Inderjit Singh Bindra Passes Away: ಬಿಸಿಸಿಐ ಮಾಜಿ ಅಧ್ಯಕ್ಷ ಇಂದರ್ಜಿತ್ ಸಿಂಗ್ ಬಿಂದ್ರಾ ನಿಧನ
Inderjit Singh Bindra Passes Away: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಅನುಭವಿ ಕ್ರಿಕೆಟ್ ಆಡಳಿತಗಾರ ಇಂದರ್ಜಿತ್ ಸಿಂಗ್ ಬಿಂದ್ರಾ (84) ಭಾನುವಾರ (ಜನವರಿ 25) ಸಂಜೆ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು.
ದಶಕಗಳ ಕಾಲ ಭಾರತೀಯ ಕ್ರಿಕೆಟ್ ಆಡಳಿತದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಬಿಂದ್ರಾ, ಮಧ್ಯಾಹ್ನದ ಆರಂಭದಲ್ಲಿ ಅವರ ಆರೋಗ್ಯ ಹದಗೆಟ್ಟ ನಂತರ ಸಂಜೆ 6:30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಬಹು ವರದಿಗಳು ತಿಳಿಸಿವೆ. ಅವರ ಅಂತ್ಯಕ್ರಿಯೆ ಇಂದು (ಜನವರಿ 26) ಸೋಮವಾರ ನವದೆಹಲಿಯ ಲೋಧಿ ಚಿತಾಗಾರದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಇಂದರ್ಜಿತ್ ಸಿಂಗ್ ಬಿಂದ್ರಾ ಅವರು ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಪ್ರಭಾವಶಾಲಿ ಆಡಳಿತಗಾರರಲ್ಲಿ ಒಬ್ಬರು. ಅವರು 1993ರಿಂದ 1996ರ ವರೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು ಮತ್ತು ದೇಶದಲ್ಲಿ ಕ್ರೀಡೆಯ ಆಧುನಿಕ ಆಡಳಿತ ರಚನೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸಂತಾಪ ಸೂಚಿಸಿದ ಜಯ್ ಶಾ: ಇನ್ನು ಐಸಿಸಿ ಅಧ್ಯಕ್ಷ ಜಯ್ ಶಾ ಇಂದರ್ಜಿತ್ ಸಿಂಗ್ ಬಿಂದ್ರಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಬಿಸಿಬಿಐನ ಮಾಜಿ ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ಆಡಳಿತದ ದಿಗ್ಗಜ ಶ್ರೀ ಐ.ಎಸ್ ಬಿಂದ್ರಾ ಅವರ ನಿಧನಕ್ಕೆ ನಮ್ಮ ಆಳವಾದ ಸಂತಾಪಗಳು. ಅವರ ಪರಂಪರೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿ, ಓಂ ಶಾಂತಿ," ಎಂದು ಟ್ವಿಟರ್ನಲ್ಲಿ ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.
ಇಂದ್ರಜಿತ್ ಸಿಂಗ್ ಬಿಂದ್ರಾ ಸಾಧನೆಗಳು: ಇಂದ್ರಜಿತ್ ಸಿಂಗ್ ಬಿಂದ್ರಾ ಅವರು ಭಾರತೀಯ ಕ್ರಿಕೆಟ್ ಆಡಳಿತದ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಹಾಗೂ ದೃಢನಿಲುವಿನ ನಾಯಕನಾಗಿ ಗುರುತಿಸಿಕೊಂಡವರು. ದಶಕಗಳ ಕಾಲ ಕ್ರಿಕೆಟ್ ಆಡಳಿತದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಬಿಸಿಸಿಐ ಮತ್ತು ಐಸಿಸಿ ಎರಡೂ ಸಂಸ್ಥೆಗಳಲ್ಲಿ ಮಹತ್ವದ ಪಾತ್ರ ವಹಿಸಿ ಭಾರತೀಯ ಕ್ರಿಕೆಟ್ನ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
1939ರಲ್ಲಿ ಜನಿಸಿದ ಬಿಂದ್ರಾ ಅವರು, ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ನ್ನು ಸಂಘಟಿತ ಹಾಗೂ ಬಲಿಷ್ಠ ಸಂಸ್ಥೆಯಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಪಂಜಾಬ್ನಲ್ಲಿ ಕ್ರಿಕೆಟ್ಗೆ ಮಹತ್ತದ ಕೊಡುಗೆ ನೀಡುವ ದೃಷ್ಟಿಯಿಂದ ಮೊಹಾಲಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಕನಸನ್ನು ನನಸಾಗಿಸಿದವರು ಅವರೇ ಆಗಿದ್ದಾರೆ. ಆದ್ದರಿಂದ ಈ ಕ್ರೀಡಾಂಗಣವನ್ನು ಐ.ಎಸ್.ಬಿಂದ್ರಾ ಪಿಸಿಎ ಸ್ಟೇಡಿಯಂ ಎಂದು ಹೆಸರಿಡಲಾಯಿತು.
1993ರಿಂದ 1996ರವರೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಬಿಂದ್ರಾ ಅವರು, ಭಾರತೀಯ ಕ್ರಿಕೆಟ್ ಆಡಳಿತಕ್ಕೆ ವೃತ್ತಿಪರತೆ, ಶಿಸ್ತು ಮತ್ತು ವ್ಯವಸ್ಥಿತ ಕಾರ್ಯಪದ್ಧತಿಯನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಆಡಳಿತಾವಧಿಯಲ್ಲಿ ಕ್ರಿಕೆಟ್ನ ಆಂತರಿಕ ವ್ಯವಸ್ಥೆಗಳನ್ನು ಬಲಪಡಿಸುವ ಜೊತೆಗೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹೆಚ್ಚಿನ ಗೌರವ ದೊರೆಯುವಂತೆ ಕಾರ್ಯನಿರ್ವಹಿಸಿದರು. ಐಸಿಸಿ ವೇದಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಅವರು, ಜಾಗತಿಕ ಕ್ರಿಕೆಟ್ನಲ್ಲಿ ಭಾರತವನ್ನು ಬಲಪಡಿಸಿದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.
ದೃಢ ನಿರ್ಧಾರ ಮತ್ತು ತತ್ವಾಧಾರಿತ ಆಡಳಿತಕ್ಕಾಗಿ ಪ್ರಸಿದ್ಧರಾಗಿದ್ದ ಇಂದ್ರಜಿತ್ ಸಿಂಗ್ ಬಿಂದ್ರಾ, ಕೆಲವೊಮ್ಮೆ ವಿವಾದಾತ್ಮಕ ವ್ಯಕ್ತಿತ್ವವೆಂದು ಗುರುತಿಸಿಕೊಂಡರೂ, ಭಾರತೀಯ ಕ್ರಿಕೆಟ್ಗೆ ದೀರ್ಘಕಾಲಿಕ ಸಂಸ್ಥಾತ್ಮಕ ಬಲ ನೀಡಿದ ದಿಗ್ಗಜ ಆಡಳಿತಗಾರನಾಗಿ ಸದಾ ನೆನಪಿನಲ್ಲಿ ಉಳಿಯುತ್ತಾರೆ. ಅವರ ದೂರದೃಷ್ಟಿ ಮತ್ತು ಸೇವೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿ ಉಳಿಯಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications