ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಜಿ.ಎಂ ತೇಜ್ ಕುಮಾರ್ ಆಯ್ಕೆ
ಮೈಸೂರು, ಸೆಪ್ಟೆಂಬರ್ 30: ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (KSCA) ವಾರ್ಷಿಕ ಮಹಾಸಭೆಯಲ್ಲಿ ಗ್ರ್ಯಾಂಡ್ ಮಾಸ್ಟರ್ ತೇಜ್ ಕುಮಾರ್ ಅವರನ್ನು ಸಂಘದ ನೂತನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇದು ಇಡೀ ಕರ್ನಾಟಕದ ಚೆಸ್ ಸಮುದಾಯಕ್ಕೆ ಮಹತ್ವದ ಮತ್ತು ಹೆಮ್ಮೆಯ ಕ್ಷಣವಾಗಿದೆ.
ಕರ್ನಾಟಕದ ಮೊದಲ ಗ್ರ್ಯಾಂಡ್ಮಾಸ್ಟರ್, ಹೆಸರಾಂತ ಚೆಸ್ ಚಾಂಪಿಯನ್ ಮತ್ತು ಚೆದುರಂಗ ಕ್ಷೇತ್ರದ ಗೌರವಾನ್ವಿತ ವ್ಯಕ್ತಿ ತೇಜ್ಕುಮಾರ್ ಎಂಎಸ್ ಅವರು ನಿರ್ಗಮಿತ ಕಾರ್ಯದರ್ಶಿ ಅರವಿಂದ್ ಶಾಸ್ತ್ರಿ ಅವರಿಂದ ನಾಯಕತ್ವದ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಅರವಿಂದ್ ಶಾಸ್ತ್ರಿಯವರು ತಮ್ಮ ಅಧಿಕಾರಾವಧಿಯಲ್ಲಿ ಈಗಾಗಲೇ ಕೆಎಸ್ಸಿಎಯನ್ನು ಉನ್ನತ ಮಟ್ಟಕ್ಕೆ ಏರಿಸಿದ್ದಾರೆ.

ತೇಜ್ಕುಮಾರ್ ಅವರ ಈ ಆಯ್ಕೆಯು ಕೆಎಸ್ಸಿಎಯನ್ನು ಮತ್ತಷ್ಟು ಬೆಳವಣಿಗೆ ಮತ್ತು ಉತ್ಕೃಷ್ಟತೆಯ ಕಡೆಗೆ ಮಾರ್ಗದರ್ಶನ ಮಾಡುವ ಸಾಮರ್ಥ್ಯದ ಮೇಲೆ ಸದಸ್ಯರು ಹೊಂದಿರುವ ನಂಬಿಕೆ ಮತ್ತು ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ.
ಮೈಸೂರು ಜಿಲ್ಲಾ ಚೆಸ್ ಅಸೋಸಿಯೇಷನ್ (MDCA)ನ ನೂತನ ಪದಾಧಿಕಾರಿಗಳು ಮತ್ತು ನೂತನ ಅಧ್ಯಕ್ಷರಾದ ಡಾ.ವೇಣುಗೋಪಾಲ್ ಅವರು ಜಿ.ಎಂ.ತೇಜಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. 'ಜಿ.ಎಂ. ತೇಜಕುಮಾರ್ ಅವರ ಗೌರವಾನ್ವಿತ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಚೆಸ್ ಸಮುದಾಯವು ಅಭಿವೃದ್ಧಿ ಹೊಂದುತ್ತದೆ ಎಂದು ನಮಗೆ ವಿಶ್ವಾಸವಿದೆ. ಅವರ ಮಾರ್ಗದರ್ಶನದಲ್ಲಿ ಚದುರಂಗ ಕ್ಷೇತ್ರ ಅತ್ಯುನ್ನತ ಪ್ರಗತಿಯನ್ನು ಸಾಧಿಸಲಿದೆ 'ಎಂದು ಅವರು ಹೇಳಿದರು.
ಜಿ.ಎಂ ತೇಜಕುಮಾರ್ ಅವರ ಅಪಾರ ಅನುಭವ, ಅವರ ಸಮರ್ಪಣಾಭಾವ ಮತ್ತು ಆಟದ ಮೇಲಿನ ಉತ್ಸಾಹವು ಕರ್ನಾಟಕದಲ್ಲಿ ಚೆಸ್ಗೆ ಉತ್ತೇಜಕ ಭವಿಷ್ಯವನ್ನು ನೀಡುತ್ತದೆ. ಅವರ ನಾಯಕತ್ವವು ನವೀನ ಆಲೋಚನೆಗಳನ್ನು ತರುವ ನಿರೀಕ್ಷೆಯಿದೆ. ಅದು ಎಲ್ಲಾ ಹಂತಗಳಲ್ಲಿ ಚೆಸ್ ಪ್ರತಿಭೆಗಳನ್ನು ಉತ್ತೇಜಿಸುತ್ತದೆ ಮತ್ತು ಭಾರತದಲ್ಲಿ ಚೆಸ್ನ ಕೇಂದ್ರವಾಗಿ ಕರ್ನಾಟಕದ ಸ್ಥಾನವನ್ನು ಗಟ್ಟಿಗೊಳಿಸುತ್ತದೆ ಎನ್ನುವುದು ಚೆಸ್ ಪ್ರೇಮಿಗಳ ಬಹುದೊಡ್ಡ ನಿರೀಕ್ಷೆಯಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications