ಒಂದು ಕಾಲದ ಅಂತಾರಾಷ್ಟ್ರೀಯ ಅಂಪೈರ್ ಈಗ ಬಟ್ಟೆ, ಶೂ ಅಂಗಡಿ ಓನರ್
2000 ರಿಂದ 2013ರ ಅವಧಿಯಲ್ಲಿ ನೂರಾ ಎಪ್ಪತ್ತು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿದ್ದ ಆತ ಇಂದು ಪಾಕಿಸ್ತಾನದ ಲಾಹೋರ್ನ ಲಾಂಡಾ ಬಜಾರ್ನಲ್ಲಿ ಚಪ್ಪಲಿ, ಬಟ್ಟೆ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದಾರೆ. ಅಂಪೈರ್ ಆಗಿದ್ದವರು ಇಂದು ಹೊಟ್ಟೆಪಾಡಿಗಾಗಿ ಅಂಗಡಿ ಯಾಕೆ ನಡೆಸುತ್ತಿದ್ದಾರೆ, ಅವರು ಯಾರು ಎನ್ನುವ ಪ್ರಶ್ನೆ ನಿಮ್ಮಲ್ಲಿದ್ದರೆ ಉತ್ತರ ಈ ವರದಿಯಲ್ಲಿದೆ.
ಅಸಾದ್ ರೌಫ್ ಐಸಿಸಿ ಎಲೈಟ್ ಅಂಪೈರ್ ಗಳಲ್ಲಿ ಒಬ್ಬರು, ಇದು 49 ಟೆಸ್ಟ್, 98 ಏಕದಿನ ಮತ್ತು 23 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಐಪಿಎಲ್ನಲ್ಲೂ ಅಂಪೈರಿಂಗ್ ಮಾಡಿರುವ ರೌಫ್ ವಿರುದ್ಧ ಬುಕ್ಕಿಗಳಿಂದ ದುಬಾರಿ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪ ಎದುರಾಗಿತ್ತು. ಐಪಿಎಲ್ 2013ರ ಮ್ಯಾಚ್ ಫಿಕ್ಸಿಂಗ್ ವಿವಾದದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರೌಫ್ ಅವರನ್ನು ಭ್ರಷ್ಟ ಚಟುವಟಿಕೆ ಮತ್ತು ಆಟಕ್ಕೆ ಅಪಖ್ಯಾತಿ ತಂದಿದ್ದಕ್ಕಾಗಿ ಶಿಸ್ತು ಸಮಿತಿ 2016 ರಲ್ಲಿ ಅಸಾದ್ ರೌಫ್ ಮೇಲೆ ಐದು ವರ್ಷಗಳ ಕಾಲ ಬಿಸಿಸಿಐನಿಂದ ನಿಷೇಧ ಹೇರಿತ್ತು. ನಂತರ ಅಸಾದ್ ರೌಫ್ ಜೀವನವೇ ಬದಲಾಗಿ ಹೋಗಿದೆ.

ನಾನು ಯಾವುದೇ ತಪ್ಪು ಮಾಡಿಲ್ಲ ಎನ್ನುವ ರೌಫ್
ಪಾಕಿಸ್ತಾನದ ಖಾಸಗಿ ವಾಹಿನಿ ಜೊತೆ ಮಾತನಾಡಿರುವ ರೌಫ್, ನಾನು ಐಪಿಎಲ್ನಲ್ಲಿ ಉತ್ತಮ ಸಮಯವನ್ನು ಕಳೆದಿದ್ದೇನೆ, ನನ್ನ ಮೇಲಿ ಬಂದ ಫಿಕ್ಸಿಂಗ್ ಆರೋಪ ಸುಳ್ಳು ಎಂದು ಹೇಳಿದ್ದಾರೆ.
ವಿಷಯಗಳೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ, ಬಿಸಿಸಿಐ ನನ್ನ ವಿರುದ್ಧ ಆರೋಪ ಮಾಡಿತು ನಂತರ ನನ್ನನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡರು ಎಂದು ಹೇಳಿದ್ದಾರೆ.

ಈ ಮೊದಲು ಮುಂಬೈ ಮೂಲದ ಮಾಡೆಲ್ಗೆ ಲೈಗಿಂಕ ಕಿರುಕುಳ ನೀಡಿ ಮದುವೆ ಆಗುವುದಾಗಿ ಮೋಸ ಮಾಡಿದ್ದಾರೆ ಎಂಬ ಆರೋಪ ಕೂಡ ರೌಫ್ ಮೇಲೆ ಕೇಳಿಬಂದಿತ್ತು. ಆದರೆ ರೌಫ್ ಈ ಆರೋಪ ಸುಳ್ಳು ಎಂದು ಅಲ್ಲಗಳೆದಿದ್ದರು. ಈಗಲೂ ತಮ್ಮ ಮಾತನ್ನೂ ಪುನರುಚ್ಛರಿಸಿದ್ದಾರೆ.
ಲಾಹೋರ್ನಲ್ಲಿರುವ ಲಾಂಡಾ ಬಜಾರ್ ಅಗ್ಗದ ಮತ್ತು ಕೈಗೆಟುಕುವ ಬಟ್ಟೆ, ಬೂಟುಗಳು ಮತ್ತು ಇತರ ಸರಕುಗಳನ್ನು ಒದಗಿಸಲು ಪ್ರಸಿದ್ಧವಾಗಿದೆ. ಇಲ್ಲಿಯೇ ರೌಫ್ ತಮ್ಮ ಅಂಗಡಿಯನ್ನು ತೆರೆದಿದ್ದಾರೆ.
ಬಟ್ಟೆ ಮತ್ತು ಬೂಟುಗಳೊಂದಿಗೆ ತನ್ನ ಸ್ವಂತ ಅಂಗಡಿಯನ್ನು ಹೊಂದಿರುವ ರೌಫ್, ತಾನು ತನ್ನ ಸ್ವಂತ ಅಗತ್ಯಗಳನ್ನು ಪೂರೈಸಲು ಕೆಲಸ ಮಾಡುತ್ತಿಲ್ಲ, ಇದು ನನ್ನ ಸಿಬ್ಬಂದಿಯ ದೈನಂದಿನ ವೇತನ, ನಾನು ಅವರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications