ಐಸಿಸಿ ಪ್ರಶಸ್ತಿ ಬರ ಅಂತ್ಯ; ಟೆಸ್ಟ್ ಕ್ರಿಕೆಟ್ನಲ್ಲಿ ಅವಮಾನ! 2024ರಲ್ಲಿ ಟೀಂ ಇಂಡಿಯಾ ಪ್ರದರ್ಶನ ಹೇಗಿತ್ತು?
ಭಾರತ ಕ್ರಿಕೆಟ್ ಅಭಿಮಾನಿಗಳಿಗೆ 2024ರ ವರ್ಷ ಹಲವು ಕಾರಣಗಳಿಂದ ಮರೆಯಲು ಸಾಧ್ಯವಿಲ್ಲ. ದಶಕದ ಐಸಿಸಿ ಪ್ರಶಸ್ತಿ ಬರ ಅಂತ್ಯವಾಗಿದ ಖುಷಿ ಒಂದು ಕಡೆಯಾದರೆ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾರನ್ನು ದಿಗ್ಗಜ ಕ್ರಿಕೆಟಿಗರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದು ಆಘಾತಕಾರಿ ಸಂಗತಿ, ಅದಾದ ಬಳಿಕ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲಿನ ಕಹಿ ಸಿಕ್ಕಿತು. 2024ರಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿತ್ತು ಎನ್ನುವುದರ ಹಿನ್ನೋಟ ಇಲ್ಲಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಭಾರತ ತಂಡ 2024ರ ವರ್ಷವನ್ನು ಆರಂಭಿಸಿತು. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲನೇ ಪಂದ್ಯ ಸೋತ ಭಾರತ ಬಳಿಕ ಸತತ ನಾಲ್ಕು ಪಂದ್ಯಗಳನ್ನು ಗೆದ್ದು 4-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿತು.

ಅಮೆರಿಕ ಮತ್ತು ವೆಸ್ಟ್ಇಂಡೀಸ್ನಲ್ಲಿ ಜೂನ್ನಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಭಾರತ ಅಮೋಘ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್ಗೆ ಲಗ್ಗೆಯಿಟ್ಟ ಭಾರತ ದಕ್ಷಿಣ ಆಫ್ರಿಕಾ ವಿರುದ್ಧದ ರೋಚಕ ಫೈನಲ್ ಪಂದ್ಯದಲ್ಲಿ 7 ರನ್ಗಳಿಂದ ಗೆಲುವು ಸಾಧಿಸಿತು.
ಸೂರ್ಯಕುಮಾರ್ ಯಾದವ್ ಬೌಂಡರಿ ಲೈನ್ ಸಮೀಪ ಅದ್ಭುತ ಕ್ಯಾಚ್ ಹಿಡಿದು ಡೇವಿಡ್ ಮಿಲ್ಲರ್ ಅವರನ್ನು ಔಟ್ ಮಾಡುವ ಮೂಲಕ ಭಾರತದ ಪಾಲಿನ ಹೀರೋ ಆದರು, ಸೋತೇ ಬಿಡ್ತೇವೆ ಎಂದುಕೊಂಡಿದ್ದ ಪಂದ್ಯವನ್ನು ಭಾರತ ಪಟ್ಟುಬಿಡದೆ ಹೋರಾಡಿ ಗೆದ್ದುಕೊಂಡಿತ್ತು.
ಒಂದು ದಶಕದ ಬಳಿಕ ಐಸಿಸಿ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿದ್ದ ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ನಿವೃತ್ತಿ ಘೋಷಣೆಯ ಶಾಕ್ ಸಿಕ್ಕಿತ್ತು. ತಾವಿನ್ನು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಆಡುವುದಿಲ್ಲ, ಯುವ ಕ್ರಿಕೆಟಿಗರಿಗೆ ಅವಕಾಶ ಬಿಟ್ಟುಕೊಡಬೇಕು ಎಂದು ಮೂವರು ನಿವೃತ್ತಿ ಘೋಷಣೆ ಮಾಡಿದರು.
ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತದ ಯುವ ಪಡೆ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. 5 ಪಂದ್ಯಗಳ ಟಿ20 ಸರಣಿಯನ್ನು ಭಾರತ 4-1 ಅಂತರದಲ್ಲಿ ಗೆದ್ದುಕೊಂಡಿತು. ಈ ಸರಣಿಯಲ್ಲಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಿದ್ದರು.
ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಕೋಚ್ ಅವಧಿ ಮುಕ್ತಾಯವಾಗಿದ್ದರಿಂದ ಗೌತಮ್ ಗಂಭೀರ್ ಹೊಸ ಕೋಚ್ ಆಗಿ ನೇಮಕವಾದರು. ಗಂಭೀರ್ ಸಾರಥ್ಯದಲ್ಲಿ ಭಾರತ ಶ್ರೀಲಂಕಾ ಪ್ರವಾಸ ಕೈಗೊಂಡಿತು, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಸರಣಿಯಲ್ಲಿ 3-0 ಅಂತರದಲ್ಲಿ ಗೆದ್ದರೆ, ಏಕದಿನ ಸರಣಿಯನ್ನು 2-0 ಅಂತರದಲ್ಲಿ ಸೋತು ಕೆಟ್ಟ ದಾಖಲೆ ಮಾಡಿತು. 1997 ರ ಬಳಿಕ ಮೊದಲ ಬಾರಿಗೆ ಭಾರತ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋಲು ಕಂಡಿತು.
ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋಲಿನ ಬಳಿಕ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೇಬಲ್ನಲ್ಲಿ ಮೊದಲ ಸ್ಥಾನಕ್ಕೇರಿತು. ಬಳಕ ನಡೆದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 3-0 ಅಂತರದಲ್ಲಿ ಗೆಲುವು ಸಾಧಿಸಿತು.
ನ್ಯೂಜಿಲೆಂಡ್ ವಿರುದ್ಧ ಅವಮಾನ
ಟೆಸ್ಟ್ ಕ್ರಿಕೆಟ್ನಲ್ಲಿ ಸೋಲೆ ಇಲ್ಲದೆ ಮೆರೆಯುತ್ತಿದ್ದ ಭಾರತ ತಂಡಕ್ಕೆ ನ್ಯೂಜಿಲೆಂಡ್ ಆಘಾತ ನೀಡಿತು. ಮೂರು ಪಂದ್ಯಗಳ ಸರಣಿಯನ್ನು ಭಾರತ 0-3 ಅಂತರದಲ್ಲಿ ಸೋತು ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ 3 ಪಂದ್ಯ ಸೋತ ಕೆಟ್ಟ ದಾಖಲೆ ಬರೆಯಿತು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ 3-1 ಅಂತರದಲ್ಲಿ ಗೆಲುವು ಸಾಧಿಸಿತು.
ಈಗ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವ ಸಾಧಿಸಿದ್ದು, ಎರಡನೇ ಟೆಸ್ಟ್ ಡಿಸೆಂಬರ್ 6ರಂದು ಆರಂಭವಾಗಲಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications