ಕಾಮನ್ವೆಲ್ತ್ ಗೇಮ್ಸ್ 2022 : ಭಾರತದ ಧ್ವಜಧಾರಿಗಳಾಗಿ ಪಿ.ವಿ.ಸಿಂಧು, ಮನ್ಪ್ರೀತ್ ಸಿಂಗ್ ಆಯ್ಕೆ
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ 2022ರ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಗ್ರ ಷಟ್ಲರ್ ಮತ್ತು ಒಲಂಪಿಕ್ ಪದಕ ವಿಜೇತೆ ಪಿ.ವಿ ಸಿಂಧು ಭಾರತದ ಅಥ್ಲಿಟ್ಗಳ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತದ ತಂಡದ ಧ್ವಜದಾರಿಯಾಗಿ ಆಯ್ಕೆಯಾದ ಬಗ್ಗೆ ಪಿ.ವಿ ಸಿಂಧು ಸಂತಸ ವ್ಯಕ್ತಪಡಿಸಿದ್ದಾರೆ.
ಬರ್ಮಿಂಗ್ಹ್ಯಾಮ್ 2022 ಕಾಮನ್ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಷಟಲ್ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರನ್ನು ಟೀಮ್ ಇಂಡಿಯಾದ ಧ್ವಜಧಾರಿ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ಘೋಷಿಸಿದೆ. ಭಾರತದ ಪುರುಷರ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ಎರಡನೇ ಧ್ವಜಧಾರಿಯಾಗಲಿದ್ದಾರೆ.
"ಇಂತಹ ಕೂಟದಲ್ಲಿ ತಂಡವನ್ನು ಮುನ್ನಡೆಸುವ ಮತ್ತು ಧ್ವಜಾರೋಹಣ ಮಾಡುವ ಜವಾಬ್ದಾರಿಯನ್ನು ನೀಡಿರುವುದು ಒಂದು ದೊಡ್ಡ ಗೌರವವಾಗಿದೆ. ನಾನು ತುಂಬಾ ಸಂತೋಷವಾಗಿದ್ದೇನೆ ಮತ್ತು ನನ್ನ ಎಲ್ಲಾ ಸಹವರ್ತಿಗಳಿಗೆ ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತೇನೆ. ನನ್ನನ್ನು ಧ್ವಜಧಾರಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಒಲಿಂಪಿಕ್ ಸಂಸ್ಥೆಗೆ ಧನ್ಯವಾದ." ಎಂದು ಸಿಂಧು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಮಾಧ್ಯಮದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂತಿಮವಾಗಿ ಪಿ.ವಿ.ಸಿಂಧುಗೆ ಒಲಿದ ಅದೃಷ್ಟ
ರಿಯೊ 2016 ರ ಒಲಿಂಪಿಕ್ಸ್ ಮತ್ತು ಟೋಕಿಯೊ 2020 ರ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಸಿಂಧು ಜೊತೆಗೆ, ಇನ್ನಿಬ್ಬರು ಒಲಿಂಪಿಕ್ ಪದಕ ವಿಜೇತರಾದ ವೇಟ್ಲಿಫ್ಟರ್ ಮೀರಾಬಾಯಿ ಚಾನು ಮತ್ತು ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿತ್ತು.
ಐಒಎ ಹಂಗಾಮಿ ಅಧ್ಯಕ್ಷ ಅನಿಲ್ ಖನ್ನಾ, ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ, ಐಒಎ ಖಜಾಂಚಿ ಆನಂದೇಶ್ವರ್ ಪಾಂಡೆ ಮತ್ತು ಟೀಮ್ ಇಂಡಿಯಾ ಚೆಫ್ ಡಿ ಮಿಷನ್ ರಾಜೇಶ್ ಭಂಡಾರಿ ಅವರನ್ನೊಳಗೊಂಡ ನಾಲ್ಕು ಸದಸ್ಯರ ಸಮಿತಿಯು ಮೂವರು ಅಥ್ಲೀಟ್ಗಳನ್ನು ಹೆಸರಿಸಿತ್ತು. ಅಂತಿಮವಾಗಿ, ಖನ್ನಾ ಮತ್ತು ಮೆಹ್ತಾ ಪಿ.ವಿ ಸಿಂಧು ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಧ್ವಜಧಾರಿಯಾಗಿ ಆಯ್ಕೆ ಮಾಡಿದರು.

ಪಿ.ವಿ.ಸಿಂಧು ಆಯ್ಕೆಯಿಂದ ಸಂತಸ
ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಪ್ರತಿಕ್ರಿಯೆ ನೀಡ, "ಸಿಂಧು ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಧ್ವಜಧಾರಿಯಾಗಿ ಆಯ್ಕೆ ಮಾಡಲು ನಮಗೆ ತುಂಬಾ ಸಂತೋಷವಾಗಿದೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಪಿ.ವಿ ಸಿಂಧು ಮತ್ತು ಟೀಮ್ ಇಂಡಿಯಾದ ಇತರ ಅಥ್ಲೀಟ್ಗಳು ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತೇವೆ."
ಇದರ ಜೊತೆಗೆ, ಬರ್ಮಿಂಗ್ಹ್ಯಾಮ್ 2022 ಕಾಮನ್ವೆಲ್ತ್ ಗೇಮ್ಸ್ನ ಟೀಮ್ ಇಂಡಿಯಾ ಚೆಫ್ ಡಿ ಮಿಷನ್ ರಾಜೇಶ್ ಭಂಡಾರಿ, ಜುಲೈ 28, 2022 ರಂದು ನಿಗದಿಪಡಿಸಲಾದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಗಳ ಪರೇಡ್ನಲ್ಲಿ ಭಾರತೀಯ ತಂಡದಿಂದ ಗರಿಷ್ಠ 164 ಭಾಗವಹಿಸಬಹುದು ಎಂದು ಹೇಳಿದ್ದಾರೆ.

ಎರಡನೇ ಧ್ವಜಧಾರಿಯಾಗಿ ಮನ್ಪ್ರೀತ್ ಸಿಂಗ್ ಆಯ್ಕೆ
ಭಾರತ ಪುರುಷರ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ಅವರನ್ನು ಬರ್ಮಿಂಗ್ಹ್ಯಾಮ್ 2022 ಕಾಮನ್ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕೆ ಷಟ್ಲರ್ ಪಿವಿ ಸಿಂಧು ಅವರೊಂದಿಗೆ ಟೀಮ್ ಇಂಡಿಯಾದ ಧ್ವಜಧಾರಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಎಂದು ಘೋಷಿಸಿತು.
ಟೋಕಿಯೊ 2020 ಒಲಿಂಪಿಕ್ಸ್ನಲ್ಲಿ ಮನ್ಪ್ರೀತ್ ಸಿಂಗ್ ನಾಯಕತ್ವದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಕಾಮನ್ವೆಲ್ತ್ ಕ್ರೀಡಾಕೂಟದಲ್ಲೂ ಅವರ ನಾಯಕತ್ವದಲ್ಲಿ ಭಾರತ ಹಾಕಿ ತಂಡ ಪದಕ ಗೆಲ್ಲುವ ಭರವಸೆ ಮೂಡಿಸಿದೆ.

ಮಹಿಳಾ ಕ್ರಿಕೆಟ್ ತಂಡಕ್ಕೆ ಕೊರೊನಾ ಆಘಾತ
ಇದೇ ಮೊದಲ ಬಾರಿಗೆ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್ಗೆ ಅವಕಾಶ ನೀಡಲಾಗಿದೆ. ಆದರೆ ಕ್ರೀಡಾಕೂಟ ಆರಂಭಕ್ಕೂ ಮುನ್ನವೆ ಮಹಿಳಾ ಕ್ರಿಕೆಟ್ ತಂಡದ ಇಬ್ಬರು ಆಟಗಾರರಾದ ಬ್ಯಾಟರ್ ಎಸ್ ಮೇಘನಾ ಮತ್ತು ಆಲ್ರೌಂಡರ್ ಪೂಜಾ ವಸ್ತ್ರಕರ್ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಶುಕ್ರವಾರ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯಕ್ಕೆ ಮುಂಚಿತವಾಗಿ ದೇಶಕ್ಕೆ ಮರಳಿದ್ದಾರೆ.
ಇಬ್ಬರಿಗೂ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ನಂತರವೇ ತಂಡವನ್ನು ಸೇರಿಕೊಳ್ಳಲು ಅವಕಾಶವಿದೆ. ಹೀಗಾಗಿ ಶುಕ್ರವಾರ ನಡೆಯಲಿರುವ ಪಂದ್ಯಕ್ಕೆ ಇಬ್ಬರು ಆಟಗಾರರು ಅಲಭ್ಯರಾಗಿದ್ದಾರೆ. ಜುಲೈ 31 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಎರಡನೇ ಪಂದ್ಯ ಮತ್ತು ಆಗಸ್ಟ್ 3 ರಂದು ಬಾರ್ಬಡೋಸ್ ವಿರುದ್ಧ ಅಂತಿಮ ಲೀಗ್ ಪಂದ್ಯ ನಡೆಯಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications