ಕೊಲ್ಕತ್ತಾದಲ್ಲಿ ವಿಶ್ವಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ನೋಡಲು ಬಿಡದಿದ್ದಕ್ಕೆ ಬಾಟಲಿ ಬೀಸಿದ ಅಭಿಮಾನಿಗಳು
Lionel Messi: ಅರ್ಜೆಂಟೈನಾದ ವಿಶ್ವಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ಇಂದು (ಡಿಸೆಂಬರ್ 13) ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆ ವಿವೇಕಾನಂದ ಯುವಭಾರತಿ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಆದರೆ. ಈ ವೇಳೆ ಬಾಟಲಿಗಳ ತೂರಿದ ಘಟನೆ ನಡೆದಿದ್ದು, ಇದು ಇಡೀ ದೇಶದ ಗಮನ ಸೆಳದಿದೆ.
ಫುಟ್ಬಾಲ್ ಸೂಪರ್ಸ್ಟಾರ್ ಲಿಯೋನೆಲ್ ಮೆಸ್ಸಿಯವರ ಬಹುನಿರೀಕ್ಷಿತ ಕೋಲ್ಕತ್ತಾ ಪ್ರವಾಸ ಹಿನ್ನೆಲೆ ಡಿಸೆಂಬರ್ 13ರ ಶನಿವಾರ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಅಭಿಮಾನಿಗಳು ಆಕ್ರೋಶಗೊಂಡು ಬಾಟಲಿಗಳನ್ನು ತೂರಿದ ಘಟನೆ ನಡೆದಿದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಮೆಸ್ಸಿ ಅವರನ್ನು ವೀಕ್ಷಣೆ ಮಾಡಲು ಸಾಧ್ಯವಾಗದ ಕಾರಣ ಕೋಪಗೊಂಡ ವೀಕ್ಷಕರು ಮೈದಾನಕ್ಕೆ ಬಾಟಲಿಗಳನ್ನು ಎಸೆದು, ಬ್ಯಾನರ್ಗಳು ಮತ್ತು ಆಸನಗಳನ್ನು ಸಹ ಕಿತ್ತೆಸೆದಿರುವ ಘಟನೆ ನಡೆದಿದೆ. ಇದೇ ವೇಳೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ಆಕ್ರೋಶವನ್ನು ಕೂಡ ವ್ಯಕ್ತಪಡಿಸಿದ್ದಾರೆ. ತಾವು ಮಾತ್ರ ಅವರನ್ನು ಭೇಟಿ ಮಾಡಿ ಹಸ್ತಕ್ಷಾರ ಪಡೆಯಬಹುದು. ಆದರೆ, ನಾವು ಅವರನ್ನು ನೋಡಲು ಕೂಡ ಅವಕಾಶ ಮಾಡಿಕೊಡದಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಅಭಿಮಾನಿಗಳ ಆಕ್ರೋಶದಿಂದ ಸ್ಥಳದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಯಿತು. ಮೆಸ್ಸಿ ಅವರನ್ನು 10 ನಿಮಿಷಗಳಿಗಿಂತ ಕಡಿಮೆ ಕಾಲ ಕ್ರೀಡಾಂಗಣದೊಳಗೆ ಇರಿಸಲಾಗಿತ್ತು. ಬಳಿಕ ಅವರನ್ನು ಹೊರಗಡೆ ಕರೆದುಕೊಂಡು ಬರಲಾಯಿತು. ಇದೇ ವಿಚಾರಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿ ಬಾಟಲಿ ಹಾಗೂ ಕಲ್ಲುಗಳನ್ನು ತೂರಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
#WATCH | Kolkata, West Bengal: Angry fans resort to vandalism at the Salt Lake Stadium in Kolkata, alleging poor management of the event.
— ANI (@ANI) December 13, 2025
Star footballer Lionel Messi has left the Salt Lake Stadium in Kolkata.
A fan of star footballer Lionel Messi said, "Absolutely terrible… pic.twitter.com/TOf2KYeFt9
ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಗಂಟೆಗಟ್ಟಲೇ ಕಾದಿದ್ದಾರೆ. ಆದರೆ, ಕೆಲ ಸಮಯದವರೆಗೆ ಮಾತ್ರ ಅವರನ್ನು ಕ್ರೀಡಾಂಗಣದಲ್ಲಿ ಇರಿಸಿಕೊಂಡು ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹಸ್ತಾಕ್ಷರ ಪಡೆದು ಹೊರಗಡೆ ಕಳುಹಿಸಿದ್ದಾರೆ. ಆದರೆ, ನಮಗೆ ನೋಡಲೂ ಕೂಡ ಅವಕಾಶ ಮಾಡಿಕೊಡಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಾಟಲಿ ತೂರಿದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಹೈದರಾಬಾದ್ನಲ್ಲಿ ಮೆಸ್ಸಿ: ಭಾರತ ಪ್ರವಾಸದಲ್ಲಿರುವ ವಿಶ್ವಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನಲ್ ಮೆಸ್ಸಿ ಅವರು, ಹೈದರಾಬಾದ್ನಲ್ಲಿ ತಮ್ಮ ಕಾಲ್ಚಳಕವನ್ನು ತೋರಿ ಗಮನ ಸೆಳದರು. ಗೋಟ್ ಇಂಡಿಯಾ ಟೂರ್ನ (GOAT India Tour) ಅಂಗವಾಗಿ ಹೈದರಾಬಾದ್ಗೆ ಆಗಮಿಸಿದ್ದ ಲಿಯೋನಲ್ ಮೆಸ್ಸಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಜೊತೆ ಫುಟ್ಬಾಲ್ ಆಡಿದರು. ಬಳಿಕ ಸ್ಟೇಡಿಯಂ ಸುತ್ತು ಹಾಕಿದ ಮೆಸ್ಸಿ ಅಭಿಮಾನಿಗಳತ್ತ ಚೆಂಡನ್ನ ಕಿಕ್ ಮಾಡಿದರು.
ಈ ಕ್ಷಣವನ್ನು ಹತ್ತಿರದಿಂದ ಕಣ್ತುಂಬಿಕೊಂಡ ಹೈದರಾಬಾದ್ ಜನ ಹಾಗೂ ಅಭಿಮಾನಿಗಳು ಸಂಸತಸಗೊಂಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕೊಲ್ಕತ್ತಾ ಭೇಟಿ ಬಳಿಕ ಲಿಯೋನಲ್ ಮೆಸ್ಸಿ ಅವರು ಸಂಜೆ ಸಂಜೆ 4:30ರ ಸುಮಾರಿಗೆ ಶಂಷಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಅಲ್ಲಿಂದ ನೇರವಾಗಿ ತಾಜ್ ಫಲಕ್ನುಮಾ ಪ್ಯಾಲೆಸ್ಗೆ ಆಗಮಿಸಿದರು. ಈ ವೇಲೆ ಮೆಸ್ಸಿ ಅವರನ್ನ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಸ್ವಾಗತಿಸಿದರು. ನಂತರ, ಮೆಸ್ಸಿ ಉಪ್ಪಲ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ರೇವಂತ್ ರೆಡ್ಡಿ ಅವರೊಂದಿಗೆ ಫುಟ್ಬಾಲ್ ಆಡಿ ಗಮನ ಸೆಳೆದರು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ











Click it and Unblock the Notifications