Inderjit Singh Bindra Passes Away: ಬಿಸಿಸಿಐ ಮಾಜಿ ಅಧ್ಯಕ್ಷ ಇಂದರ್ಜಿತ್ ಸಿಂಗ್ ಬಿಂದ್ರಾ ನಿಧನ
Inderjit Singh Bindra Passes Away: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಅನುಭವಿ ಕ್ರಿಕೆಟ್ ಆಡಳಿತಗಾರ ಇಂದರ್ಜಿತ್ ಸಿಂಗ್ ಬಿಂದ್ರಾ (84) ಭಾನುವಾರ (ಜನವರಿ 25) ಸಂಜೆ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು.
ದಶಕಗಳ ಕಾಲ ಭಾರತೀಯ ಕ್ರಿಕೆಟ್ ಆಡಳಿತದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಬಿಂದ್ರಾ, ಮಧ್ಯಾಹ್ನದ ಆರಂಭದಲ್ಲಿ ಅವರ ಆರೋಗ್ಯ ಹದಗೆಟ್ಟ ನಂತರ ಸಂಜೆ 6:30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಬಹು ವರದಿಗಳು ತಿಳಿಸಿವೆ. ಅವರ ಅಂತ್ಯಕ್ರಿಯೆ ಇಂದು (ಜನವರಿ 26) ಸೋಮವಾರ ನವದೆಹಲಿಯ ಲೋಧಿ ಚಿತಾಗಾರದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಇಂದರ್ಜಿತ್ ಸಿಂಗ್ ಬಿಂದ್ರಾ ಅವರು ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಪ್ರಭಾವಶಾಲಿ ಆಡಳಿತಗಾರರಲ್ಲಿ ಒಬ್ಬರು. ಅವರು 1993ರಿಂದ 1996ರ ವರೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು ಮತ್ತು ದೇಶದಲ್ಲಿ ಕ್ರೀಡೆಯ ಆಧುನಿಕ ಆಡಳಿತ ರಚನೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸಂತಾಪ ಸೂಚಿಸಿದ ಜಯ್ ಶಾ: ಇನ್ನು ಐಸಿಸಿ ಅಧ್ಯಕ್ಷ ಜಯ್ ಶಾ ಇಂದರ್ಜಿತ್ ಸಿಂಗ್ ಬಿಂದ್ರಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಬಿಸಿಬಿಐನ ಮಾಜಿ ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ಆಡಳಿತದ ದಿಗ್ಗಜ ಶ್ರೀ ಐ.ಎಸ್ ಬಿಂದ್ರಾ ಅವರ ನಿಧನಕ್ಕೆ ನಮ್ಮ ಆಳವಾದ ಸಂತಾಪಗಳು. ಅವರ ಪರಂಪರೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿ, ಓಂ ಶಾಂತಿ," ಎಂದು ಟ್ವಿಟರ್ನಲ್ಲಿ ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.
ಇಂದ್ರಜಿತ್ ಸಿಂಗ್ ಬಿಂದ್ರಾ ಸಾಧನೆಗಳು: ಇಂದ್ರಜಿತ್ ಸಿಂಗ್ ಬಿಂದ್ರಾ ಅವರು ಭಾರತೀಯ ಕ್ರಿಕೆಟ್ ಆಡಳಿತದ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಹಾಗೂ ದೃಢನಿಲುವಿನ ನಾಯಕನಾಗಿ ಗುರುತಿಸಿಕೊಂಡವರು. ದಶಕಗಳ ಕಾಲ ಕ್ರಿಕೆಟ್ ಆಡಳಿತದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಬಿಸಿಸಿಐ ಮತ್ತು ಐಸಿಸಿ ಎರಡೂ ಸಂಸ್ಥೆಗಳಲ್ಲಿ ಮಹತ್ವದ ಪಾತ್ರ ವಹಿಸಿ ಭಾರತೀಯ ಕ್ರಿಕೆಟ್ನ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
1939ರಲ್ಲಿ ಜನಿಸಿದ ಬಿಂದ್ರಾ ಅವರು, ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ನ್ನು ಸಂಘಟಿತ ಹಾಗೂ ಬಲಿಷ್ಠ ಸಂಸ್ಥೆಯಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಪಂಜಾಬ್ನಲ್ಲಿ ಕ್ರಿಕೆಟ್ಗೆ ಮಹತ್ತದ ಕೊಡುಗೆ ನೀಡುವ ದೃಷ್ಟಿಯಿಂದ ಮೊಹಾಲಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಕನಸನ್ನು ನನಸಾಗಿಸಿದವರು ಅವರೇ ಆಗಿದ್ದಾರೆ. ಆದ್ದರಿಂದ ಈ ಕ್ರೀಡಾಂಗಣವನ್ನು ಐ.ಎಸ್.ಬಿಂದ್ರಾ ಪಿಸಿಎ ಸ್ಟೇಡಿಯಂ ಎಂದು ಹೆಸರಿಡಲಾಯಿತು.
1993ರಿಂದ 1996ರವರೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಬಿಂದ್ರಾ ಅವರು, ಭಾರತೀಯ ಕ್ರಿಕೆಟ್ ಆಡಳಿತಕ್ಕೆ ವೃತ್ತಿಪರತೆ, ಶಿಸ್ತು ಮತ್ತು ವ್ಯವಸ್ಥಿತ ಕಾರ್ಯಪದ್ಧತಿಯನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಆಡಳಿತಾವಧಿಯಲ್ಲಿ ಕ್ರಿಕೆಟ್ನ ಆಂತರಿಕ ವ್ಯವಸ್ಥೆಗಳನ್ನು ಬಲಪಡಿಸುವ ಜೊತೆಗೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹೆಚ್ಚಿನ ಗೌರವ ದೊರೆಯುವಂತೆ ಕಾರ್ಯನಿರ್ವಹಿಸಿದರು. ಐಸಿಸಿ ವೇದಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಅವರು, ಜಾಗತಿಕ ಕ್ರಿಕೆಟ್ನಲ್ಲಿ ಭಾರತವನ್ನು ಬಲಪಡಿಸಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.
ದೃಢ ನಿರ್ಧಾರ ಮತ್ತು ತತ್ವಾಧಾರಿತ ಆಡಳಿತಕ್ಕಾಗಿ ಪ್ರಸಿದ್ಧರಾಗಿದ್ದ ಇಂದ್ರಜಿತ್ ಸಿಂಗ್ ಬಿಂದ್ರಾ, ಕೆಲವೊಮ್ಮೆ ವಿವಾದಾತ್ಮಕ ವ್ಯಕ್ತಿತ್ವವೆಂದು ಗುರುತಿಸಿಕೊಂಡರೂ, ಭಾರತೀಯ ಕ್ರಿಕೆಟ್ಗೆ ದೀರ್ಘಕಾಲಿಕ ಸಂಸ್ಥಾತ್ಮಕ ಬಲ ನೀಡಿದ ದಿಗ್ಗಜ ಆಡಳಿತಗಾರನಾಗಿ ಸದಾ ನೆನಪಿನಲ್ಲಿ ಉಳಿಯುತ್ತಾರೆ. ಅವರ ದೂರದೃಷ್ಟಿ ಮತ್ತು ಸೇವೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿ ಉಳಿಯಲಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications