Get Updates
Get notified of breaking news, exclusive insights, and must-see stories!

ಕೊಲ್ಕತ್ತಾದಲ್ಲಿ ವಿಶ್ವಶ್ರೇಷ್ಠ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ನೋಡಲು ಬಿಡದಿದ್ದಕ್ಕೆ ಬಾಟಲಿ ಬೀಸಿದ ಅಭಿಮಾನಿಗಳು

Lionel Messi: ಅರ್ಜೆಂಟೈನಾದ ವಿಶ್ವಶ್ರೇಷ್ಠ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ಇಂದು (ಡಿಸೆಂಬರ್ 13) ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆ ವಿವೇಕಾನಂದ ಯುವಭಾರತಿ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಆದರೆ. ಈ ವೇಳೆ ಬಾಟಲಿಗಳ ತೂರಿದ ಘಟನೆ ನಡೆದಿದ್ದು, ಇದು ಇಡೀ ದೇಶದ ಗಮನ ಸೆಳದಿದೆ.

ಫುಟ್‌ಬಾಲ್ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿಯವರ ಬಹುನಿರೀಕ್ಷಿತ ಕೋಲ್ಕತ್ತಾ ಪ್ರವಾಸ ಹಿನ್ನೆಲೆ ಡಿಸೆಂಬರ್ 13ರ ಶನಿವಾರ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಅಭಿಮಾನಿಗಳು ಆಕ್ರೋಶಗೊಂಡು ಬಾಟಲಿಗಳನ್ನು ತೂರಿದ ಘಟನೆ ನಡೆದಿದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Fans outrage in Kolkata After Being Denied a Glimpse of Football Legend Lionel Messi

ಮೆಸ್ಸಿ ಅವರನ್ನು ವೀಕ್ಷಣೆ ಮಾಡಲು ಸಾಧ್ಯವಾಗದ ಕಾರಣ ಕೋಪಗೊಂಡ ವೀಕ್ಷಕರು ಮೈದಾನಕ್ಕೆ ಬಾಟಲಿಗಳನ್ನು ಎಸೆದು, ಬ್ಯಾನರ್‌ಗಳು ಮತ್ತು ಆಸನಗಳನ್ನು ಸಹ ಕಿತ್ತೆಸೆದಿರುವ ಘಟನೆ ನಡೆದಿದೆ. ಇದೇ ವೇಳೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ಆಕ್ರೋಶವನ್ನು ಕೂಡ ವ್ಯಕ್ತಪಡಿಸಿದ್ದಾರೆ. ತಾವು ಮಾತ್ರ ಅವರನ್ನು ಭೇಟಿ ಮಾಡಿ ಹಸ್ತಕ್ಷಾರ ಪಡೆಯಬಹುದು. ಆದರೆ, ನಾವು ಅವರನ್ನು ನೋಡಲು ಕೂಡ ಅವಕಾಶ ಮಾಡಿಕೊಡದಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಅಭಿಮಾನಿಗಳ ಆಕ್ರೋಶದಿಂದ ಸ್ಥಳದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಯಿತು. ಮೆಸ್ಸಿ ಅವರನ್ನು 10 ನಿಮಿಷಗಳಿಗಿಂತ ಕಡಿಮೆ ಕಾಲ ಕ್ರೀಡಾಂಗಣದೊಳಗೆ ಇರಿಸಲಾಗಿತ್ತು. ಬಳಿಕ ಅವರನ್ನು ಹೊರಗಡೆ ಕರೆದುಕೊಂಡು ಬರಲಾಯಿತು. ಇದೇ ವಿಚಾರಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ಬಾಟಲಿ ಹಾಗೂ ಕಲ್ಲುಗಳನ್ನು ತೂರಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಅರ್ಜೆಂಟೀನಾದ ಫುಟ್‌ಬಾಲ್‌ ಐಕಾನ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಗಂಟೆಗಟ್ಟಲೇ ಕಾದಿದ್ದಾರೆ. ಆದರೆ, ಕೆಲ ಸಮಯದವರೆಗೆ ಮಾತ್ರ ಅವರನ್ನು ಕ್ರೀಡಾಂಗಣದಲ್ಲಿ ಇರಿಸಿಕೊಂಡು ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹಸ್ತಾಕ್ಷರ ಪಡೆದು ಹೊರಗಡೆ ಕಳುಹಿಸಿದ್ದಾರೆ. ಆದರೆ, ನಮಗೆ ನೋಡಲೂ ಕೂಡ ಅವಕಾಶ ಮಾಡಿಕೊಡಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಾಟಲಿ ತೂರಿದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಹೈದರಾಬಾದ್‌ನಲ್ಲಿ ಮೆಸ್ಸಿ: ಭಾರತ ಪ್ರವಾಸದಲ್ಲಿರುವ ವಿಶ್ವಶ್ರೇಷ್ಠ ಫುಟ್‌ಬಾಲ್‌ ಆಟಗಾರ ಲಿಯೋನಲ್​ ಮೆಸ್ಸಿ ಅವರು, ಹೈದರಾಬಾದ್​ನಲ್ಲಿ ತಮ್ಮ ಕಾಲ್ಚಳಕವನ್ನು ತೋರಿ ಗಮನ ಸೆಳದರು. ಗೋಟ್​​ ಇಂಡಿಯಾ ಟೂರ್​​ನ (GOAT India Tour) ಅಂಗವಾಗಿ ಹೈದರಾಬಾದ್‌ಗೆ​ ಆಗಮಿಸಿದ್ದ ಲಿಯೋನಲ್​ ಮೆಸ್ಸಿ ತೆಲಂಗಾಣ ಸಿಎಂ ರೇವಂತ್​ ರೆಡ್ಡಿ ಜೊತೆ ಫುಟ್‌ಬಾಲ್‌​ ಆಡಿದರು. ಬಳಿಕ ಸ್ಟೇಡಿಯಂ ಸುತ್ತು ಹಾಕಿದ ಮೆಸ್ಸಿ ಅಭಿಮಾನಿಗಳತ್ತ ಚೆಂಡನ್ನ ಕಿಕ್​ ಮಾಡಿದರು.

ಈ ಕ್ಷಣವನ್ನು ಹತ್ತಿರದಿಂದ ಕಣ್ತುಂಬಿಕೊಂಡ ಹೈದರಾಬಾದ್​ ಜನ ಹಾಗೂ ಅಭಿಮಾನಿಗಳು ಸಂಸತಸಗೊಂಡಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೊಲ್ಕತ್ತಾ ಭೇಟಿ ಬಳಿಕ ಲಿಯೋನಲ್​ ಮೆಸ್ಸಿ ಅವರು ಸಂಜೆ ಸಂಜೆ 4:30ರ ಸುಮಾರಿಗೆ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅಲ್ಲಿಂದ ನೇರವಾಗಿ ತಾಜ್ ಫಲಕ್ನುಮಾ ಪ್ಯಾಲೆಸ್‌ಗೆ ಆಗಮಿಸಿದರು. ಈ ವೇಲೆ ಮೆಸ್ಸಿ ಅವರನ್ನ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಸ್ವಾಗತಿಸಿದರು. ನಂತರ, ಮೆಸ್ಸಿ ಉಪ್ಪಲ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ರೇವಂತ್ ರೆಡ್ಡಿ ಅವರೊಂದಿಗೆ ಫುಟ್‌ಬಾಲ್‌ ಆಡಿ ಗಮನ ಸೆಳೆದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+