Rajat Patidar: ಶಿವಂ ದುಬೆ ಬದಲಾಗಿ ಆರ್ಸಿಬಿ ಬ್ಯಾಟರ್ ಆಯ್ಕೆಯಾಗಬೇಕಿತ್ತು!
ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ 119 ರನ್ಗಳಿಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ 160 ರನ್ ಗಳಿಸುವ ಉತ್ಸಾಹದಲ್ಲಿದ್ದ ಟೀಂ ಇಂಡಿಯಾ ದಿಢೀರ್ ಕುಸಿದು 119 ರನ್ಗಳಿಗೆ ಆಲೌಟ್ ಆಯಿತು.
ರಿಷಬ್ ಪಂತ್ 42 ರನ್, ಅಕ್ಷರ್ ಪಟೇಲ್ 20 ರನ್, ರೋಹಿತ್ ಶರ್ಮಾ 13 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರ ಕೂಡ ಎರಡಂಕಿ ಮೊತ್ತ ದಾಟಲಿಲ್ಲ. ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶಿವಂ ದುಬೆ 9 ಎಸೆತಗಳಲ್ಲಿ ಕೇವಲ 3 ರನ್ ಗಳಿಸಿ ಔಟಾದರು.

ಶಿವಂ ದುಬೆ ಔಟಾದ ರೀತಿಗೆ ಈಗ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ದುಬೆ ಬದಲಾಗಿ ಆರ್ ಸಿಬಿ ಬ್ಯಾಟರ್ ರಜತ್ ಪಟಿದಾರ್ ಭಾರತ ತಂಡಕ್ಕೆ ಆಯ್ಕೆಯಾಗಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಶಿವಂ ದುಬೆ ಐಪಿಎಲ್ 2024ರ ಆರಂಭದ ಕೆಲವು ಪಂದ್ಯಗಳಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಅದರಲ್ಲೂ ಸ್ಪಿನ್ನರ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು, ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲು ಕಾರಣವಾಗಿತ್ತು.
ಶಿವಂ ದುಬೆಗಿಂತ ಪಟಿದಾರ್ ಬೆಸ್ಟ್
ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಆಯ್ಕೆ ಮಾಡಿದ ಬಳಿಕ ಶಿವಂ ದುಬೆ, ಸತತವಾಗಿ ವೈಫಲ್ಯ ಅನುಭವಿಸಿದರು. ಕ್ರಿಕೆಟ್ ತಜ್ಞರ ಪ್ರಕಾರ ಹೆಚ್ಚಾಗಿ ತಿರುಗುವ ಸ್ಪಿನ್ ಪಿಚ್ಗಳಲ್ಲಿ ಶಿವಂ ದುಬೆ ಪರಿಣಾಮಕಾರಿ ಬ್ಯಾಟರ್ ಅಲ್ಲ ಎಂದು ಅಭಿಪ್ರಾಯಪಟ್ಟರು. ದುಬೆ ನಿಂತಲ್ಲೇ ಆಡುವ ಆಟಗಾರ, ಆದರೆ ಪಟಿದಾರ್ ಕ್ರೀಸ್ನ ಬಳಸಿಕೊಂಡು ಬ್ಯಾಟಿಂಗ್ ಆಡುತ್ತಾರೆ. ಅದಕ್ಕೆ ಪಡಿದಾರ್ ಸ್ಪಿನ್ ಬೌಲರ್ ವಿರುದ್ಧ ಐಪಿಎಲ್ನಲ್ಲಿ ಅತ್ಯುತ್ತಮವಾಗಿ ಆಡಿದ್ದರು.
ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ನಲ್ಲಿ ಈ ಬಾರಿ ವಿಶ್ವಕಪ್ ನಡೆಯುತ್ತಿದ್ದು, ವೆಸ್ಟ್ ಇಂಡೀಸ್ನಲ್ಲಿ ಸ್ಪಿನ್ನರ್ ಗಳು ಮಾರಕವಾಗುತ್ತಾರೆ. ಅಂತಹ ಪಿಚ್ಗಳಲ್ಲಿ ದುಬೆಗಿಂತ ರಜತ್ ಪಟಿದಾರ್ ಪರಿಣಾಮಕಾರಿಯಾಗಿರುತ್ತಿದ್ದರು ಎನ್ನುವುದು ಅಭಿಮಾನಿಗಳ ವಾದವಾಗಿದೆ.
ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ ಅವರ ಬ್ಯಾಟಿಂಗ್ ವೈಫಲ್ಯವನ್ನು ಕೂಡ ಅಭಿಮಾನಿಗಳು ಖಂಡಿಸಿದ್ದಾರೆ. ಮುಂದಿನ ಪಂದ್ಯಗಳಲ್ಲಿ ಶಿವಂ ದುಬೆ ಬದಲು ಯಶಸ್ವಿ ಜೈಸ್ವಾಲ್ ಅವರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಿಂಕು ಸಿಂಗ್ ಅವರಿಗಾದರೂ ಅವಕಾಶ ಕೊಡಿ ಎಂದು ಹೇಳಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್












Click it and Unblock the Notifications