ಮೊಣಕಾಲು ಚಿಕಿತ್ಸೆಗೆ ಕೇವಲ 40 ರು. ಖರ್ಚು ಮಾಡಿದ ಧೋನಿ
ರಾಂಚಿ, ಜು.2: ಸ್ಟಾರ್ ನಟರು, ಅಗ್ರಗಣ್ಯ ಕ್ರಿಕೆಟ್ ಆಟಗಾರರು ದೇಶದ ಪ್ರತಿಷ್ಠಿತ ಆಸ್ಪತ್ರೆಗಳು ವೈದ್ಯರು ಸೇರಿದಂತೆ ಅನೇಕ ವಿಶೇಷ ಚಿಕ್ಸಿತಾ ಮಾರ್ಗಗಳ ಮೊರೆ ಹೋಗುವುದು ಸಾಮಾನ್ಯ. ಆದರೆ ದೇಶದ ಖ್ಯಾತ ಕ್ರಿಕೆಟ್ ಆಟಗಾರ ಎಂ.ಎಸ್. ಧೋನಿ ತಮ್ಮ ದೀರ್ಘಕಾಲದ ಮೊಣಕಾಲು ಸಮಸ್ಯೆಗೆ ಕೇವಲ 40 ರುಪಾಯಿಗೆ ಚಿಕಿತ್ಸೆ ಪಡೆದುಕೊಂಡು ಸುದ್ದಿಯಾಗಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೊಣಕಾಲು ಸಮಸ್ಯೆಗೆ ಆಯುರ್ವೇದ ವೈದ್ಯರ ಚಿಕಿತ್ಸೆ ಪಡೆದು 40 ರುಪಾಯಿ ಕೊಟ್ಟು ತಮ್ಮ ಮೊಣಕಾಲು ಸಮಸ್ಯೆ ಬಗೆರಹರಿಸಿ ಕೊಂಡಿದ್ದಾರೆ. ಚಿಕಿತ್ಸೆಗೆ ಬಂದ ಎಂ.ಎಸ್. ದೋನಿಗೆ ಆಯುರ್ವೇದ ವೈದ್ಯರು ಪೂರ್ಣ ಚಿಕಿತ್ಸೆ ನೀಡಿ ಒಟ್ಟು 40 ರುಪಾಯಿ ಶುಲ್ಕ ವಿಧಿಸಿದ್ದಾರೆ. ಸ್ಫೋಟಕ ಬ್ಯಾಟ್ಸ್ಮನ್ ತಿಂಗಳುಗಟ್ಟಲೆ ಮೊಣಕಾಲಿನ ನೋವಿನೊಂದಿಗೆ ಹೋರಾಡುತ್ತಿದ್ದು, ಅದರ ನಿವಾರಣೆಗೆ ವಿವಿಧೆಡೆಗಳಲ್ಲಿ ಚಿಕಿತ್ಸೆಗಾಗಿ ಓಡಾಡುತ್ತಿದ್ದರು.
ಕ್ರಿಕೆಟಿಗ ಧೋನಿ ತನ್ನ ಪೋಷಕರ ಚಿಕಿತ್ಸೆಯಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ನೋಡಿದ ನಂತರ ರಾಂಚಿಯ ಆಶ್ರಮದಲ್ಲಿ ಮೊಣಕಾಲಿನ ಚಿಕಿತ್ಸೆ ಪಡೆಯಲು ನಿರ್ಧರಿಸಿದರು. ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್ನ ದಟ್ಟ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಆಯುರ್ವೇದ ವೈದ್ಯ ವಂದನ್ ಸಿಂಗ್ ಖೇರ್ವಾರ್ ಅವರು ಕ್ರಿಕೆಟಿಗ ಎಂ.ಎಸ್. ದೋನಿಯ ಚೇತರಿಕೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ವೈದ್ಯ ವಂದನ್ ಸಿಂಗ್ ಖೇರ್ವಾರ್ ಪ್ರಕಾರ, "ಮಹೇಂದ್ರ ಸಿಂಗ್ ಧೋನಿ ಅವರು ಕ್ಯಾಲ್ಸಿಯಂ ಕೊರತೆಯಿಂದ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ನಾನು ಅವರಿಗೆ ಸಮಾಲೋಚನೆ ಶುಲ್ಕವಾಗಿ 20 ರುಪಾಯಿ ವಿಧಿಸುತ್ತೇನೆ ಹಾಗೂ ಅವರಿಗೆ 20 ರುಪಾಯಿ ಮೌಲ್ಯದ ಔಷಧಗಳನ್ನು ಶಿಫಾರಸು ಮಾಡುತ್ತೇನೆ," ಎಂದು ತಿಳಿಸಿದ್ದಾರೆ.
ಧೋನಿ ನನ್ನನ್ನು ನೋಡಲು ಬಂದಾಗ ಅವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಮಹೇಂದ್ರ ಸಿಂಗ್ ಧೋನಿ ಅವರ ಪರಿವಾರದಲ್ಲಿದ್ದವರು ವೈದ್ಯರೇ, ದೋನಿ ನಿಮ್ಮನ್ನು ನೋಡಲು ಬಂದಿದ್ದಾರೆ ಎಂದು ಹೇಳಿದರು. ಆಗ ಧೋನಿಯವರನ್ನು ನೋಡಿ ಖುಷಿಯಾಯಿತು ಎಂದು ವಂದನ್ ಸಿಂಗ್ ಖೇರ್ವಾರ್ ಹೇಳಿದ್ದಾರೆ.

ಕಳೆದ ಮೂರು ತಿಂಗಳಿಂದ ಧೋನಿ ಅವರ ಪೋಷಕರಿಗೆ ನಾನು ಚಿಕಿತ್ಸೆ ನೀಡಿದ್ದೇನೆ. ಈ ಪ್ರದೇಶದಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡಿದ್ದು, ಅವರನ್ನು ನೋಡಲು ಜನರ ಸಮೂಹ ಸೇರುತ್ತದೆ. ಆದ್ದರಿಂದ ಸಾಕಷ್ಟು ಜನದಟ್ಟಣೆ ಆಗುವುದನ್ನು ತಪ್ಪಿಸಲು ಮಹೇಂದ್ರ ಸಿಂಗ್ ಧೋನಿ ತಮ್ಮ ಕಾರಿನೊಳಗೆ ಕುಳಿತುಕೊಳ್ಳಲು ಬಯಸುತ್ತಾರೆ. ಅವರು ತನ್ನ ಔಷಧಿಯನ್ನು ತೆಗೆದುಕೊಳ್ಳುತ್ತಾರೆ. ತನ್ನ ಅಭಿಮಾನಿಗಳು ತಮ್ಮ ಜೊತೆ ಸೆಲ್ಫಿ ತೆಗೆದುಕೊಳ್ಳಲು ಬಂದಾಗ ಅವರಿಗೆ ಸೆಲ್ಫಿ ತೆಗೆದುಕೊಟ್ಟು ಹೋಗುತ್ತಾರೆ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications