ICC World Cup 2023: ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತಕ್ಕೆ 20 ವರ್ಷದ ನಂತರವೂ ಆಘಾತ!
ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್ ಪಂದ್ಯ ಬಹುತೇಕ ಅಂತ್ಯಕ್ಕೆ ಬಂದಿದೆ. ಭಾರತ ಸೋಲುವುದು ಕೂಡ ಭಾಗಶಃ ಖಚಿತವಾಗುತ್ತಿದ್ದು, ಅಭಿಮಾನಿಗಳ ಎದೆಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ. 20 ವರ್ಷದ ನಂತರ ಕೂಡ ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧ ಗೆಲ್ಲುವಷ್ಟು ಗಟ್ಟಿಯಾಗಲಿಲ್ಲವೇ? ಎನ್ನುವ ಪ್ರಶ್ನೆಯು ಕೂಡ ಈಗ ಅಭಿಮಾನಿಗಳಲ್ಲಿ ಉದ್ಭವಿಸಿದೆ.
ಅದು 23 ಮಾರ್ಚ್ 2003 ಭಾರತ & ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಶುರುವಾಗಿತ್ತು. ಮೊದಲು ಬ್ಯಾಟಿಂಗ್ ಆರಂಭ ಮಾಡಿದ್ದ ಆಸ್ಟ್ರೇಲಿಯಾ ತಂಡ ನೋಡ ನೋಡುತ್ತಲೇ 359 ರನ್ ಚಚ್ಚಿತ್ತು. ಆಸಿಸ್ ಪಡೆಗೆ ಕ್ಯಾಪ್ಟನ್ ರಿಕ್ಕಿ ಪಾಂಟಿಂಗ್ & ಮಾರ್ಟಿನ್ ಬೆನ್ನೆಲುಬಾಗಿ ನಿಂತರು. 140 ರನ್ ಕೊಡುಗೆ ನೀಡಿದ್ದ ರಿಕ್ಕಿ ಪಾಂಟಿಂಗ್ ಆಸ್ಟ್ರೇಲಿಯಾ ಟೀಂ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ದಕ್ಷಿಣ ಆಫ್ರಿಕಾ ದೇಶದ ಜೋಹಾನ್ಸ್ಬರ್ಗ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದ ಎರಡು ತಂಡಗಳು ಸೆಣೆಸಾಟ ನಡೆಸಿದರೂ ಭಾರತ ತಂಡ ಬರೋಬ್ಬರಿ 125 ರನ್ ಅಂತರದ ಸೋಲು ಕಂಡಿತ್ತು. ಈಗ ಕೂಡ ಅದೇ ಸೋಲು ರಿಪೀಟ್ ಆಗಿದೆ. ಆದರೆ ಇಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದರೆ, ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಿದೆ. ಭಾರತ ಸೋಲಿನ ಅಂಚಿಗೆ ತಲುಪುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಲ್ಲಿ ಬೇಸರ ಮನೆಮಾಡಿದೆ.
ವಿರಾಟ್ ಕೊಹ್ಲಿ ಫುಲ್ ಮಿಂಚಿಂಗ್!
ಭಾರತ ತಂಡ ಇಂದು ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಟಾಸ್ನ ಸೋತು ಬ್ಯಾಟಿಂಗ್ ಆರಂಭಿಸಿತು. ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿ & ಕೆ.ಎಲ್.ರಾಹುಲ್ ಬೆನ್ನೆಲುಬಾದರು. ಕೊಹ್ಲಿ ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲೂ 54 ರನ್ನ ಗಳಿಸುವ ಮೂಲಕ ಈ ಟೂರ್ನಿಯಲ್ಲಿ ಒಟ್ಟಾರೆ 765 ರನ್ ಗಳಿಸಿ ಚರಿತ್ರೆ ಬರೆದಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯ ಒಂದೇ ಸೀಸನ್ನಲ್ಲಿ 700ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಕೊಹ್ಲಿ ಆಗಿದ್ದಾರೆ. ಇಷ್ಟಾದರೂ ಭಾರತ ತಂಡಕ್ಕೆ ಫೈನಲ್ ಪಂದ್ಯದಲ್ಲಿ ಗೆಲುವು ತಂದುಕೊಡಲು ಆಗಲೇ ಇಲ್ಲ.

ಶತಕೋಟಿ ಭಾರತೀಯರಿಗೆ ಬೇಸರದ ಸಂಗತಿ
ಇನ್ನೇನು ಪಂದ್ಯ ಭಾಗಶಃ ಮುಗಿಯುವ ಹಂತಕ್ಕೆ ಬಂದಿದ್ದು, ಆಸ್ಟ್ರೇಲಿಯಾ ತಂಡಕ್ಕೆ ಈಗ ಲ್ಯಾಬುಶೇನ್ & ಟಿ.ಹೆಡ್ ಆಸರೆಯಾಗಿದ್ದಾರೆ. ಟಿ.ಹೆಡ್ ಶತಕ ರನ್ ಗಳಿಸಿ ಮಿಂಚಿದರೆ ಈ ಮ್ಯಾಚ್ನಲ್ಲಿ ಲ್ಯಾಬುಶೇನ್ ಕೂಡ ಮಿಂಚುತ್ತಿದ್ದಾರೆ. ಈ ಮೂಲಕ ಭಾರತ ತಂಡ ಪಂದ್ಯ ಸೋಲುವ ಹಂತ ತಲುಪಿದೆ. ಭಾರತದ ಅಭಿಮಾನಿಗಳಿಗೂ ಬೇಸರದ ಸಂಗತಿಯೊಂದು ಈ ಮೂಲಕ ಸಿಕ್ಕಿದ್ದು, ಕ್ರೀಡಾಂಗಣ ಪೂರ್ತಿ ಮೌನವೇ ಆವರಿಸುತ್ತಿದೆ.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications