಗಾಗಿ ಭಾರತದ ಟಿ20 ತಂಡಕ್ಕೆ ಮರಳಿದರೆ, ಮೂರು ಟಿ20 ಗಳಿಗೆ ಪ್ರೀಮಿಯರ್ ಬ್ಯಾಟರ್‌ಗಳಾದ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಅಂತಿಮ ಟಿ20ಐ ಸರಣಿಗಾಗಿ ಭಾರತ ವಿಕೆಟ್‌ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಿದೆ.

ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಬಿಡುಗಡೆ ಮಾಡುವಂತೆ ಕಿಶನ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದ್ದರು. ವರದಿಗಳ ಪ್ರಕಾರ, ಶಿಸ್ತಿನ ಆಧಾರದ ಮೇಲೆ ಕಿಶನ್ ಅವರನ್ನು ಅಫ್ಘಾನಿಸ್ತಾನ ಸರಣಿಗೆ ಆಯ್ಕೆ ಮಾಡಲಾಗಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಕಿಶನ್ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ವರದಿಗಳನ್ನು ತಳ್ಳಿಹಾಕಿದ ಮುಖ್ಯ ಕೋಚ್ ದ್ರಾವಿಡ್ ಅವರು ಟಿ20 ತಂಡದಿಂದ ಇಶಾನ್ ಕಿಶನ್ ನಿರ್ಗಮನದ ಹಿಂದಿನ ನಿಜವಾದ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ವಿಶ್ರಾಂತಿ ಕೇಳಿದ್ದ ಇಶಾನ್ ಕಿಶನ್

ಶಿಸ್ತಿನ ಸಮಸ್ಯೆ ಇಂದೇ ಕಾರಣವಲ್ಲ. ಇಶನ್ ಕಿಶನ್ ಆಯ್ಕೆಗೆ ಲಭ್ಯರಿರಲಿಲ್ಲ. ಇಶಾನ್ ವಿರಾಮವನ್ನು ಕೋರಿದರು, ಅದನ್ನು ನಾವು ದಕ್ಷಿಣ ಆಫ್ರಿಕಾ ಪ್ರವಾಸ ಸಂದರ್ಭದಲ್ಲೇ ಒಪ್ಪಿಕೊಂಡಿದ್ದೇವೆ. ನಾವು ಅದನ್ನು ಬೆಂಬಲಿಸಿದ್ದೇವೆ. ಅವರು ಇನ್ನೂ ಆಯ್ಕೆಗೆ ಲಭ್ಯವಾಗಲಿಲ್ಲ. ಅವರು ಲಭ್ಯವಾದಾಗ, ಅವರು ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಾರೆ ಮತ್ತು ಆಯ್ಕೆಗೆ ತಮ್ಮನ್ನು ತಾವು ಲಭ್ಯವಾಗುವಂತೆ ಮಾಡುತ್ತಾರೆ, ಎಂದು ದ್ರಾವಿಡ್ ಮೊಹಾಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಶ್ರೇಯಸ್ ಅಯ್ಯರ್ ಅವರ ಕುತೂಹಲಕಾರಿ ಪ್ರಕರಣವನ್ನು ಚರ್ಚಿಸುತ್ತಾ, ಮಾಜಿ ಭಾರತ ನಾಯಕ ಮಧ್ಯಮ ಕ್ರಮಾಂಕದ ಬ್ಯಾಟರ್ ದುರದೃಷ್ಟವಶಾತ್ ಭಾರತೀಯ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದಾರೆ ಎಂದು ಒಪ್ಪಿಕೊಂಡರು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ ಅವರು ಆಯ್ಕೆಯಾಗಿಲ್ಲ ಎಂದರು.

ಅಯ್ಯರ್ ಅವರನ್ನು ತಂಡದಿಂದ ಕೈಬಿಡಲು ಯಾವುದೇ ಶಿಸ್ತಿನ ಕಾರಣವಿಲ್ಲ. ಅವರು ದಕ್ಷಿಣ ಆಫ್ರಿಕಾದಲ್ಲಿ ಟಿ20 ಪಂದ್ಯಗಳನ್ನು ಆಡಲಿಲ್ಲ, ಅವರು ಬಹಳಷ್ಟು ಬ್ಯಾಟರ್‌ಗಳು ಮತ್ತು ಎಲ್ಲರಿಗೂ ಹೊಂದಿಕೊಳ್ಳುವುದು ಸುಲಭವಲ್ಲ. ಆದ್ದರಿಂದ, ಸಂಪೂರ್ಣವಾಗಿ, ಯಾವುದೇ ಶಿಸ್ತಿನ ಕಾರಣಗಳಿಲ್ಲ. ಅಂತಹ ವಿಷಯಗಳನ್ನು ಆಯ್ಕೆಗಾರರೊಂದಿಗೆ ಚರ್ಚಿಸುವುದಿಲ್ಲ ಎಂದು ದ್ರಾವಿಡ್ ಸೇರಿಸಿದರು.

ಗುರುವಾರ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ರೋಹಿತ್ ನೇತೃತ್ವದ ಟೀಮ್ ಇಂಡಿಯಾ 1 ನೇ ಟಿ20ಐನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಅಫ್ಘಾನಿಸ್ತಾನದ ಪ್ರಮುಖ ಬೌಲರ್ ರಶೀದ್ ಖಾನ್ ಕೂಡ ಮೊದಲ ಪಂದ್ಯವನ್ನು ಆಡುತ್ತಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+