#FIFAWorldCup: 25 ವರ್ಷಗಳಲ್ಲೇ ಗೂಗಲ್ ಸರ್ಚ್ನಲ್ಲಿ ಅತ್ಯಧಿಕ ಟ್ರಾಫಿಕ್- ಸುಂದರ್ ಪಿಚೈ
ವಾಷಿಂಗ್ಟನ್, ಡಿಸೆಂಬರ್ 19: ಭಾನುವಾರ ರಾತ್ರಿ ನಡೆದ ಫೀಫಾ ವಿಶ್ವಕಪ್ ಫೈನಲ್ ಪಂದ್ಯವು ಜಗತ್ತಿನಾದ್ಯಂತ ಪುಟ್ಬಾಲ್ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.
ಫುಟ್ಬಾಲ್ನ ಇತಿಹಾಸದಲ್ಲೇ ಅತ್ಯಂತ ರೋಚಕ ಘಟ್ಟ ತಲುಪಿದ ಕೆಲವೇ ಕೆಲ ಪಂದ್ಯಗಳಲ್ಲಿ ನಿನ್ನೆ ನಡೆದ ಪಂದ್ಯವೂ ಒಂದು. ಬಲಿಷ್ಠ ಫ್ರಾನ್ಸ್ ತಂಡವನ್ನು ಪೆನಾಲ್ಟಿ ಶೂಟೌಟ್ನಲ್ಲಿ 4-2 ಗೋಲುಗಳಿಂದ ಮಣಿಸಿದ ಅರ್ಜೆಂಟೀನಾ ವಿಶ್ವಕಪ್ ತನ್ನದಾಗಿಸಿಕೊಂಡಿತು. ಅರ್ಜೆಂಟೇನಾ ತಂಡದ ಲಯೊನೆಲ್ ಮೆಸ್ಸಿ ಆಟಕ್ಕೆ ಈಡೀ ಜಗತ್ತು ಮನಸೋತಿತು. ಮೆಸ್ಸಿ ಹಾಗೂ ಅರ್ಜೆಂಟೇನಾ ತಂಡಕ್ಕೆ ಜಗತ್ತಿನ ಪ್ರಮುಖರು ಸೇರಿದಂತೆ ಕ್ರೀಡಾಭಿಮಾನಿಗಳು ಅಭಿನಂದನೆಯ ಮಹಾಪೂರವೇ ಹರಿಬಂದಿದೆ.
ಈ ಪಂದ್ಯವು ಇಂಟರ್ನೆಟ್ನಲ್ಲೂ ಹಲವು ದಾಖಲೆಗಳಿಗೆ ಕಾರಣವಾಗಿದೆ. ಗೂಗಲ್ ಸರ್ಚ್ನಲ್ಲಿ ಅತ್ಯಂತ ಹೆಚ್ಚು ಟ್ರಾಫಿಕ್ ದಾಖಲಿಸಿದ್ದು #FIFAWorldCup.

ಗೂಗಲ್ ಕಂಪನಿಯ 25 ವರ್ಷಗಳ ಇತಿಹಾಸದಲ್ಲಿ ಅತ್ಯಧಿಕ ಟ್ರಾಫಿಕ್ ದಾಖಲಿಸಿದ್ದು ಫಿಪಾ ವಿಶ್ವಕಪ್ಗೆ ಸಂಬಂಧಿಸಿದ ಸರ್ಚ್ಗಳು.
ಗೂಗಲ್ ಕಂಪನಿ ಸಿಇಒ ಸುಂದರ್ ಪಿಚೈ ಅವರೇ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, '#FIFAWorldCup ಫೈನಲ್ ಪಂದ್ಯದ ಸಂದರ್ಭದಲ್ಲಿ ಗೂಗಲ್ ಸರ್ಚ್ನಲ್ಲಿ ಅತ್ಯಂತ ಹೆಚ್ಚು ಟ್ರಾಫಿಕ್ ದಾಖಲಾಗಿದೆ. ಇದು ಇಡೀ ಜಗತ್ತು ಒಂದೇ ವಿಚಾರದ ಕುರಿತು ಸರ್ಚ್ನಲ್ಲಿ ತೊಡಗಿಕೊಂಡಿತ್ತು' ಎಂದು ತಿಳಿಸಿದ್ದಾರೆ.

ಇದುವರೆಗಿನ ಶ್ರೇಷ್ಠ ಪಂದ್ಯಗಳಲ್ಲಿ ಇದು ಒಂದಾಗಿದೆ ಎಂದು ಅವರು ಮೊದಲು ಹೇಳಿದ್ದರು.
1998 ರಲ್ಲಿ ಸೆರ್ಗೆ ಬ್ರಿನ್ ಮತ್ತು ಲ್ಯಾರಿ ಪೇಜ್ ಅವರು ಗೂಗಲ್ ಸರ್ಚ್ ಅನ್ನು ಸ್ಥಾಪಿಸಿದರು.
2022 ರಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಮಾರುಕಟ್ಟೆ ಪಾಲನ್ನು ಹೊಂದಿರುವ Google search ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿದೆ.
ಪ್ರಧಾನಿ ಮೋದಿ ಅಭಿನಂದನೆ
ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾ ದೇಶಕ್ಕೆ ಭಾರತ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದೊಂದು ಅತ್ಯದ್ಬುತ ಸಾಧನೆ ಎಂದು ಹಾಡಿ ಹೊಗಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications