ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿ ಹನಿಮೂನ್ಗೆ ಸಿದ್ದರಾದ 66 ವರ್ಷದ ಅರಣ್ ಲಾಲ್
ಕೋಲ್ಕಾತ್ತಾ, ಜುಲೈ 13: ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ಬೆಂಗಾಲ್ ಕ್ರಿಕೆಟ್ ತಂಡದ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದಾರೆ. 66 ವರ್ಷಗಳ ಮಾಜಿ ಕ್ರಿಕೆಟರ್ ಇತ್ತೀಚೆಗೆ ತಮಗಿಂತಲೂ 28 ವರ್ಷ ಚಿಕ್ಕವರಾದ ಬುಲ್ಬುಲ್ ಸಾಹಾ ಎಂಬುವವರನ್ನು ವಿವಾಹವಾಗಿದ್ದರು.
ಕೋಲ್ಕತ್ತಾದ ಹೋಟೆಲ್ ಒಂದರಲ್ಲಿ ಸಾಂಪ್ರದಾಯಿಕ ಸಮಾರಂಭದಲ್ಲಿ ಬುಲ್ಬುಲ್ ಸಾಹಾ ಅರುಣ್ ಲಾಲ್ ಮೇ 2ರಂದು ವಿವಾಹವಾಗಿದ್ದರು. ಈ ವಿವಾಹ ಕಾರ್ಯಕ್ರಮಕ್ಕೆ ಬೆಂಗಾಲ್ ತಂಡದ ಕ್ರಿಕೆಟಿಗರು ಮತ್ತು ಅಸೋಸಿಯೇಸನ್ ಆಧಿಕಾರಿಗಳು ಸೇರಿದಂತೆ ಹತ್ತಿರದ ಸಂಬಂಧಿಗಳು ಉಪಸ್ಥಿತರಿದ್ದರು.
ಅನಾರೋಗ ಪೀಡಿತ ತಮ್ಮ ಮೊದಲ ಪತ್ನಿ ಒಪ್ಪಿಗೆ ಪಡೆದೇ ವಿವಾಹವಾಗಿದಗ್ದ ಅರುಣ್ ಲಾಲ್ ತಮಗಿಂತಲೂ ಅರ್ಧ ವಯಸ್ಸು ಕಿರಿಯಳನ್ನು ವಿವಾಹವಾಗಿ ಭಾರೀ ಸುದ್ದಿಯಾಗಿದ್ದರು. ಇದೀಗ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಡುವು ಮಾಡಿಕೊಂಡಿರುವ ಅವರು ತಮ್ಮ ಮಧುಚಂದ್ರದ ಯೋಜನೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಕ್ರಿಕೆಟ್ ಮೈದಾನದಿಂದ ಸಂಪೂರ್ಣ ಬ್ರೇಕ್ ತೆಗೆದುಕೊಂಡಿರುವ ಅರುಣ್ ಲಾಲ್ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಿವುದಕ್ಕಾಗಿ ಟರ್ಕಿಗೆ ತೆರಳುವ ಯೋಜನೆ ಇರುವುದಾಗಿ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಅವರ ಪತ್ನಿ ಬುಲ್ಬುಲ್ ರಜೆ ಪಡೆಯುತ್ತಿದ್ದಂತೆ ತಕ್ಷಣದಲ್ಲೇ ಡಾರ್ಜಿಲಿಂಗ್ ಮತ್ತು ಕಾಲಿಂಪಾಂಗ್ಗೆ ಹನಿಮೂನ್ಗಾಗಿ ಪ್ರಯಾಣಿಸುವುದಾಗಿ ಅವರು ಹೇಳಿಕೊಂಡಿದ್ದಾರೆ.
ನಾನು ನನ್ನ ಹೆಂಡತಿಯ ಜೊತೆಗೆ ಟರ್ಕಿಗೆ ಹೋಗಬೇಕೆಂದು ಬಯಸಿದ್ದೇನೆ. ಮದುವೆಯಾದ ಮೇಲೆ ನಾನೂ ಎಲ್ಲಿಗೂ ಪ್ರಯಾಣಿಸಿಲ್ಲ. ನಾನು ನನ್ನ ಪತ್ನಿಗಾಗಿ ಮತ್ತು ನನಗಾಗಿ ಕೆಲವು ಸಮಯ ಕೊಡಬೇಕೆಂದುಕೊಂಡಿದ್ದೇನೆ. ಬುಲ್ ಬುಲ್ ಶಾಲಾ ಶಿಕ್ಷಕಿಯಾಗಿದ್ದಾರೆ, ಅವಳು ರಜೆ ಪಡೆಯುತ್ತಿದ್ದಂತೆ, ಆದಷ್ಟು ಬೇಗ ಹೊರ ಹೋಗುತ್ತೇವೆ ಎಂದು ಅರುಣ್ ಲಾಲ್ ತಿಳಿಸಿದ್ದಾರೆ.
ಬಂಗಾಳದ ಮುಖ್ಯ ತರಬೇತುದಾರರಾಗಿ ಅವರ ಯಶಸ್ವಿ ಸಮಯವನ್ನು ಕಳೆದ ನಂತರ ಭವಿಷ್ಯದ ಯೋಜನೆಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಅರುಣ್ ಲಾಲ್, ತಾನೂ ಯಾವುದಾದರೂ ತಂಡ ಬಯಸಿದರೆ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಲು ಸಿದ್ಧನಿದ್ದೇನೆ ಎಂದು ಸುಳಿವು ನೀಡಿದರು. ಅಲ್ಲದೇ ಕಾಮೆಂಟರಿ ಬಾಕ್ಸ್ಗೆ ಮರಳುವುದು ಅವರ ಬಳಿಯಿರುವ ಮತ್ತೊಂದು ಆಯ್ಕೆ ಎಂದು ಹೇಳಿದ್ದಾರೆ.
ಅರುಣ್ ಲಾಲ್ ಮೂಲತಃ ಉತ್ತರ ಪ್ರದೇಶದ ಮೊರಾದಾಬಾದ್ನವರು. ಅವರು ಭಾರತ ತಂಡದ ಪರ 16 ಟೆಸ್ಟ್, 13 ODI ಪಂದ್ಯಗಳನ್ನಾಡಿದ್ದು, ಕ್ರಮವಾಗಿ 729 ಮತ್ತು 122 ರನ್ ಗಳಿಸಿದರು. ಅರುಣ್ ಲಾಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಯಶಸ್ವಿಯಾಗದಿದ್ದರೂ, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 156 ಪಂದ್ಯಗಳನ್ನಾಡಿದ್ದು, 30 ಶತಕಗಳ ಸಹಿತ 10,421 ರನ್ ಗಳಿಸಿದ್ದಾರೆ. ನಿವೃತ್ತಿ ನಂತರ ಕಾಮೆಂಟೇಟರ್ ಆಗಿದ್ದ ಅವರಿಗೆ 6 ವರ್ಷಗಳ ಹಿಂದೆ ಕ್ಯಾನ್ಸರ್ ಕಾಣಿಸಿಕೊಂಡ ನಂತರ ಕಾಮೆಂಟರಿಗೆ ಗುಡ್ ಬೈ ಹೇಳಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
-
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications