IND vs ENG Test: ಎರಡನೇ ಟೆಸ್ಟ್ಗೆ ಇಂಗ್ಲೆಂಡ್ ತಂಡ ಪ್ರಕಟ: ಸ್ಟಾರ್ ವೇಗಿಗೆ ಇಲ್ಲ ಸ್ಥಾನ
ಎಡ್ಜ್ಬಸ್ಟನ್ನಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆತಿಥೇಯ ಇಂಗ್ಲೆಂಡ್ ತಂಡ ಈ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ್ದು, ನಾಲ್ಕು ವರ್ಷದ ಬಳಿಕ ತಂಡದಲ್ಲಿ ಸ್ಥಾನ ಪಡೆದ ಸ್ಟಾರ್ ವೇಗಿಗೆ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಹಾಗಿದ್ದರೆ ಇಂಗ್ಲೆಂಡ್ ತಂಡದಲ್ಲಿ ಏನೆಲ್ಲಾ ಬದಲಾವಣೆ ಮಾಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಲೀಡ್ಸ್ ಅಂಗಳದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿರುವ ಇಂಗ್ಲೆಂಡ್ ಭರ್ಜರಿ ಜಯ ದಾಖಲಿಸಿದೆ. ಎರಡನೇ ಇನಿಂಗ್ಸ್ನಲ್ಲಿ ಸವಾಲು ಎಂದು ಪರಿಗಣಿಸುವ 371 ರನ್ಗಳನ್ನು ಚೇಸ್ ಮಾಡಿ ಅಬ್ಬರಿಸಿದೆ. ಈ ಮೂಲಕ ಆಂಡರ್ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈಗ ಎರಡನೇ ಟೆಸ್ಟ್ ಗೆದ್ದ ಸರಣಿಯ ಮೇಲೆ ಬಿಗ ಹಿಡಿತ ಸಾಧಿಸುವ ಪ್ಲ್ಯಾನ್ ಇಂಗ್ಲೆಂಡ್ ತಂಡದ್ದಾಗಿದೆ.

ಲೀಡ್ಸ್ ಅಂಗಳದಲ್ಲಿ ಜಯದ ನಗೆ ಬೀರಿದ ತಂಡವನ್ನೇ ಎರಡನೇ ಟೆಸ್ಟ್ಗೂ ಉಳಿಸಿಕೊಳ್ಳಲಾಗಿದೆ. ಈ ವೇಳೆ ನಾಲ್ಕು ವರ್ಷದ ಬಳಿಕ ತಂಡದಲ್ಲಿ ಸ್ಥಾನ ಪಡೆದ ಸ್ಟಾರ್ ವೇಗದ ಬೌಲರ್ ಜೋಫ್ರಾ ಆರ್ಚರ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂಬ ಸಂಶಯಗಳು ಇದ್ದವು. ಆದರೆ ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳದ ಇಂಗ್ಲೆಂಡ್ ಮೊದಲ ಟೆಸ್ಟ್ನಲ್ಲಿ ಕಣಕ್ಕೆ ಇಳಿಸಿದ ತಂಡವನ್ನೇ ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ
ಇಂಗ್ಲೆಂಡ್ ತಂಡದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಇಂಗ್ಲೆಂಡ್ ಬೌಲಿಂಗ್ ಕೊಂಚ ವೀಕ್ ಎಂದು ಹೇಳಲಾಗುತ್ತಿತ್ತು. ಆದರೆ ಇದೇ ಬೌಲರ್ಗಳು ಭಾರತದ ಮಧ್ಯಮ ಕ್ರಮಾಂಕಕ್ಕೆ ಖೆಡ್ಡಾ ತೋಡಿ ಅಬ್ಬರಿಸಿದ್ದಾರೆ. ಹೀಗಾಗಿ ಇದೇ ಬೌಲಿಂಗ್ ಲೈನ್ ಅಪ್ ಮೇಲೆ ತಂಡ ನಂಬಿಕೆಯನ್ನು ಇಟ್ಟಿದೆ. ತಂಡದ ಬ್ಯಾಟಿಂಗ್ ಕ್ರಮಾಂಕ ಬಲಾಢ್ಯವಾಗಿದೆ. ಎಲ್ಲ ಸ್ಟಾರ್ ಆಟಗಾರರು ಲಯಕ್ಕೆ ಮರಳಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ. ನಿಜಕ್ಕೂ ಇಂಗ್ಲೆಂಡ್ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳೇ ಇಲ್ಲ. ಎಂಟನೇ ಕ್ರಮಾಂಕದ ವರೆಗೂ ಬ್ಯಾಟ್ ಬೀಸಬಲ್ಲ ಬೌಲರ್ಗಳು ತಂಡದಲ್ಲಿದ್ದಾರೆ. ಅಲ್ಲದೆ ಇವರು ಅಗತ್ಯ ರನ್ ಕಲೆ ಹಾಕಿ ತಂಡಕ್ಕೆ ನೆರವಾಗಿದ್ದರಿಂದ ಯಾವುದೇ ಬದಲಾವಣೆ ಇಲ್ಲ.

ಆರಂಭಿಕ ಬೆನ್ ಡಕೆಟ್, ಮಧ್ಯಮ ಕ್ರಮಾಂಕದಲ್ಲಿ ಓಲಿ ಪೋಪ್, ಭರವಸೆಯ ಬ್ಯಾಟರ್ ಜೋ ರೂಟ್, ಮೊದಲ ಟೆಸ್ಟ್ನಲ್ಲಿ ಅಗತ್ಯ ರನ್ ಕಲೆ ಹಾಕಿ ತಂಡಕ್ಕೆ ನೆರವಾಗಿದ್ದರು.
ಎರಡನೇ ಟೆಸ್ಟ್ಗೆ ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.
-
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications