India vs New Zealand: ಅಂತ ಕೆಲಸ ಮಾಡಬೇಡಿ ಪ್ಲೀಸ್! ರೋಹಿತ್ - ವಿರಾಟ್ ಕೊಹ್ಲಿಗೆ ಫ್ಯಾನ್ಸ್ ವಿಶೇಷ ಬೇಡಿಕೆ
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 4 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದು ಈ ಸಾಧನೆ ಮಾಡಿದ ಮೊದಲ ತಂಡ ಎನಿಸಿಕೊಂಡಿದೆ. ರೋಚಕ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿ ನಿಂತ ಭಾರತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿತು. 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತ 49 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 254 ರನ್ ಗಳಿಸುವ ಮೂಲಕ 4 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು.

ಚಾಂಪಿಯನ್ಸ್ ಟ್ರೋಫಿ ಗೆಲ್ಲುತ್ತಿದ್ದಂತೆ ಭಾರತದ ಆಟಗಾರರು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಭಾರತದ ಆಟಗಾರರು ಮೈದಾನದಲ್ಲಿ ಕುಣಿದು ಕುಪ್ಪಳಿಸಿದರು. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಕೆಟ್ನಲ್ಲೇ ದಾಂಡಿಯಾ ನೃತ್ಯ ಮಾಡುವ ಮೂಲಕ ಗಮನ ಸಂಭ್ರಮಿಸಿದರು. ಇಬ್ಬರ ನಡುವಿನ ಗೆಳೆತನಕ್ಕೆ ಇದು ಸಾಕ್ಷಿಯಾಗಿತ್ತು.
ಅಭಿಮಾನಿಗಳಿಗೆ ಕಾಡುತ್ತಿದೆ ಆತಂಕ!
2024ರಲ್ಲಿ ಭಾರತ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಹಲವು ಆಟಗಾರರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ವಿದಾಯ ಹೇಳಿದ್ದು ಅಭಿಮಾನಿಗಳಿಗೆ ಆಘಾತ ನೀಡಿತ್ತು. ಈಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದು ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ವಿರಾಟ್ ಕೊಹ್ಲಿ ಎಲ್ಲಿ ಏಕದಿನ ಕ್ರಿಕೆಟ್ಗೂ ವಿದಾಯ ಹೇಳುತ್ತಾರೋ ಎನ್ನುವ ಆತಂಕ ಅಭಿಮಾನಿಗಳನ್ನು ಕಾಡುತ್ತಿದೆ.
ಅಭಿಮಾನಿಗಳ ವಿಶೇಷ ಮನವಿ
ಭಾರತ ತಂಡದ ಅಭಿಮಾನಿಗಳಿಗೆ ಇನ್ನಷ್ಟು ವರ್ಷ ರೋ-ಕೋ ಜೋಡಿಯನ್ನು ಮೈದಾನದಲ್ಲಿ ನೋಡುವ ಆಸೆ ಇದೆ. ಇಬ್ಬರೂ ಈಗಲೇ ವಿದಾಯ ಹೇಳಬಾರದು ಎಂದು ಅಭಿಮಾನಿಗಳು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಮನವಿ ಮಾಡಿದ್ದಾರೆ.
2027ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು ಇಬ್ಬರೂ ಕೂಡ ಈ ಪಂದ್ಯಾವಳಿಯಲ್ಲಿ ಆಡಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. ವಿದಾಯ ಹೇಳುವುದಾದರೆ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ವಿದಾಯ ಹೇಳಲಿ, ಇನ್ನೆರಡು ವರ್ಷ ಆಡಲೇಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ವಿರಾಟ್ ಕೊಹ್ಲಿಗೆ ಈಗ 36 ವರ್ಷ, ರೋಹಿತ್ ಶರ್ಮಾಗೆ 37 ವರ್ಷ. ಇನ್ನೆರಡು ವರ್ಷ ಇಬ್ಬರೂ ಏಕದಿನ ಕ್ರಿಕೆಟ್ ಆಡುವುದು ಅನುಮಾನವಾಗಿದೆ. ವಿರಾಟ್ ಕೊಹ್ಲಿ ಇನ್ನೂ ಫಿಟ್ ಆಗಿದ್ದು ಇನ್ನೂ ಎರಡು ಮೂರು ವರ್ಷ ಕ್ರಿಕೆಟ್ ಆಡಬಹುದು. ಆದರೆ ಯುವಕರಿಗೆ ಅವಕಾಶ ನೀಡಬೇಕು ಎಂದು ರೋಹಿತ್, ಕೊಹ್ಲಿ ನಿರ್ಧರಿಸಿದರೆ ಯಾವುದೇ ಸಂದರ್ಭದಲ್ಲಿ ಏಕದಿನ ಕ್ರಿಕೆಟ್ಗೆ ವಿದಾಯ ಹೇಳುವ ಸಾಧ್ಯತೆ ಇದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications